ಕ್ರೀಡೆ

IPL 2025 | ಕೋಲ್ಕತ್ತಗೆ 80 ರನ್‌ಗಳ ಜಯ ; ಸನ್‌ರೈಸರ್ಸ್‌ಗೆ ಹೀನಾಯ ಸೋಲು

ಕೋಲ್ಕತ್ತಾ: ರಘುವಂಶಿ, ವೆಂಕಟೇಶ್‌ ಅಯ್ಯರ್‌ ಅವರ ಅಮೋಘ ಬ್ಯಾಟಿಂಗ್‌, ಅರೋರಾ ಹಾಗೂ ವರುಣ್‌ ಚಕ್ರವರ್ತಿ ಅವರ ಮಾರಕ ದಾಳಿಯ ನೆರವಿನಿಂದ ಬಲಿಷ್ಠ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಅತಿಥೇಯ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡ 80 ರನ್‌ಗಳ ಅಂತರದಿಂದ ಬಗ್ಗು ಬಡಿಯಿತು.

ಇಲ್ಲಿನ ಈಡೆನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ನಡೆದ ಕೋಲ್ಕತ್ತಾ ನೈಟ್‌ರೈಡರ್ಸ್‌ ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ ನಡುವಣ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಕೆಕೆಆರ್‌ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 200 ರನ್‌ ಕಲೆಹಾಕಿತು. ಇದನ್ನು ಬೆನ್ನತ್ತಿದ ಎಸ್‌ಆರ್‌ಎಚ್‌ 16.4 ಓವರ್‌ಗಳಲ್ಲಿ ಆಲ್‌ಔಟ್‌ ಆಗುವ ಮೂಲಕ 120 ರನ್‌ ಗಳಿಸಿ 80 ರನ್‌ಗಳ ಅಂತರದಿಂದ ಹೀನಾಯ ಸೋಲು ಕಂಡಿತು.

ಕೆಕೆಆರ್‌ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಇಳಿದ ಕೆಕೆಆರ್‌ ಪರ ಸುನೀಲ್‌ ನರೈನ್‌ ಹಾಗೂ ಡಿಕಾಕ್‌ ಇನ್ನಿಂಗ್ಸ್‌ ಆರಂಭಿಸಿದರು. ಆದರೆ ಈ ಇಬ್ಬರು ಆಟಗಾರರು ಭದ್ರ ಇನ್ನಿಂಗ್ಸ್‌ ಕಟ್ಟುವಲ್ಲಿ ವಿಫಲರಾದರು. ನರೈನ್‌ 7(7) ರನ್‌ ಗಳಿಸಿ ಔಟಾದರೇ, ಡಿಕಾಕ್‌ 1(6) ರನ್‌ ಗಳಿಸಿ ಬಂದಷ್ಟೆ ವೇಗವಾಗಿ ಹಿಂತಿರುಗಿದರು.

ಬಳಿಕ ಒಂದಾದ ನಾಯಕ ಅಜಿಂಕ್ಯಾ ರಹಾನೆ ಹಾಗೂ ರಘುವಂಶಿ ಉತ್ತಮ ಜೊತೆಯಾಟ ನೀಡಿದರು. ಈ ಜೋಡಿ 80 ರನ್‌ಗಳ ಜೊತೆಯಾಟ ನೀಡಿತು. ಇದರಲ್ಲಿ ರಹಾನೆ 38(27), ರಘುವಂಶಿ 50(32) ಅರ್ಧಶತಕ ಗಳಿಸಿ ಔಟಾದರು.

ಕೊನೆಯಲ್ಲಿ ಭರ್ಜರಿಯಾಗಿ ಬ್ಯಾಟ್‌ ಬೀಸಿದ ವೆಂಕಟೇಶ್‌ ಅಯ್ಯರ್‌ 29 ಎಸೆತಗಳಲ್ಲಿ 7ಬೌಂಡರಿ, 3 ಸಿಕ್ಸರ್‌ ಸಹಿತ 60 ರನ್‌ ಬಾರಿಸಿದರು. ಇವರಿಗೆ ರಿಂಕು ಸಿಂಗ್‌ ಔಟಾಗದೇ 32(17) ರನ್‌ ಗಳಿಸಿ ಸಾಥ್‌ ನೀಡಿದರು. ರಸೆಲ್‌ 1(2) ರನ್‌ ಗಳಿಸಿದರು.

