ಕ್ರೀಡೆ

IPL 2025 | ಸೂಪರ್‌ ಓವರ್‌ನಲ್ಲಿ ರಾಜಸ್ಥಾನ್‌ ಮಣಿಸಿದ ಡೆಲ್ಲಿ

ಹೊಸದಿಲ್ಲಿ : 2025ನೇ ಸಾಲಿನ ಐಪಿಎಲ್‌ನ 18ನೇ ಆವೃತ್ತಿಯ 32ನೇ ಪಂದ್ಯ ಸೂಪರ್‌ ಓವರ್‌ನಲ್ಲಿ ಅಂತ್ಯ ಕಂಡಿದ್ದು, ಈ ಪಂದ್ಯದಲ್ಲಿ ರಾಜಸ್ಥಾನ್‌ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್‌ ಮಣಿಸುವಲ್ಲಿ ಯಶಸ್ವಿಯಾಗಿದೆ.

ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್‌ ರಾಯಲ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ನಡುವಣ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 188 ರನ್‌ ಗಳಿಸಿತು. ಈ ಮೊತ್ತ ಬೆನ್ನಟ್ಟಿದ ರಾಜಸ್ಥಾನ್‌ 20 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 188 ರನ್‌ ಗಳಿಸಿ ಪಂದ್ಯವನ್ನು ಟೈ ಮಾಡಿಕೊಂಡಿತು.

ಸೂಪರ್‌ ಓವರ್‌ನಲ್ಲಿ ಮೊದಲು ಬ್ಯಾಟ್‌ ಮಾಡಿದ ಆರ್‌ಆರ್‌ 12 ರನ್‌ ಗಳಿಸಿದರೇ, ಇದನ್ನು ಬೆನ್ನಟಿದ ಡೆಲ್ಲಿ ಕೇವಲ 4 ಎಸೆತಗಳಲ್ಲಿ 13 ರನ್‌ ಗಳಿಸಿ ಗೆದ್ದು ಬೀಗಿತು.

ಡೆಲ್ಲಿ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿಗೆ ಆರಂಭಿಕ ಆಘಾತ ಎದುರಾಯಿತು. ಮ್ಯಾಕ್‌ಗಾರ್ಕ್‌ 9(6) ರನ್‌ ಗಳಿಸಿ ಔಟಾದರೇ, ಕಳೆದ ಪಂದ್ಯದಲ್ಲಿ ಅರ್ಧಶತಕ ದಾಖಲಿಸಿದ್ದ ಕರುಣ್‌ ನಾಯರ್‌ ಡಕ್‌ಔಟ್‌ ಆಗಿ ಹೊರ ನಡೆದರು.

ಅಭಿಷೇಕ್‌ 49(37), ಕೆ.ಎಲ್‌ ರಾಹುಲ್‌ 38(32), ನಾಯಕ ಅಕ್ಷರ್‌ ಪಟೇಲ್‌ 34(14) ರನ್‌ ಗಳಿಸಿದರು. ಸ್ಟಬ್ಸ್‌ ಔಟಾಗದೇ 34(18) ರನ್‌ ಗಳಿಸಿದರೇ, ಅಶುತೋಶ್‌ ಶರ್ಮಾ ನಾಟ್‌ಔಟ್‌ ಆಗಿ 15(11) ರನ್‌ ಗಳಿಸಿದರು.

ರಾಜಸ್ಥಾನ್‌ ಪರ ಜೋಫ್ರಾ ಆರ್ಚರ್‌ ಎರಡು ವಿಕೆಟ್‌, ತೀಕ್ಷಣ ಮತ್ತು ಹಸರಂಗ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

ರಾಜಸ್ಥಾನ್‌ ಇನ್ನಿಂಗ್ಸ್‌: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್‌ಆರ್‌ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ಯಶಸ್ವಿ ಜೈಸ್ವಾಲ್‌ 51(37) ಅರ್ಧಶತಕ ಗಳಿಸಿ ಔಟಾದರೆ, ನಾಯಕ ಸ್ಯಾಮ್ಸನ್‌ 31(19) ರನ್‌ ಗಳಿಸಿದರು. ರಿಯಾನ್‌ ಪರಾಗ್‌ 8(11), ನಿತೀಶ್‌ ರಾಣಾ 51(28) ರನ್‌ ಗಳಿಸಿದರು.

ಕೊನೆಯಲ್ಲಿ ಹೋರಾಟ ಮಾಡಿದ ಹೆಟ್ಮಾಯರ್‌ ಔಟಾಗದೇ 15(9) ರನ್‌ ಗಳಿಸಿದರೇ, ಧ್ರುವ್‌ ಜುರೆಲ್‌ 26(17) ರನ್‌ಔಟ್‌ ಆಗಿ ತಂಡವನ್ನು ಗೆಲ್ಲಿಸಿಕೊಡುವಲ್ಲಿ ವಿಫಲರಾದರು. ಪಂದ್ಯ ಟೈ ಆಗುವ ಮೂಲಕ ಈ ಟೂರ್ನಿಯಲ್ಲಿ ಮೊದಲ ಸೂಪರ್‌ ಓವರ್‌ಗೆ ಸಾಕ್ಷಿಯಾಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

3 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

3 hours ago

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

7 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

7 hours ago

ಓದುಗರ ಪತ್ರ: ಕಾಲಾವಕಾಶ ನೀಡಬೇಕು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…

7 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಜೆಪಿ ಷಡ್ಯಂತ್ರದಿಂದ ಹಲವು ಪಕ್ಷಗಳು ಒಡಕಿನತ್ತ?

ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…

7 hours ago