ಹೊಸದಿಲ್ಲಿ : 2025ನೇ ಸಾಲಿನ ಐಪಿಎಲ್ನ 18ನೇ ಆವೃತ್ತಿಯ 32ನೇ ಪಂದ್ಯ ಸೂಪರ್ ಓವರ್ನಲ್ಲಿ ಅಂತ್ಯ ಕಂಡಿದ್ದು, ಈ ಪಂದ್ಯದಲ್ಲಿ ರಾಜಸ್ಥಾನ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ಮಣಿಸುವಲ್ಲಿ ಯಶಸ್ವಿಯಾಗಿದೆ.
ಇಲ್ಲಿನ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಡೆಲ್ಲಿ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 188 ರನ್ ಗಳಿಸಿತು. ಈ ಮೊತ್ತ ಬೆನ್ನಟ್ಟಿದ ರಾಜಸ್ಥಾನ್ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 188 ರನ್ ಗಳಿಸಿ ಪಂದ್ಯವನ್ನು ಟೈ ಮಾಡಿಕೊಂಡಿತು.
ಸೂಪರ್ ಓವರ್ನಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಆರ್ 12 ರನ್ ಗಳಿಸಿದರೇ, ಇದನ್ನು ಬೆನ್ನಟಿದ ಡೆಲ್ಲಿ ಕೇವಲ 4 ಎಸೆತಗಳಲ್ಲಿ 13 ರನ್ ಗಳಿಸಿ ಗೆದ್ದು ಬೀಗಿತು.
ಡೆಲ್ಲಿ ಇನ್ನಿಂಗ್ಸ್: ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಡೆಲ್ಲಿಗೆ ಆರಂಭಿಕ ಆಘಾತ ಎದುರಾಯಿತು. ಮ್ಯಾಕ್ಗಾರ್ಕ್ 9(6) ರನ್ ಗಳಿಸಿ ಔಟಾದರೇ, ಕಳೆದ ಪಂದ್ಯದಲ್ಲಿ ಅರ್ಧಶತಕ ದಾಖಲಿಸಿದ್ದ ಕರುಣ್ ನಾಯರ್ ಡಕ್ಔಟ್ ಆಗಿ ಹೊರ ನಡೆದರು.
ಅಭಿಷೇಕ್ 49(37), ಕೆ.ಎಲ್ ರಾಹುಲ್ 38(32), ನಾಯಕ ಅಕ್ಷರ್ ಪಟೇಲ್ 34(14) ರನ್ ಗಳಿಸಿದರು. ಸ್ಟಬ್ಸ್ ಔಟಾಗದೇ 34(18) ರನ್ ಗಳಿಸಿದರೇ, ಅಶುತೋಶ್ ಶರ್ಮಾ ನಾಟ್ಔಟ್ ಆಗಿ 15(11) ರನ್ ಗಳಿಸಿದರು.
ರಾಜಸ್ಥಾನ್ ಪರ ಜೋಫ್ರಾ ಆರ್ಚರ್ ಎರಡು ವಿಕೆಟ್, ತೀಕ್ಷಣ ಮತ್ತು ಹಸರಂಗ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ರಾಜಸ್ಥಾನ್ ಇನ್ನಿಂಗ್ಸ್: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್ಆರ್ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ಯಶಸ್ವಿ ಜೈಸ್ವಾಲ್ 51(37) ಅರ್ಧಶತಕ ಗಳಿಸಿ ಔಟಾದರೆ, ನಾಯಕ ಸ್ಯಾಮ್ಸನ್ 31(19) ರನ್ ಗಳಿಸಿದರು. ರಿಯಾನ್ ಪರಾಗ್ 8(11), ನಿತೀಶ್ ರಾಣಾ 51(28) ರನ್ ಗಳಿಸಿದರು.
ಕೊನೆಯಲ್ಲಿ ಹೋರಾಟ ಮಾಡಿದ ಹೆಟ್ಮಾಯರ್ ಔಟಾಗದೇ 15(9) ರನ್ ಗಳಿಸಿದರೇ, ಧ್ರುವ್ ಜುರೆಲ್ 26(17) ರನ್ಔಟ್ ಆಗಿ ತಂಡವನ್ನು ಗೆಲ್ಲಿಸಿಕೊಡುವಲ್ಲಿ ವಿಫಲರಾದರು. ಪಂದ್ಯ ಟೈ ಆಗುವ ಮೂಲಕ ಈ ಟೂರ್ನಿಯಲ್ಲಿ ಮೊದಲ ಸೂಪರ್ ಓವರ್ಗೆ ಸಾಕ್ಷಿಯಾಯಿತು.
ಬೆಂಗಳೂರು: ಡಾ.ರಾಜ್ಕುಮಾರ್ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್ ಅಹಿಂಸಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇತ್ತೀಚೆಗಷ್ಟೇ…
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್ ಶಾಮನೂರು ತಮ್ಮ ಗೆಲುವಿನ…
ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…
ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…
ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ…
ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು