ipl gujrat defeated delhi
ಅಲಹಾಬಾದ್: ಜೋಸ್ ಬಟ್ಲರ್ ಹಾಗೂ ರುದರ್ಫರ್ಡ್ ಅವರ ಶತಕದಾಟದ ಬಲದಿಂದ ಟೇಬಲ್ ಟಾಪರ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಗುಜರಾತ್ ಜೈಂಟ್ಸ್ 7 ವಿಕೆಟ್ಗಳ ಅಂತರದಿಂದ ಬಗ್ಗು ಬಡಿಯಿತು.
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಣದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಣ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಡೆಲ್ಲಿ, ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 203 ರನ್ ಗಳಿಸಿ ಎದುರಾಳಿ ತಂಡಕ್ಕೆ 204 ರನ್ ಟಾರ್ಗೆಟ್ ನೀಡಿತು. ಈ ಮೊತ್ತ ಬೆನ್ನತ್ತಿದ ಗುಜರಾತ್ 19.2 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 204 ರನ್ ಗಳಿಸಿ 7 ವಿಕೆಟ್ಗಳ ಅಂತರದಿಂದ ಗೆದ್ದು ಬೀಗಿತು.
ಡೆಲ್ಲಿ ಇನ್ನಿಂಗ್ಸ್: ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಡೆಲ್ಲಿಗೆ ಉತ್ತಮ ಆರಂಭ ದೊರೆಯಿತು. ಅಭಿಷೇಕ್ ಪೋರೆಲ್ 18(9), ಕರುಣ್ ನಾಯರ್ 31(18) ರನ್ ಗಳಿಸಿ ಔಟಾದರು.
ಬಳಿಕ ಬಂದ ಕೆ.ಎಲ್. ರಾಹುಲ್ 28(14), ನಾಯಕ ಅಕ್ಷರ್ ಪಟೇಲ್ 39(32) ರನ್ ಗಳಿಸಿದರು. ಉಳಿದಂತೆ ಸ್ಟಬ್ಸ್ 31(21), ಅಶುತೋಶ್ ಶರ್ಮಾ 37(19), ವಿಪ್ರಾಜ್ ಡಕ್ಔಟ್, ಫರೆರಿಯಾ 1(3) ರನ್ ಗಳಿಸಿದರು.
ಮಿಚೆಲ್ ಸ್ಟಾರ್ಕ್ ಹಾಗೂ ಕುಲ್ದೀಪ್ ಯಾದವ್ ಔಟಾಗದೇ 2(2) ಮತ್ತು 4(1) ರನ್ ಗಳಿಸಿದರು.
ಗುಜರಾತ್ ಪರ ಕನ್ನಡಿಗ ಪ್ರಸಿದ್ಧ್ ಕೃಷ್ಣ ಪ್ರಮುಖ ನಾಲ್ಕು ವಿಕೆಟ್ ಕಬಳಿಸಿದರು. ಇಶಾಂತ್ ಶರ್ಮಾ, ಸಿರಾಜ್, ಅರ್ಶದ್ ಖಾನ್ ಹಾಗೂ ಸಾಯ್ ಕಿಶೋರ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
ಗುಜರಾತ್ ಇನ್ನಿಂಗ್ಸ್: ಬೃಹತ್ ಮೊತ್ತ ಬೆನ್ನತ್ತಿದ ಗುಜರಾತ್ಗೆ ಆರಂಭಿಕ ಆಘಾತ ಎದುರಾಯಿತು. ನಾಯಕ ಗಿಲ್ 7(5) ರನ್ ಗಳಿಸಿ ಇಲ್ಲದ ರನ್ ಕದಿಯಲು ಹೋಗಿ ಔಟಾದರು. ಸಾಯ್ ಸುದರ್ಶನ್ 36(21) ರನ್ ಕಲೆಹಾಕಿ ಹೊರನಡೆದರು.
ಬಳಿಕ ಜೊತೆಯಾದ ಜೋಸ್ ಬಟ್ಲರ್ ಹಾಗೂ ರುದರ್ಫರ್ಡ್ ಡೆಲ್ಲಿ ಬೌಲರ್ಗಳನ್ನು ಕಾಡಿದರು. ಈ ಜೋಡಿ ಭರ್ಜರಿ ಬ್ಯಾಟಿಂಗ್ ಮೂಲಕ ಉತ್ತಮ ಇನ್ನಿಂಗ್ಸ್ ಕಟ್ಟಿಕೊಟ್ಟರು. ಈ ಜೋಡಿ ಬರೋಬ್ಬರಿ ಶತಕದಾಟದ ಜೊತೆಯಾಟ ನೀಡಿದರು.
ರುದರ್ಫರ್ಡ್ 43(34) ರನ್ ಗಳಿಸಿ ಔಟಾದರೇ, ಜೋಸ್ ಬಟ್ಲರ್ ಔಟಾಗದೇ 54 ಎಸೆತಗಳಲ್ಲಿ 11 ಬೌಂಡರಿ, 4 ಸಿಕ್ಸರ್ ಸಹಿತ 97 ರನ್ ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಕೊನೆಯಲ್ಲಿ ಬಂದ ತೆವಾಟಿಯಾ ಕೇವಲ ಮೂರು ಎಸೆತಗಳಲ್ಲಿ 11 ರನ್ ಗಳಿಸಿ ಅಜೇಯರಾಗಿ ಉಳಿದರು.
ಡೆಲ್ಲಿ ಪರ ಮುಖೇಶ್ ಕುಮಾರ್ ಮತ್ತು ಕುಲ್ದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.
ಪಂದ್ಯಶ್ರೇಷ್ಠ: ಜೋಸ್ ಬಟ್ಲರ್
ನವದೆಹಲಿ: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು…
ಅಂಕಾರ: ಇಸ್ತಾನ್ಬುಲ್ ಬಳಿಯ ಕಪ್ಪು ಸಮುದ್ರದಲ್ಲಿ ಟರ್ಕಿ ನಿರ್ವಹಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್ ಹಡಗಿನ ಮೇಲೆ ದಾಳಿ ನಡೆದಿದೆ. ಕಪ್ಪು…
ಮಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ ನವಮಂಗಳೂರು ಬಂದರಿಗೆ ಎಲ್ಪಿಜಿ ಹೊತ್ತ ಹಡಗು ಆಗಮಿಸಿದೆ. 16 ಸಾವಿರ ಮೆಟ್ರಿಕ್…
ನವದೆಹಲಿ: ಜ್ವರ ಮತ್ತು ಸೋಂಕು ಹಿನ್ನೆಲೆಯಲ್ಲಿ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ…
ಬೆಂಗಳೂರು: ಮಾರ್ಚ್.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾರ್ಚ್.31ಕ್ಕ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪರೀಕ್ಷಾ ಬೋರ್ಡ್ ಮಾಹಿತಿ ನೀಡಿದ್ದು,…
ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ…