ಕ್ರೀಡೆ

IPL 2025 | ಆರ್‌ಸಿಬಿ ವಿರುದ್ಧ ಗೆದ್ದು ಬೀಗಿದ ಡೆಲ್ಲಿ

ಬೆಂಗಳೂರು: ಕನ್ನಡಿಗ ಕೆ.ಎಲ್‌ ರಾಹುಲ್‌ ಅವರ ಅಜೇಯ ಅರ್ಧಶತಕದಾಟದ ಬಲದಿಂದ ಅತಿಥೇಯ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು 6 ವಿಕೆಟ್‌ಗಳ ಅಂತರದಿಂದ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ, ಟೂರ್ನಿಯಲ್ಲಿ ತನ್ನ ಅಜೇಯ ಓಟವನ್ನು ಮುಂದುವರಿಸಿದೆ.

ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ನಡುವೆ ನಡೆದ 18ನೇ ಆವೃತ್ತಿಯ ಐಪಿಎಲ್‌ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 163 ರನ್‌ ಗಳಿಸಿ ಎದುರಾಳಿ ತಂಡಕ್ಕೆ 164 ರನ್‌ ಗಳ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್‌ 17.5 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 169 ರನ್‌ ಗಳಿಸಿ 6ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿತು.

ಆರ್‌ಸಿಬಿ ಇನ್ನಿಂಗ್ಸ್‌: ಉತ್ತಮ ಆರಂಭದ ನಡುವೆಯೂ ಮಧ್ಯಮ ಕ್ರಮಾಂಕ ದಿಢೀರ್‌ ಕುಸಿತ ಕಂಡ ಕಾರಣ ಡೆಲ್ಲಿ ವಿರುದ್ಧ ಬೃಹತ್‌ ಮೊತ್ತ ಕಲೆಹಾಕುವ ಸೂಚನೆ ನೀಡಿದ್ದ ಆರ್‌ಸಿಬಿ ಕೇವಲ ನೂರೈವತ್ತರ ಗಡಿ ದಾಟಲು ಮಾತ್ರ ಶಕ್ತವಾಯಿತು. ಆರಂಭಿಕ ಆಟಗಾರ ಫಿಲ್‌ ಸಾಲ್ಟ್‌ 37(17), ವಿರಾಟ್‌ ಕೊಹ್ಲಿ 22(14) ರನ್‌ ಬಾರಿಸಿ ಪೆವಿಲಿಯನ್‌ ಸೇರಿದರು. ದೇವ್‌ದತ್‌ ಪಡಿಕ್ಕಲ್‌ 1(8) ಸುಸ್ತಾದರೇ, ಲಿವಿಂಗ್‌ಸ್ಟೋನ್‌ 4(6), ಜಿತೇಶ್ ಶರ್ಮಾ 3(11) ರನ್‌ ಗಳಿಸಿ ಮರಳಿದರು.

ನಾಯಕ ರಜತ್‌ ಪಾಟೀದರ್‌ 25(23), ಕೃನಾಲ್‌ ಪಾಂಡ್ಯ 18(18) ರನ್‌ ಗಳಿಸಿ ಔಟಾದರೇ, ಕೊನೆಯಲ್ಲಿ ಅಬ್ಬರಿಸಿದ ಟಿಮ್‌ ಡೇವಿಡ್‌ ಔಟಾಗದೇ 20 ಎಸೆತಗಳಲ್ಲಿ 37 ರನ್‌ ಬಾರಿಸಿದರು. ಭುವಿ 1(4) ರನ್‌ ಗಳಿಸಿ ಸ್ಕ್ರೀಸ್‌ನಲ್ಲಿ ಉಳಿದರು.

ಡೆಲ್ಲಿ ಪರ ವಿಪ್ರಾಜ್‌ ನಿಗಮ್‌ ಹಾಗೂ ಕುಲ್ದೀಪ್‌ ಯಾದವ್‌ ತಲಾ ಎರಡು ವಿಕೆಟ್‌, ಮುಖೇಶ್‌ ಕುಮಾರ್‌ ಮತ್ತು ಮೋಹಿತ್‌ ಶರ್ಮಾ ತಲಾ ಒಂದೊಂದು ವಿಕೆಟ್‌ ಪಡೆದರು.

ಡೆಲ್ಲಿ ಇನ್ನಿಂಗ್ಸ್‌: ಆರ್‌ಸಿಬಿ ನೀಡಿದ್ದ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಡೆಲ್ಲಿಗೆ ಕನ್ನಡಿಗ ಕೆ.ಎಲ್‌ ರಾಹುಲ್‌ ಆಸರೆಯಾದರು. ರಾಹುಲ್‌ ಅವರು ಅಜೇಯ 53 ಎಸೆತಗಳಲ್ಲಿ 7 ಬೌಂಡರಿ, 6 ಸಿಕ್ಸರ್‌ ಸಹಿತ 93 ರನ್‌ ಬಾರಿಸಿದರೇ, ಸ್ಟಬ್ಸ್‌ 23 ಎಸೆತಗಳಲ್ಲಿ 38 ರನ್‌ ಬಾರಿಸಿ ಡೆಲ್ಲಿಗೆ ಗೆಲುವು ತಂದುಕೊಟ್ಟರು.

ಉಳಿದಂತೆ ಫಾಫ್‌ 2(7), ಫ್ರೆಸರ್‌ ಮೆಕ್‌ಗಾರ್ಕ್‌ 7(6), ಅಭಿಷೇಕ್‌ ಪೂರೆಲ್‌ 7(7) ಮತ್ತು ನಾಯಕ ಅಕ್ಷರ್‌ ಪಟೇಲ್‌ 15(11) ರನ್‌ ಗಳಿಸಿದರು.

ಆರ್‌ಸಿಬಿ ಪರ ಭುವನೇಶ್ವರ್‌ ಕುಮಾರ್‌ ಎರಡು ವಿಕೆಟ್‌, ಯಶ್‌ ದಯಾಳ್‌ ಹಾಗೂ ಸುಯೇಶ್‌ ಶರ್ಮಾ ತಲಾ ಒಂದೊಂದು ವಿಕೆಟ್‌ ಪಡೆದರು.

ಪಂದ್ಯಶ್ರೇಷ್ಠ: ಕೆ.ಎಲ್‌ ರಾಹುಲ್‌

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

10 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

10 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

10 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

10 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

10 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

10 hours ago