ಹೈದರಾಬಾದ್‌ ಪರ ನಾಯಕ ಕಮಿನ್ಸ್‌, ಶಮಿ, ಅನ್ಸಾರಿ, ಹರ್ಷಲ್‌ ಪಟೇಲ್‌ ಹಾಗೂ ಕಮಿಂದು ಮೆಂಡೀಸ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

ಎಸ್‌ಆರ್‌ಎಚ್‌ ಇನ್ನಿಂಗ್ಸ್‌: ಬೃಹತ್‌ ಮೊತ್ತ ಬೆನ್ನತ್ತಿದ ಎಸ್‌ಆರ್‌ಎಚ್‌ಗೆ ಆರಂಭಿಕ ಆಘಾತ ಎದುರಾಯಿತು. ಆರಂಭಿಕ ಬ್ಯಾಟರ್‌ ಟ್ರಾವಿಸ್‌ ಹೆಡ್‌ 4(2) ರನ್‌ ಗಳಿಸಿ ಪೆವಿಲಿಯನ್‌ ಸೇರಿದರು. ಅಭಿಷೇಕ್‌ ಶರ್ಮಾ 2(6), ಇಶಾನ್‌ ಕಿಸಾನ್‌ 2(5) ರನ್‌ ಗಳಿಸಿ ಬಂದಷ್ಟೆ ವೇಗವಾಗಿ ಪೆವಿಲಿಯನ್‌ ಪೆರೇಡ್‌ ನಡೆಸಿದರು. ಕೇವಲ 2.1 ಓವರ್‌ಗಳಲ್ಲಿ ಎಸ್‌ಆರ್‌ಎಚ್‌ ತನ್ನ ಪ್ರಮುಖ ಮೂರು ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಹೈದರಾಬಾದ್‌ ಪರ ಹೆನ್ರಿಚ್‌ ಕ್ಲಾಸೆನ್‌ 33(21) ಗಳಿಸಿದ ರನ್‌ ವೈಯಕ್ತಿಕ ಗರಿಷ್ಠ ರನ್‌ ಆಗಿತ್ತು. ಮತ್ತೊಮ್ಮೆ ಮಧ್ಯಮ ಕ್ರಮಾಂಕ ಕೈಕೊಟ್ಟ ಕಾರಣ ಹೈದರಾಬಾದ್‌ ಸೋಲು ಅನುಭವಿಸಿತು. ನಿತೀಶ್‌ ಕುಮಾರ್‌ ರೆಡ್ಡಿ 19(15), ಕಮಿಂದು ಮೆಂಡೀಸ್‌ 27(20), ಅನಿಕೇತ್‌ ವರ್ಮಾ 6(6), ಪ್ಯಾಟ್‌ ಕಮಿನ್ಸ್‌ 14(15), ಹರ್ಷಲ್‌ ಪಟೇಲ್‌ 3(5), ಸಮರ್ಜಿತ್‌ ಸಿಂಗ್‌ ಡಕ್‌ಔಟ್‌, ಮೊಹಮ್ಮದ್‌ ಶಮಿ ಔಟಾಗದೇ 2(4) ರನ್‌ ಗಳಿಸಿದರು.

ಕೆಕೆಆರ್‌ ಪರ ವೈಭವ್‌ ಅರೋರಾ, ವರುಣ್‌ ಚಕ್ರವರ್ತಿ ತಲಾ ಮೂರು ವಿಕೆಟ್‌, ರಸೆಲ್‌ ಎರಡು ವಿಕೆಟ್‌, ಸುನೀಲ್‌ ನರೈನ್‌ ಹಾಗೂ ಹರ್ಷಿತ್‌ ರಾಣಾ ತಲಾ ಒಂದೊಂದು ವಿಕೆಟ್‌ ಪಡೆದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

3 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

4 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

5 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

5 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

5 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

13 hours ago