ಕ್ರೀಡೆ

IPL 2025 | ಲಖನೌ ವಿರುದ್ಧ ಚೆನ್ನೈಗೆ ಜಯ

ಲಖನೌ: ಸತತ ಐದು ಸರಣಿ ಸೋಲುಗಳಿಂದ ಕಂಗೆಟ್ಟಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಏಳನೇ ಪಂದ್ಯದಲ್ಲಿ ಗೆಲುವು ಸಿಕ್ಕಿದೆ. ನಾಯಕ ಎಂ.ಎಸ್‌ ಧೋನಿ ಹಾಗೂ ಶಿವಂ ದುಬೆ ಅವರ ಜುಗಲ್‌ ಬಂದಿ ಹೋರಾಟಕ್ಕೆ ಗೆಲುವು ಸಿಕ್ಕಿದ್ದು, ಸಿಎಸ್‌ಕೆ 5 ವಿಕೆಟ್‌ಗಳಿಂದ ಲಖನೌ ಸೂಪೃ ಜೈಂಟ್ಸ್‌ ತಂಡವನ್ನು ಮಣಿಸಿದೆ.

ಇಲ್ಲಿನ ಏಕನಾ ಕ್ರೀಡಾಂಗಣದಲ್ಲಿ ನಡೆದ ಲಖನೌ ಸೂಪರ್‌ ಜೈಂಟ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಣ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಲಖನೌ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 166 ರನ್‌ ಗಳಿಸಿತು. ಈ ಮೊತ್ತ ಬೆನ್ನತ್ತಿದ ಚೆನ್ನೈ 19.3 ಓವರ್‌ಗಳಲ್ಲಿ 5 ವಿಕೆಟ್‌ ಬಾಕಿ ಇರುವಂತೆ ಗೆಲುವಿನ ದಡ ಸೇರಿತು.

ಲಖನೌ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಲಖನೌಗೆ ನಿರೀಕ್ಷಿತ ಆರಂಭ ಕಂಡುಬರಲಿಲ್ಲ. ಮಾರ್ಕ್ರಂ 6(6) ರನ್‌ಗಳಿಸಿ ಔಟಾದರೇ, ಭರವಸೆ ಆಟಗಾರ ಪೂರನ್‌ ಕೇವಲ 8(9) ರನ್‌ ಗಳಿಸಿ ಪೆವಿಲಿಯನ್‌ ಸೇರಿದರು.

ನಂತರ ಜೊತೆಯಾದ ಮಿಚೆಲ್‌ ಮಾರ್ಷ್‌ ಮತ್ತು ನಾಯಕ ರಿಷಭ್‌ ಪಂತ್‌ ತಂಡಕ್ಕೆ ಚೇತರಿಕೆ ಆಟವಾಡಿದರು. ಮಾರ್ಷ್‌ 30(25), ನಾಯಕ ಪಂತ್‌ 49 ಎಸೆತ, 4 ಬೌಂಡರಿ, 4 ಸಿಕ್ಸರ್‌ ಸಹಿತ 63 ರನ್‌ ಬಾರಿಸಿ ಔಟಾದರು.

ಉಳಿದಂತೆ ಬದೋನಿ 22(17), ಅಬ್ದುಲ್‌ ಸಮದ್‌ 20(11), ಶಾರ್ದುಲ್‌ ಠಾಕೂರ್‌ 6(4) ರನ್‌ ಗಳಿಸಿದರು.

ಚೆನ್ನೈ ಪರ ರವೀಂದ್ರ ಜಡೇಜಾ ಹಾಗೂ ಪತಿರಣ ತಲಾ ಎರಡು ವಿಕೆಟ್‌, ಖಲೀಲ್‌ ಅಹ್ಮದ್‌ ಮತ್ತು ಅನ್ಸುಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಚೆನ್ನೈ ಇನ್ನಿಂಗ್ಸ್‌: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಚೆನ್ನೈಗೆ ಉತ್ತಮ ಆರಂಭ ದೊರೆಯಿತು. ರಶೀದ್‌ 27(19), ರಚಿನ್‌ ರವೀಂದ್ರ 37(22) ರನ್‌ ಗಳಿಸಿ ಔಟಾದರು. ರಾಹುಲ್‌ ತ್ರಿಪಾಟಿ 9(10), ಜಡೇಜಾ 7(11), ವಿಜಯ್‌ ಶಂಕರ್‌ 9(8) ರನ್‌ ಗಳಿಸಿ ಔಟಾದರು.

ಕೊನೆಯಲ್ಲಿ ಒಂದಾದ ನಾಯಕ ಎಂ.ಎಸ್‌ ಧೋನಿ ಹಾಗೂ ಶುವಂ ದುಬೆ ಚೆನ್ನೈ ಗೆಲುವಿಗೆ ಸಹಕರಿಸಿದರು. ಈ ಜೋಡಿ ಐವತ್ತು ರನ್‌ಗಳ ಜೊತೆಯಾಟ ನೀಡಿದರು. ಶಿವಂ ದುಬೆ ನಾಟ್‌ಔಟ್‌ ಆಗಿ 37 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್‌ ಸಹಿತ 43 ರನ್‌ ಗಳಿಸಿದರೇ, ಧೋನಿ ಔಟಾಗದೇ 11 ಎಸೆತಗಳಲ್ಲಿ 4 ಫೊರ್‌ ಹಾಗೂ 1 ಸಿಕ್ಸರ್‌ ಸಹಿತ 26 ರನ್‌ ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.

ಲಖನೌ ಪರ ರವಿ ಬಿಷ್ಣೋಯಿ ಎರಡು ವಿಕೆಟ್‌, ದಿಗ್ವೇಶ್‌, ಆವೇಶ್‌ ಖಾನ್‌ ಮತ್ತು ಮಾರ್ಕ್ರಂ ತಲಾ ಒಂದೊಂದು ವಿಕೆಟ್‌ ಪಡೆದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

41 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

46 mins ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

50 mins ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

11 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

13 hours ago