ಕ್ರೀಡೆ

IPL 2025 | ಡೆಲ್ಲಿ ವಿರುದ್ಧ ಸುಲಭ ಜಯ ; ಟೇಬಲ್‌ ಟಾಪರ್‌ ಆದ ಆರ್‌ಸಿಬಿ

ಹೊಸದಿಲ್ಲಿ : ಕೃನಾಲ್‌ ಪಾಂಡ್ಯ ಅವರ ಆಲ್‌ರೌಂಡರ್‌ ಪ್ರದರ್ಶನ ಹಾಗೂ ವಿರಾಟ್‌ ಕೊಹ್ಲಿ ಅವರ ಸಮಯೋಚಿತ ಆಟದ ಬಲದಿಂದ ಅತಿಥೇಯ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು 6 ವಿಕೆಟ್‌ಗಳಿಂದ ಮಣಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 2025ರ ಐಪಿಎಲ್‌ನ 18ನೇ ಸೀಸನ್‌ ಟೇಬಲ್‌ ಟಾಪರ್‌ ಆಗಿ ಹೊರಹೊಮ್ಮಿದ್ದಾರೆ.

ಈವರೆಗೆ ತಾವಾಡಿರುವ 10 ಪಂದ್ಯಗಳಿಂದ 7 ಪಂದ್ಯಗಳಲ್ಲಿ ಗೆಲುವು ದಾಖಲಿಸುವ ಮೂಲಕ 14 ಪಾಯಿಂಟ್‌ನೊಂದಿಗೆ ಪಾಯಿಂಟ್ಸ್‌ ಮೂಲಕ ಅಗ್ರಸ್ಥಾನಕ್ಕೆ ಲಗ್ಗೆಯಿಟ್ಟಿತು.

ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 162 ರನ್‌ ಬಾರಿಸಿ ಎದುರಾಳಿ ತಂಡಕ್ಕೆ 163 ರನ್‌ಗಳ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 18.3 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 165 ರನ್‌ ಕಲೆಹಾಕಿ, 6 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿತು.

ಡೆಲ್ಲಿ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಅತಿಥೇಯ ಡೆಲ್ಲಿ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ಅಭಿಷೇಕ್‌ ಪೋರೆಲ್‌ 28(11), ಡು ಪ್ಲೆಸಿ 22(26) ರನ್‌ ಗಳಿಸಿ ಔಟಾದರು.

ಕನ್ನಡಿಗ ಕೆ.ಎಲ್‌ ರಾಹುಲ್‌ 41(39) ರನ್‌ ಗಳಿಸಿದ್ದೇ ತಂಡದ ಪರವಾಗಿ ಗಳಿಸಿದ್ದ ವೈಯಕ್ತಿಕ ಗರಿಷ್ಠ ರನ್‌ ಆಗಿತ್ತು. ಉಳಿದಂತೆ ಕರುಣ್‌ ನಾಯರ್‌ 4(4), ನಾಯಕ ಅಕ್ಷರ್‌ ಪಟೇಲ್‌ 15(13), ಅಶುತೋಷ್‌ ಶರ್ಮಾ 2(3), ವಿಪ್ರಾಜ್‌ 12(6) ಹಾಗೂ ಕೊನೆಯಲ್ಲಿ ಅಬ್ಬರಿಸಿ ಸ್ಟಬ್ಸ್‌ 34(18) ರನ್‌ ಗಳಿಸಿ ತಂಡದ ಮೊತ್ತ ನೂರೈವತ್ತರ ಗಡಿ ದಾಟಿಸಿದರು.

ಆರ್‌ಸಿಬಿ ಪರ ಭುವನೇಶ್ವರ್‌ ಕುಮಾರ್‌ ಮೂರು ವಿಕೆಟ್‌, ಹೇಜಲ್‌ವುಡ್‌ ಎರಡು ವಿಕೆಟ್‌, ಕೃನಾಲ್‌ ಪಾಂಡ್ಯ ಹಾಗೂ ಯಶ್‌ ದಯಾಳ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಆರ್‌ಸಿಬಿ ಇನ್ನಿಂಗ್ಸ್‌: ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್‌ಸಿಬಿಗೆ ದಿಢೀರ್‌ ಕುಸಿತ ಎದುರಾಯಿತು. ಪಾದಾರ್ಪಣೆ ಪಂದ್ಯದಲ್ಲಿ ಉತ್ತಮವಾಗಿ ಬ್ಯಾಟ್‌ ಬೀಸುವ ಸೂಚನೆ ನೀಡಿದ್ದ ಬೆಥೆಲ್‌ ಕೇವಲ 12(6) ರನ್‌ ಗಳಿಸಿ ಔಟಾದರು. ಬಳಿಕ ಬಂದ ದೇವ್‌ದತ್‌ ಪಡಿಕ್ಕಲ್‌ ಡಕ್‌ಔಟ್‌ ಆಗಿ ಹೊರನಡೆದರೇ, ನಾಯಕ ಪಾಟೀದರ್‌ 6(6) ರನ್‌ ಗಳಿಸಿ ರನ್‌ಔಟ್‌ ಆಗಿ ಹೊರನಡೆದರು.

ಬಳಿಕ ಜೊತೆಯಾದ ವಿರಾಟ್‌ ಕೊಹ್ಲಿ ಮತ್ತು ಕೃನಾಲ್‌ ಪಾಂಡ್ಯ ಉತ್ತಮ ಜೊತೆಯಾಟವಾಡುವ ಮೂಲಕ ಆರ್‌ಸಿಬಿಗೆ ಏಳನೇ ಗೆಲುವು ತಂದುಕೊಟ್ಟರು. ವಿರಾಟ್‌ ಕೊಹ್ಲಿ 47 ಎಸೆತ ಎದುರಿಸಿ 4 ಬೌಂಡರಿ ಸಹಿತ 51 ರನ್‌ ಬಾರಿಸಿದರೇ, ಕೃನಾಲ್‌ ಪಾಂಡ್ಯ ಔಟಾಗದೇ 47 ಎಸೆತ ಎದುರಿಸಿ 5 ಬೌಂಡರಿ, 4 ಸಿಕ್ಸರ್‌ ಸಹಿತ 73 ರನ್‌ ಚಚ್ಚಿ ತಂಡಕ್ಕೆ ಗೆಲುವು ತಂದುಕೊಟ್ಟರು. ಇವರಿಗೆ ಟಿಮ್‌ ಡೇವಿಡ್‌ 19(5) ಸಾಥ್‌ ನೀಡಿದರು.

ಡೆಲ್ಲಿ ಪರ ಅಕ್ಷರ್‌ ಪಟೇಲ್‌ ಎರಡು, ಚಾಮಿರ ಒಂದು ವಿಕೆಟ್‌ ಪಡೆದರು.

ಪಂದ್ಯಶ್ರೇಷ್ಠ: ಕೃನಾಲ್‌ ಪಾಂಡ್ಯ

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

40 mins ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

1 hour ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

2 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

6 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

6 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

6 hours ago