ಕ್ರೀಡೆ

IPL 2025 | ಸೂಪರ್‌ ಓವರ್‌ನಲ್ಲಿ ರಾಜಸ್ಥಾನ್‌ ಮಣಿಸಿದ ಡೆಲ್ಲಿ

ಹೊಸದಿಲ್ಲಿ : 2025ನೇ ಸಾಲಿನ ಐಪಿಎಲ್‌ನ 18ನೇ ಆವೃತ್ತಿಯ 32ನೇ ಪಂದ್ಯ ಸೂಪರ್‌ ಓವರ್‌ನಲ್ಲಿ ಅಂತ್ಯ ಕಂಡಿದ್ದು, ಈ ಪಂದ್ಯದಲ್ಲಿ ರಾಜಸ್ಥಾನ್‌ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್‌ ಮಣಿಸುವಲ್ಲಿ ಯಶಸ್ವಿಯಾಗಿದೆ.

ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್‌ ರಾಯಲ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ನಡುವಣ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 188 ರನ್‌ ಗಳಿಸಿತು. ಈ ಮೊತ್ತ ಬೆನ್ನಟ್ಟಿದ ರಾಜಸ್ಥಾನ್‌ 20 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 188 ರನ್‌ ಗಳಿಸಿ ಪಂದ್ಯವನ್ನು ಟೈ ಮಾಡಿಕೊಂಡಿತು.

ಸೂಪರ್‌ ಓವರ್‌ನಲ್ಲಿ ಮೊದಲು ಬ್ಯಾಟ್‌ ಮಾಡಿದ ಆರ್‌ಆರ್‌ 12 ರನ್‌ ಗಳಿಸಿದರೇ, ಇದನ್ನು ಬೆನ್ನಟಿದ ಡೆಲ್ಲಿ ಕೇವಲ 4 ಎಸೆತಗಳಲ್ಲಿ 13 ರನ್‌ ಗಳಿಸಿ ಗೆದ್ದು ಬೀಗಿತು.

ಡೆಲ್ಲಿ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿಗೆ ಆರಂಭಿಕ ಆಘಾತ ಎದುರಾಯಿತು. ಮ್ಯಾಕ್‌ಗಾರ್ಕ್‌ 9(6) ರನ್‌ ಗಳಿಸಿ ಔಟಾದರೇ, ಕಳೆದ ಪಂದ್ಯದಲ್ಲಿ ಅರ್ಧಶತಕ ದಾಖಲಿಸಿದ್ದ ಕರುಣ್‌ ನಾಯರ್‌ ಡಕ್‌ಔಟ್‌ ಆಗಿ ಹೊರ ನಡೆದರು.

ಅಭಿಷೇಕ್‌ 49(37), ಕೆ.ಎಲ್‌ ರಾಹುಲ್‌ 38(32), ನಾಯಕ ಅಕ್ಷರ್‌ ಪಟೇಲ್‌ 34(14) ರನ್‌ ಗಳಿಸಿದರು. ಸ್ಟಬ್ಸ್‌ ಔಟಾಗದೇ 34(18) ರನ್‌ ಗಳಿಸಿದರೇ, ಅಶುತೋಶ್‌ ಶರ್ಮಾ ನಾಟ್‌ಔಟ್‌ ಆಗಿ 15(11) ರನ್‌ ಗಳಿಸಿದರು.

ರಾಜಸ್ಥಾನ್‌ ಪರ ಜೋಫ್ರಾ ಆರ್ಚರ್‌ ಎರಡು ವಿಕೆಟ್‌, ತೀಕ್ಷಣ ಮತ್ತು ಹಸರಂಗ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

ರಾಜಸ್ಥಾನ್‌ ಇನ್ನಿಂಗ್ಸ್‌: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್‌ಆರ್‌ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ಯಶಸ್ವಿ ಜೈಸ್ವಾಲ್‌ 51(37) ಅರ್ಧಶತಕ ಗಳಿಸಿ ಔಟಾದರೆ, ನಾಯಕ ಸ್ಯಾಮ್ಸನ್‌ 31(19) ರನ್‌ ಗಳಿಸಿದರು. ರಿಯಾನ್‌ ಪರಾಗ್‌ 8(11), ನಿತೀಶ್‌ ರಾಣಾ 51(28) ರನ್‌ ಗಳಿಸಿದರು.

ಕೊನೆಯಲ್ಲಿ ಹೋರಾಟ ಮಾಡಿದ ಹೆಟ್ಮಾಯರ್‌ ಔಟಾಗದೇ 15(9) ರನ್‌ ಗಳಿಸಿದರೇ, ಧ್ರುವ್‌ ಜುರೆಲ್‌ 26(17) ರನ್‌ಔಟ್‌ ಆಗಿ ತಂಡವನ್ನು ಗೆಲ್ಲಿಸಿಕೊಡುವಲ್ಲಿ ವಿಫಲರಾದರು. ಪಂದ್ಯ ಟೈ ಆಗುವ ಮೂಲಕ ಈ ಟೂರ್ನಿಯಲ್ಲಿ ಮೊದಲ ಸೂಪರ್‌ ಓವರ್‌ಗೆ ಸಾಕ್ಷಿಯಾಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಎಂ ಬದಲಾವಣೆ ಸಮಯ ಬಂದಿದೆ: ವಿಜಯೇಂದ್ರ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…

22 mins ago

ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ…

48 mins ago

ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವು

ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು…

57 mins ago

ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ದುರಂತ ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್‌

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…

3 hours ago

ಹಾಸನ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ: ಎಕರೆಗಟ್ಟಲೇ ಬಾಳೆ ಬೆಳೆ ನಾಶ

ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಗೆ ಲಕ್ಷಾಂತರ ರೂ ಮೌಲ್ಯದ ಬಾಳೆ ಬೆಳೆ ನಾಶವಾಗಿದೆ. ಅರಕಲಗೂಡು ತಾಲ್ಲೂಕಿನ…

3 hours ago

ಗಂಡು ಮಗುವಿಗೆ ಜನ್ಮ ನೀಡಿದ ಡಾಲಿ ಧನಂಜಯ್ ಪತ್ನಿ ಧನ್ಯತಾ

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಧನಂಜಯ್‌…

4 hours ago