ಕ್ರೀಡೆ

IPL 2025 | ಡೆಲ್ಲಿ ವಿರುದ್ಧ ಗುಜರಾತ್‌ಗೆ ಜಯ ; ಪಾಯಿಂಟ್‌ ಪಟ್ಟಿಯಲ್ಲೂ ಅಗ್ರಸ್ಥಾನ

ಅಲಹಾಬಾದ್‌: ಜೋಸ್‌ ಬಟ್ಲರ್‌ ಹಾಗೂ ರುದರ್‌ಫರ್ಡ್‌ ಅವರ ಶತಕದಾಟದ ಬಲದಿಂದ ಟೇಬಲ್‌ ಟಾಪರ್‌ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಗುಜರಾತ್‌ ಜೈಂಟ್ಸ್‌ 7 ವಿಕೆಟ್‌ಗಳ ಅಂತರದಿಂದ ಬಗ್ಗು ಬಡಿಯಿತು.

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಣದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ಗುಜರಾತ್‌ ಟೈಟನ್ಸ್‌ ನಡುವಣ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿ, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 203 ರನ್‌ ಗಳಿಸಿ ಎದುರಾಳಿ ತಂಡಕ್ಕೆ 204 ರನ್‌ ಟಾರ್ಗೆಟ್‌ ನೀಡಿತು. ಈ ಮೊತ್ತ ಬೆನ್ನತ್ತಿದ ಗುಜರಾತ್‌ 19.2 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 204 ರನ್‌ ಗಳಿಸಿ 7 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿತು.

ಡೆಲ್ಲಿ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿಗೆ ಉತ್ತಮ ಆರಂಭ ದೊರೆಯಿತು. ಅಭಿಷೇಕ್‌ ಪೋರೆಲ್‌ 18(9), ಕರುಣ್‌ ನಾಯರ್‌ 31(18) ರನ್‌ ಗಳಿಸಿ ಔಟಾದರು.

ಬಳಿಕ ಬಂದ ಕೆ.ಎಲ್‌. ರಾಹುಲ್‌ 28(14), ನಾಯಕ ಅಕ್ಷರ್‌ ಪಟೇಲ್‌ 39(32) ರನ್‌ ಗಳಿಸಿದರು. ಉಳಿದಂತೆ ಸ್ಟಬ್ಸ್‌ 31(21), ಅಶುತೋಶ್‌ ಶರ್ಮಾ 37(19), ವಿಪ್ರಾಜ್‌ ಡಕ್‌ಔಟ್‌, ಫರೆರಿಯಾ 1(3) ರನ್‌ ಗಳಿಸಿದರು.

ಮಿಚೆಲ್‌ ಸ್ಟಾರ್ಕ್‌ ಹಾಗೂ ಕುಲ್ದೀಪ್‌ ಯಾದವ್‌ ಔಟಾಗದೇ 2(2) ಮತ್ತು 4(1) ರನ್‌ ಗಳಿಸಿದರು.

ಗುಜರಾತ್‌ ಪರ ಕನ್ನಡಿಗ ಪ್ರಸಿದ್ಧ್‌ ಕೃಷ್ಣ ಪ್ರಮುಖ ನಾಲ್ಕು ವಿಕೆಟ್‌ ಕಬಳಿಸಿದರು. ಇಶಾಂತ್‌ ಶರ್ಮಾ, ಸಿರಾಜ್‌, ಅರ್ಶದ್‌ ಖಾನ್‌ ಹಾಗೂ ಸಾಯ್‌ ಕಿಶೋರ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

ಗುಜರಾತ್‌ ಇನ್ನಿಂಗ್ಸ್‌: ಬೃಹತ್‌ ಮೊತ್ತ ಬೆನ್ನತ್ತಿದ ಗುಜರಾತ್‌ಗೆ ಆರಂಭಿಕ ಆಘಾತ ಎದುರಾಯಿತು. ನಾಯಕ ಗಿಲ್‌ 7(5) ರನ್‌ ಗಳಿಸಿ ಇಲ್ಲದ ರನ್‌ ಕದಿಯಲು ಹೋಗಿ ಔಟಾದರು. ಸಾಯ್‌ ಸುದರ್ಶನ್‌ 36(21) ರನ್‌ ಕಲೆಹಾಕಿ ಹೊರನಡೆದರು.

ಬಳಿಕ ಜೊತೆಯಾದ ಜೋಸ್‌ ಬಟ್ಲರ್‌ ಹಾಗೂ ರುದರ್‌ಫರ್ಡ್‌ ಡೆಲ್ಲಿ ಬೌಲರ್‌ಗಳನ್ನು ಕಾಡಿದರು. ಈ ಜೋಡಿ ಭರ್ಜರಿ ಬ್ಯಾಟಿಂಗ್‌ ಮೂಲಕ ಉತ್ತಮ ಇನ್ನಿಂಗ್ಸ್‌ ಕಟ್ಟಿಕೊಟ್ಟರು. ಈ ಜೋಡಿ ಬರೋಬ್ಬರಿ ಶತಕದಾಟದ ಜೊತೆಯಾಟ ನೀಡಿದರು.

ರುದರ್‌ಫರ್ಡ್‌ 43(34) ರನ್‌ ಗಳಿಸಿ ಔಟಾದರೇ, ಜೋಸ್‌ ಬಟ್ಲರ್‌ ಔಟಾಗದೇ 54 ಎಸೆತಗಳಲ್ಲಿ 11 ಬೌಂಡರಿ, 4 ಸಿಕ್ಸರ್‌ ಸಹಿತ 97 ರನ್‌ ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಕೊನೆಯಲ್ಲಿ ಬಂದ ತೆವಾಟಿಯಾ ಕೇವಲ ಮೂರು ಎಸೆತಗಳಲ್ಲಿ 11 ರನ್‌ ಗಳಿಸಿ ಅಜೇಯರಾಗಿ ಉಳಿದರು.

ಡೆಲ್ಲಿ ಪರ ಮುಖೇಶ್‌ ಕುಮಾರ್‌ ಮತ್ತು ಕುಲ್ದೀಪ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಪಂದ್ಯಶ್ರೇಷ್ಠ: ಜೋಸ್‌ ಬಟ್ಲರ್‌

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

2 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

2 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

2 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

2 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

2 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

2 hours ago