ಕ್ರೀಡೆ

IPL 2025 FINAL | ಪಂಜಾಬ್‌ ಗೆಲುವಿಗೆ 191 ಗುರಿ ನೀಡಿದ ಆರ್‌ಸಿಬಿ

ಅಹಮದಾಬಾದ್‌ : ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ ಟ್ವೆಂಟಿ-20 ಕ್ರಿಕೆಟ್‌ ಟೂರ್ನಿಯಲ್ಲಿ ಪಂಜಾಬ್‌ ವಿರುದ್ಧ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಆರ್‌ಸಿಬಿ ತಂಡವು ನಿಗದಿತ 20 ಓವರ್‌ಗಳಲ್ಲಿ ಒಂಬತ್ತು ವಿಕೆಟ್‌ ನಷ್ಟಕ್ಕೆ 190 ರನ್‌ ಪೇರಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ಗೆ ಫಿಲ್‌ಸಾಲ್ಟ್‌ (16)ಆರಂಭಿಕವಾಗಿ ಬಿರುಸನ್ನು ಕಟ್ಟಿಕೊಟ್ಟರು. ಆದರೆ ಸಾಲ್ಟ್‌ ಹೆಚ್ಚು ಹೊತ್ತು ನಿಲ್ಲದೆ ಶ್ರೇಯಸ್‌ ಅಯ್ಯರ್‌ಗೆ ಕ್ಯಾಚ್‌ ಇತ್ತರು.

ಭರವಸೆ ಆಟಗಾರ ವಿರಾಟ್‌ ಕೊಹ್ಲಿ ಎಚ್ಚರಿಕೆಯ ಇನ್ನಿಂಗ್ಸ್‌ ಕಟ್ಟಿದರು ಆದರೆ ಕೊಹ್ಲಿ(43) ಅರ್ಧಶತಕದ ಅಂಚಿನಲ್ಲಿ ಎಡವಿದರು. ಮಯಂಕ್‌ ಅಗರವಾಲ್‌(24)  ಕೊಹ್ಲಿಗೆ ಉತ್ತಮ ಬೆಂಬಲ ನೀಡಿದರು ಜೊತೆಯಾಡುದಲ್ಲಿ ವಿಫಲರಾದರು.

ನಾಯಕ ರಜತ್‌ ಪಾಟೀದರ್‌ 16 ಎಸೆತಗಳಲ್ಲಿ 26 ರನ್‌ ಗಳಿಸಿ ಔಟ್‌ ಆದರು. ಮತ್ತೊಂದೆಡೆ ಜಿತೇಶ್‌ ಶರ್ಮಾ ಹಾಗೂ ಲಿಯಾಮ್‌ ಲಿವಿಂಗ್‌ಸ್ಟೋನ್‌ ಬಿರುಸಿನ ಆಟವಾಡುವ ಮೂಲಕ ಸವಾಲಿನ ಮೊತ್ತ ಪೇರಿಸುವಲ್ಲಿ ಯಶಸ್ವಿಯಾದರು.

ಅಂತಿಮವಾಗಿ ಆರ್‌ಸಿಬಿ ಒಂಬತ್ತು ವಿಕೆಟ್‌ ನಷ್ಟಕ್ಕೆ 190ರನ್‌ ಗಳಿಸಿ ಪಂಜಾಬ್‌ಗೆ 191 ಗುರಿ ಒಡ್ಡಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

11 mins ago

ಗಣರಾಜ್ಯೋತ್ಸವ : ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…

21 mins ago

ಮೈಷುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸಲ್ಲ : ಸಿ.ಡಿ.ಗಂಗಾಧರ ಸ್ಪಷ್ಟನೆ

ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…

28 mins ago

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತ : ಕಾರಣ ಬಿಚ್ಚಿಟ್ಟ ಸಂಸದ ಯದುವೀರ್‌

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…

45 mins ago

ಶಾರ್ಟ್‌ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಟಿವಿ ; ದಾಖಲಾತಿಗಳು ಭಸ್ಮ

ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…

1 hour ago

ಹನೂರು| ರಾಜ್ಯ ಸರ್ಕಾರದ ವಿರುದ್ಧ ಅಂಡೆ ಕುರುಬನದೊಡ್ಡಿ ಗ್ರಾಮಸ್ಥರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…

2 hours ago