ಅಹಮದಾಬಾದ್ : ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಪಂಜಾಬ್ ವಿರುದ್ಧ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಆರ್ಸಿಬಿ ತಂಡವು ನಿಗದಿತ 20 ಓವರ್ಗಳಲ್ಲಿ ಒಂಬತ್ತು ವಿಕೆಟ್ ನಷ್ಟಕ್ಕೆ 190 ರನ್ ಪೇರಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ಗೆ ಫಿಲ್ಸಾಲ್ಟ್ (16)ಆರಂಭಿಕವಾಗಿ ಬಿರುಸನ್ನು ಕಟ್ಟಿಕೊಟ್ಟರು. ಆದರೆ ಸಾಲ್ಟ್ ಹೆಚ್ಚು ಹೊತ್ತು ನಿಲ್ಲದೆ ಶ್ರೇಯಸ್ ಅಯ್ಯರ್ಗೆ ಕ್ಯಾಚ್ ಇತ್ತರು.
ಭರವಸೆ ಆಟಗಾರ ವಿರಾಟ್ ಕೊಹ್ಲಿ ಎಚ್ಚರಿಕೆಯ ಇನ್ನಿಂಗ್ಸ್ ಕಟ್ಟಿದರು ಆದರೆ ಕೊಹ್ಲಿ(43) ಅರ್ಧಶತಕದ ಅಂಚಿನಲ್ಲಿ ಎಡವಿದರು. ಮಯಂಕ್ ಅಗರವಾಲ್(24) ಕೊಹ್ಲಿಗೆ ಉತ್ತಮ ಬೆಂಬಲ ನೀಡಿದರು ಜೊತೆಯಾಡುದಲ್ಲಿ ವಿಫಲರಾದರು.
ನಾಯಕ ರಜತ್ ಪಾಟೀದರ್ 16 ಎಸೆತಗಳಲ್ಲಿ 26 ರನ್ ಗಳಿಸಿ ಔಟ್ ಆದರು. ಮತ್ತೊಂದೆಡೆ ಜಿತೇಶ್ ಶರ್ಮಾ ಹಾಗೂ ಲಿಯಾಮ್ ಲಿವಿಂಗ್ಸ್ಟೋನ್ ಬಿರುಸಿನ ಆಟವಾಡುವ ಮೂಲಕ ಸವಾಲಿನ ಮೊತ್ತ ಪೇರಿಸುವಲ್ಲಿ ಯಶಸ್ವಿಯಾದರು.
ಅಂತಿಮವಾಗಿ ಆರ್ಸಿಬಿ ಒಂಬತ್ತು ವಿಕೆಟ್ ನಷ್ಟಕ್ಕೆ 190ರನ್ ಗಳಿಸಿ ಪಂಜಾಬ್ಗೆ 191 ಗುರಿ ಒಡ್ಡಿತು.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…