ಕ್ರೀಡೆ

IPL 2025 | ಕೆಕೆಆರ್‌ಗೆ ಸುಲಭ ಜಯ ; ಸೋತ ರಾಜಸ್ಥಾನ್‌

ಗುವಾಹಟಿ: ಸಂಘಟಿತ ಬೌಲಿಂಗ್‌ ಮತ್ತು ಬ್ಯಾಟಿಂಗ್‌ ಪ್ರದರ್ಶನದ ಸಹಾಯದಿಂದ ಅತಿಥೇಯ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಮಣಿಸಿದ ಕೆಕೆಆರ್‌ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಮತ್ತೊಂದೆಡೆ ಆರ್‌ಆರ್‌ ತಾನಾಡಿದ ಮೊದಲೆರೆಡು ಪಂದ್ಯಗಳಲ್ಲಿಯೂ ಸೋತು ನಿರಾಸೆ ಅನುಭವಿಸಿದೆ.

ಇಲ್ಲಿನ ಬಾರ್ಸಪರ ಕ್ರೀಡಾಂಗಣದಲ್ಲಿ ನಡೆದ ಕೆಕೆಆರ್‌ ಮತ್ತು ಆರ್‌ಆರ್‌ ನಡುವಣ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಆರ್‌ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 151 ರನ್‌ ಗಳಿಸಿತು. ಈ ಮೊತ್ತ ಬೆನ್ನತ್ತಿದ ಕೆಕೆಆರ್‌ 17.3 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 153 ರನ್‌ ಗಳಿಸಿ 8 ವಿಕಟ್‌ಗಳ ಅಂತರದಿಂದ ಗೆಲುವು ದಾಖಲಿಸಿತು.

ಆರ್‌ಆರ್‌ ಇನ್ನಿಂಗ್ಸ್‌: ತನ್ನ ತವರು ನೆಲದಲ್ಲಿ ಇನ್ನಿಂಗ್ಸ್‌ ಆರಂಭಿಸಿದ ಆರ್‌ಆರ್‌ಗೆ ನಿರೀಕ್ಷಿತ ಆರಂಭ ಕಂಡುಬರಲಿಲ್ಲ. ಆರಂಭಿಕರಾಗಿ ಕಣಕ್ಕಿಳಿದ ನಾಯಕ ಸ್ಯಾಮ್ಸನ್‌ 13(11), ಜೈಸ್ವಾಲ್‌ 29(24) ರನ್‌ ಗಳಿಸಿ ವೇಗವಾಗಿ ಔಟಾದರು.

ನಂತರ ಬಂದ ನಾಯಕ ರಿಯಾನ್‌ ಪರಾಗ್‌ ಅಬ್ಬರಿಸುವ ಹಾಗೆ ಕಂಡರೂ 25(15) ರನ್‌ ಗಳಿಸಿ ಔಟಾದರು. ತಂಡಕ್ಕೆ ಮತ್ತೊಮ್ಮೆ ಮಧ್ಯಮ ಕ್ರಮಾಂಕ ಕೈಕೊಟ್ಟಿತು. ಧ್ರುವ್‌ ಜುರೆಲ್‌ 33(28) ರನ್‌ ಗಳಿಸಿದ್ದೆ ತಂಡದ ಪರ ವೈಯಕ್ತಿಕ ಗರಿಷ್ಠ ರನ್‌ ಆಗಿತ್ತು.

ಉಳಿದಂತೆ ನಿತೀಶ್‌ ರಾಣಾ 8(9), ವನಿಂದು ಹಸರಂಗ 4(4), ಶುಭಂ ದುಬೆ 9(12), ಹೆಟ್ಮಾಯರ್‌ 7(8), ಜೋಫ್ರಾ ಆರ್ಚರ್‌ 16(7) ರನ್‌ ಗಳಿಸಿ ಔಟಾದರು. ತೀಕ್ಷಣ ಹಾಗೂ ತುಷಾರ್‌ ದೇಶ್‌ಪಾಂಡೆ ಔಟಾಗದೇ 1(1) ಮತ್ತು 2(1) ರನ್‌ ಕಲೆಹಾಕಿದರು.

ಕೆಕೆಆರ್‌ ಪರ ವರುಣ್‌ ಚಕ್ರವರ್ತಿ, ಮೋಯಿನ್‌ ಅಲಿ, ಹರ್ಷಿತ್‌ ರಣಾ, ವೈಭವ್‌ ಅರೋರಾ ತಲಾ 2 ವಿಕೆಟ್‌ ಪಡೆದರು.

ಕೆಕೆಆರ್‌ ಇನ್ನಿಂಗ್ಸ್‌: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಕೆಕೆಆರ್‌ಗೆ ಕ್ವಿಂಟನ್‌ ಡಿ ಕಾಕ್‌ ಆಸರೆಯಾದರು. ಆರಂಭಿಕ ಬ್ಯಾಟರ್‌ ಮೊಯೀನ್‌ ಅಲಿ 5(12) ರನ್‌ ಗಳಿಸಿ ಇಲ್ಲದ ರನ್‌ ಕದಿಯಲು ಹೋಗಿ ರನ್‌ಔಟ್‌ ಆಗಿ ಹೊರ ನಡೆದರು. ಬಳಿಕ ಬಂದ ನಾಯಕ ಅಜಿಂಕ್ಯಾ ರಹಾನೆ 18(15) ಕೂಡಾ ಹೆಚ್ಚುಹೊತ್ತು ನಿಲ್ಲಲಿಲ್ಲ.

ನಂತರ ಒಂದಾದ ಕ್ವಿಂಟನ್‌ ಡಿ ಕಾಕ್‌ ಹಾಗೂ ರಘುವಂಶಿ ತಂಡದ ದಿಕ್ಕನ್ನೇ ಬದಲಾಯಿಸಿದರು. ತಮ್ಮ ಬಲವಾದ ಹೊಡೆತಗಳ ಮೂಲಕ ಆರ್‌ಆರ್‌ ಬೌಲರ್‌ಗಳನ್ನು ಕಾಡಿದರು. ಡಿಕಾಕ್‌ ಔಟಾಗದೇ 61 ಎಸೆತಗಳಲ್ಲಿ 8 ಬೌಂಡರಿ ಹಾಗೂ ಭರ್ಜರಿ 6 ಸಿಕ್ಸರ್‌ ಸಹಿತ 97 ರನ್‌ ಗಳಿಸಿದರು. ರಘುವಂಶಿ 22(17) ರನ್‌ ಗಳಿಸಿ ಔಟಾಗದೇ ಉಳಿದು ಡಿಕಾಕ್‌ಗೆ ಸಾಥ್‌ ನೀಡಿದರು.

ಆರ್‌ಆರ್ ಪರ ಹಸರಂಗ ಒಂದು ವಿಕೆಟ್‌ ಪಡೆದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

2 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

4 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

4 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

4 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

5 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

5 hours ago