ಲಖನೌ: ಸತತ ಐದು ಸರಣಿ ಸೋಲುಗಳಿಂದ ಕಂಗೆಟ್ಟಿದ್ದ ಚೆನ್ನೈ ಸೂಪರ್ ಕಿಂಗ್ಸ್ಗೆ ಏಳನೇ ಪಂದ್ಯದಲ್ಲಿ ಗೆಲುವು ಸಿಕ್ಕಿದೆ. ನಾಯಕ ಎಂ.ಎಸ್ ಧೋನಿ ಹಾಗೂ ಶಿವಂ ದುಬೆ ಅವರ ಜುಗಲ್ ಬಂದಿ ಹೋರಾಟಕ್ಕೆ ಗೆಲುವು ಸಿಕ್ಕಿದ್ದು, ಸಿಎಸ್ಕೆ 5 ವಿಕೆಟ್ಗಳಿಂದ ಲಖನೌ ಸೂಪೃ ಜೈಂಟ್ಸ್ ತಂಡವನ್ನು ಮಣಿಸಿದೆ.
ಇಲ್ಲಿನ ಏಕನಾ ಕ್ರೀಡಾಂಗಣದಲ್ಲಿ ನಡೆದ ಲಖನೌ ಸೂಪರ್ ಜೈಂಟ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಲಖನೌ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತು. ಈ ಮೊತ್ತ ಬೆನ್ನತ್ತಿದ ಚೆನ್ನೈ 19.3 ಓವರ್ಗಳಲ್ಲಿ 5 ವಿಕೆಟ್ ಬಾಕಿ ಇರುವಂತೆ ಗೆಲುವಿನ ದಡ ಸೇರಿತು.
ಲಖನೌ ಇನ್ನಿಂಗ್ಸ್: ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಲಖನೌಗೆ ನಿರೀಕ್ಷಿತ ಆರಂಭ ಕಂಡುಬರಲಿಲ್ಲ. ಮಾರ್ಕ್ರಂ 6(6) ರನ್ಗಳಿಸಿ ಔಟಾದರೇ, ಭರವಸೆ ಆಟಗಾರ ಪೂರನ್ ಕೇವಲ 8(9) ರನ್ ಗಳಿಸಿ ಪೆವಿಲಿಯನ್ ಸೇರಿದರು.
ನಂತರ ಜೊತೆಯಾದ ಮಿಚೆಲ್ ಮಾರ್ಷ್ ಮತ್ತು ನಾಯಕ ರಿಷಭ್ ಪಂತ್ ತಂಡಕ್ಕೆ ಚೇತರಿಕೆ ಆಟವಾಡಿದರು. ಮಾರ್ಷ್ 30(25), ನಾಯಕ ಪಂತ್ 49 ಎಸೆತ, 4 ಬೌಂಡರಿ, 4 ಸಿಕ್ಸರ್ ಸಹಿತ 63 ರನ್ ಬಾರಿಸಿ ಔಟಾದರು.
ಉಳಿದಂತೆ ಬದೋನಿ 22(17), ಅಬ್ದುಲ್ ಸಮದ್ 20(11), ಶಾರ್ದುಲ್ ಠಾಕೂರ್ 6(4) ರನ್ ಗಳಿಸಿದರು.
ಚೆನ್ನೈ ಪರ ರವೀಂದ್ರ ಜಡೇಜಾ ಹಾಗೂ ಪತಿರಣ ತಲಾ ಎರಡು ವಿಕೆಟ್, ಖಲೀಲ್ ಅಹ್ಮದ್ ಮತ್ತು ಅನ್ಸುಲ್ ತಲಾ ಒಂದೊಂದು ವಿಕೆಟ್ ಪಡೆದರು.
ಚೆನ್ನೈ ಇನ್ನಿಂಗ್ಸ್: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಚೆನ್ನೈಗೆ ಉತ್ತಮ ಆರಂಭ ದೊರೆಯಿತು. ರಶೀದ್ 27(19), ರಚಿನ್ ರವೀಂದ್ರ 37(22) ರನ್ ಗಳಿಸಿ ಔಟಾದರು. ರಾಹುಲ್ ತ್ರಿಪಾಟಿ 9(10), ಜಡೇಜಾ 7(11), ವಿಜಯ್ ಶಂಕರ್ 9(8) ರನ್ ಗಳಿಸಿ ಔಟಾದರು.
ಕೊನೆಯಲ್ಲಿ ಒಂದಾದ ನಾಯಕ ಎಂ.ಎಸ್ ಧೋನಿ ಹಾಗೂ ಶುವಂ ದುಬೆ ಚೆನ್ನೈ ಗೆಲುವಿಗೆ ಸಹಕರಿಸಿದರು. ಈ ಜೋಡಿ ಐವತ್ತು ರನ್ಗಳ ಜೊತೆಯಾಟ ನೀಡಿದರು. ಶಿವಂ ದುಬೆ ನಾಟ್ಔಟ್ ಆಗಿ 37 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್ ಸಹಿತ 43 ರನ್ ಗಳಿಸಿದರೇ, ಧೋನಿ ಔಟಾಗದೇ 11 ಎಸೆತಗಳಲ್ಲಿ 4 ಫೊರ್ ಹಾಗೂ 1 ಸಿಕ್ಸರ್ ಸಹಿತ 26 ರನ್ ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.
ಲಖನೌ ಪರ ರವಿ ಬಿಷ್ಣೋಯಿ ಎರಡು ವಿಕೆಟ್, ದಿಗ್ವೇಶ್, ಆವೇಶ್ ಖಾನ್ ಮತ್ತು ಮಾರ್ಕ್ರಂ ತಲಾ ಒಂದೊಂದು ವಿಕೆಟ್ ಪಡೆದರು.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…