ಕ್ರೀಡೆ

IPL 2025 | ಡೆಲ್ಲಿ ವಿರುದ್ಧ ಗುಜರಾತ್‌ಗೆ ಜಯ ; ಪಾಯಿಂಟ್‌ ಪಟ್ಟಿಯಲ್ಲೂ ಅಗ್ರಸ್ಥಾನ

ಅಲಹಾಬಾದ್‌: ಜೋಸ್‌ ಬಟ್ಲರ್‌ ಹಾಗೂ ರುದರ್‌ಫರ್ಡ್‌ ಅವರ ಶತಕದಾಟದ ಬಲದಿಂದ ಟೇಬಲ್‌ ಟಾಪರ್‌ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಗುಜರಾತ್‌ ಜೈಂಟ್ಸ್‌ 7 ವಿಕೆಟ್‌ಗಳ ಅಂತರದಿಂದ ಬಗ್ಗು ಬಡಿಯಿತು.

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಣದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ಗುಜರಾತ್‌ ಟೈಟನ್ಸ್‌ ನಡುವಣ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿ, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 203 ರನ್‌ ಗಳಿಸಿ ಎದುರಾಳಿ ತಂಡಕ್ಕೆ 204 ರನ್‌ ಟಾರ್ಗೆಟ್‌ ನೀಡಿತು. ಈ ಮೊತ್ತ ಬೆನ್ನತ್ತಿದ ಗುಜರಾತ್‌ 19.2 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 204 ರನ್‌ ಗಳಿಸಿ 7 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿತು.

ಡೆಲ್ಲಿ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿಗೆ ಉತ್ತಮ ಆರಂಭ ದೊರೆಯಿತು. ಅಭಿಷೇಕ್‌ ಪೋರೆಲ್‌ 18(9), ಕರುಣ್‌ ನಾಯರ್‌ 31(18) ರನ್‌ ಗಳಿಸಿ ಔಟಾದರು.

ಬಳಿಕ ಬಂದ ಕೆ.ಎಲ್‌. ರಾಹುಲ್‌ 28(14), ನಾಯಕ ಅಕ್ಷರ್‌ ಪಟೇಲ್‌ 39(32) ರನ್‌ ಗಳಿಸಿದರು. ಉಳಿದಂತೆ ಸ್ಟಬ್ಸ್‌ 31(21), ಅಶುತೋಶ್‌ ಶರ್ಮಾ 37(19), ವಿಪ್ರಾಜ್‌ ಡಕ್‌ಔಟ್‌, ಫರೆರಿಯಾ 1(3) ರನ್‌ ಗಳಿಸಿದರು.

ಮಿಚೆಲ್‌ ಸ್ಟಾರ್ಕ್‌ ಹಾಗೂ ಕುಲ್ದೀಪ್‌ ಯಾದವ್‌ ಔಟಾಗದೇ 2(2) ಮತ್ತು 4(1) ರನ್‌ ಗಳಿಸಿದರು.

ಗುಜರಾತ್‌ ಪರ ಕನ್ನಡಿಗ ಪ್ರಸಿದ್ಧ್‌ ಕೃಷ್ಣ ಪ್ರಮುಖ ನಾಲ್ಕು ವಿಕೆಟ್‌ ಕಬಳಿಸಿದರು. ಇಶಾಂತ್‌ ಶರ್ಮಾ, ಸಿರಾಜ್‌, ಅರ್ಶದ್‌ ಖಾನ್‌ ಹಾಗೂ ಸಾಯ್‌ ಕಿಶೋರ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

ಗುಜರಾತ್‌ ಇನ್ನಿಂಗ್ಸ್‌: ಬೃಹತ್‌ ಮೊತ್ತ ಬೆನ್ನತ್ತಿದ ಗುಜರಾತ್‌ಗೆ ಆರಂಭಿಕ ಆಘಾತ ಎದುರಾಯಿತು. ನಾಯಕ ಗಿಲ್‌ 7(5) ರನ್‌ ಗಳಿಸಿ ಇಲ್ಲದ ರನ್‌ ಕದಿಯಲು ಹೋಗಿ ಔಟಾದರು. ಸಾಯ್‌ ಸುದರ್ಶನ್‌ 36(21) ರನ್‌ ಕಲೆಹಾಕಿ ಹೊರನಡೆದರು.

ಬಳಿಕ ಜೊತೆಯಾದ ಜೋಸ್‌ ಬಟ್ಲರ್‌ ಹಾಗೂ ರುದರ್‌ಫರ್ಡ್‌ ಡೆಲ್ಲಿ ಬೌಲರ್‌ಗಳನ್ನು ಕಾಡಿದರು. ಈ ಜೋಡಿ ಭರ್ಜರಿ ಬ್ಯಾಟಿಂಗ್‌ ಮೂಲಕ ಉತ್ತಮ ಇನ್ನಿಂಗ್ಸ್‌ ಕಟ್ಟಿಕೊಟ್ಟರು. ಈ ಜೋಡಿ ಬರೋಬ್ಬರಿ ಶತಕದಾಟದ ಜೊತೆಯಾಟ ನೀಡಿದರು.

ರುದರ್‌ಫರ್ಡ್‌ 43(34) ರನ್‌ ಗಳಿಸಿ ಔಟಾದರೇ, ಜೋಸ್‌ ಬಟ್ಲರ್‌ ಔಟಾಗದೇ 54 ಎಸೆತಗಳಲ್ಲಿ 11 ಬೌಂಡರಿ, 4 ಸಿಕ್ಸರ್‌ ಸಹಿತ 97 ರನ್‌ ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಕೊನೆಯಲ್ಲಿ ಬಂದ ತೆವಾಟಿಯಾ ಕೇವಲ ಮೂರು ಎಸೆತಗಳಲ್ಲಿ 11 ರನ್‌ ಗಳಿಸಿ ಅಜೇಯರಾಗಿ ಉಳಿದರು.

ಡೆಲ್ಲಿ ಪರ ಮುಖೇಶ್‌ ಕುಮಾರ್‌ ಮತ್ತು ಕುಲ್ದೀಪ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಪಂದ್ಯಶ್ರೇಷ್ಠ: ಜೋಸ್‌ ಬಟ್ಲರ್‌

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

16 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

18 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

19 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

22 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

2 days ago