ಕ್ರೀಡೆ

IPL 2025 | ಸೂಪರ್‌ ಓವರ್‌ನಲ್ಲಿ ರಾಜಸ್ಥಾನ್‌ ಮಣಿಸಿದ ಡೆಲ್ಲಿ

ಹೊಸದಿಲ್ಲಿ : 2025ನೇ ಸಾಲಿನ ಐಪಿಎಲ್‌ನ 18ನೇ ಆವೃತ್ತಿಯ 32ನೇ ಪಂದ್ಯ ಸೂಪರ್‌ ಓವರ್‌ನಲ್ಲಿ ಅಂತ್ಯ ಕಂಡಿದ್ದು, ಈ ಪಂದ್ಯದಲ್ಲಿ ರಾಜಸ್ಥಾನ್‌ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್‌ ಮಣಿಸುವಲ್ಲಿ ಯಶಸ್ವಿಯಾಗಿದೆ.

ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್‌ ರಾಯಲ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ನಡುವಣ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 188 ರನ್‌ ಗಳಿಸಿತು. ಈ ಮೊತ್ತ ಬೆನ್ನಟ್ಟಿದ ರಾಜಸ್ಥಾನ್‌ 20 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 188 ರನ್‌ ಗಳಿಸಿ ಪಂದ್ಯವನ್ನು ಟೈ ಮಾಡಿಕೊಂಡಿತು.

ಸೂಪರ್‌ ಓವರ್‌ನಲ್ಲಿ ಮೊದಲು ಬ್ಯಾಟ್‌ ಮಾಡಿದ ಆರ್‌ಆರ್‌ 12 ರನ್‌ ಗಳಿಸಿದರೇ, ಇದನ್ನು ಬೆನ್ನಟಿದ ಡೆಲ್ಲಿ ಕೇವಲ 4 ಎಸೆತಗಳಲ್ಲಿ 13 ರನ್‌ ಗಳಿಸಿ ಗೆದ್ದು ಬೀಗಿತು.

ಡೆಲ್ಲಿ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿಗೆ ಆರಂಭಿಕ ಆಘಾತ ಎದುರಾಯಿತು. ಮ್ಯಾಕ್‌ಗಾರ್ಕ್‌ 9(6) ರನ್‌ ಗಳಿಸಿ ಔಟಾದರೇ, ಕಳೆದ ಪಂದ್ಯದಲ್ಲಿ ಅರ್ಧಶತಕ ದಾಖಲಿಸಿದ್ದ ಕರುಣ್‌ ನಾಯರ್‌ ಡಕ್‌ಔಟ್‌ ಆಗಿ ಹೊರ ನಡೆದರು.

ಅಭಿಷೇಕ್‌ 49(37), ಕೆ.ಎಲ್‌ ರಾಹುಲ್‌ 38(32), ನಾಯಕ ಅಕ್ಷರ್‌ ಪಟೇಲ್‌ 34(14) ರನ್‌ ಗಳಿಸಿದರು. ಸ್ಟಬ್ಸ್‌ ಔಟಾಗದೇ 34(18) ರನ್‌ ಗಳಿಸಿದರೇ, ಅಶುತೋಶ್‌ ಶರ್ಮಾ ನಾಟ್‌ಔಟ್‌ ಆಗಿ 15(11) ರನ್‌ ಗಳಿಸಿದರು.

ರಾಜಸ್ಥಾನ್‌ ಪರ ಜೋಫ್ರಾ ಆರ್ಚರ್‌ ಎರಡು ವಿಕೆಟ್‌, ತೀಕ್ಷಣ ಮತ್ತು ಹಸರಂಗ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

ರಾಜಸ್ಥಾನ್‌ ಇನ್ನಿಂಗ್ಸ್‌: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್‌ಆರ್‌ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ಯಶಸ್ವಿ ಜೈಸ್ವಾಲ್‌ 51(37) ಅರ್ಧಶತಕ ಗಳಿಸಿ ಔಟಾದರೆ, ನಾಯಕ ಸ್ಯಾಮ್ಸನ್‌ 31(19) ರನ್‌ ಗಳಿಸಿದರು. ರಿಯಾನ್‌ ಪರಾಗ್‌ 8(11), ನಿತೀಶ್‌ ರಾಣಾ 51(28) ರನ್‌ ಗಳಿಸಿದರು.

ಕೊನೆಯಲ್ಲಿ ಹೋರಾಟ ಮಾಡಿದ ಹೆಟ್ಮಾಯರ್‌ ಔಟಾಗದೇ 15(9) ರನ್‌ ಗಳಿಸಿದರೇ, ಧ್ರುವ್‌ ಜುರೆಲ್‌ 26(17) ರನ್‌ಔಟ್‌ ಆಗಿ ತಂಡವನ್ನು ಗೆಲ್ಲಿಸಿಕೊಡುವಲ್ಲಿ ವಿಫಲರಾದರು. ಪಂದ್ಯ ಟೈ ಆಗುವ ಮೂಲಕ ಈ ಟೂರ್ನಿಯಲ್ಲಿ ಮೊದಲ ಸೂಪರ್‌ ಓವರ್‌ಗೆ ಸಾಕ್ಷಿಯಾಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

2 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

2 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

2 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

2 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

2 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

2 hours ago