ಕ್ರೀಡೆ

IPL 2025 | ರಾಜಸ್ಥಾನ್‌ ವಿರುದ್ಧ ಲಖೌನ್‌ಗೆ ರೋಚಕ ಗೆಲುವು

ಜೈಪುರ್: ಡೆತ್ ಓವರ್‌ನಲ್ಲಿ ಅದ್ಭುತ ಸ್ಪೆಲ್ ಮಾಡಿದ ಲಖನೌ ತಂಡದ ಆವೇಶ್ ಖಾನ್ ಅತಿಥೇಯ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಲಖನೌ ಸೂಪರ್ ಜೈಂಟ್ಸ್ ತಂಡಕ್ಕೆ 2 ರನ್‌ಗಳ ರೋಚಕ ಗೆಲುವು ತಂದುಕೊಟ್ಟರು.

ಇಲ್ಲಿನ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಲಖನೌ ಸೂಪರ್ ಜೈಂಟ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 5ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿ ಎದುರಾಳಿಗೆ 181 ರನ್ ಗಳ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 178 ರನ್ ಗಳಿಸಿ 2 ವಿಕೆಟ್‌ಗಳ ಅಂತರದ ಹೀನಾಯ ಸೋಲು ಕಂಡಿತು.

ಲಖನೌ ಇನ್ನಿಂಗ್ಸ್: ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಲಖನೌಗೆ ಆರಂಭಿಕ ಹಿನ್ನಡೆ ಎದುರಾಯಿತು. ಆರಂಭಿಕ ಆಟಗಾರ ಐಡೆನ್ ಮಾಕ್ರ್ರಂ 66(45) ರನ್, ಆಯೂಷ್‌ ಬದೋನಿ 50(34) ರನ್ ಹೊರತುಪಡಿಸಿ ಬೇರಾರಿಂದಲೂ ನಿರೀಕ್ಷಿತ ಆಟ ಕಂಡುಬರಲಿಲ್ಲ.

ಮಿಡೆಲ್ ಆರ್ಡರ್ ಕೈಕೊಟ್ಟ ಪರಿಣಾಮ ತಂಡ ಬೃಹತ್ ಮೊತ್ತ ಕಲೆಹಾಕುವಲ್ಲಿ ವಿಫಲವಾಯಿತು. ತಂಡದ ಪರವಾಗಿ ಮಿಚೆಲ್ ಮಾರ್ಷ್ 4(6), ಪೂರನ್ 11(8), ನಾಯಕ ಪಂತ್ 3(9), ರನ್ ಗಳಿಸಿದರು.

ಕೊನೆಯಲ್ಲಿ ಅಬ್ಬರಿಸಿದ ಅಬ್ದುಲ್ ಸಮದ್ 30(19) ರನ್ ಗಳಿಸಿ ಔಟಾಗದೇ ಉಳಿದರೇ, ಡೆವಿಡ್ ಮಿಲ್ಲರ್ 7(8) ರನ್ ಗಳಿಸಿ ಅವರಿಗೆ ಸಾಥ್ ನೀಡಿದರು.

ರಾಜಸ್ಥಾನ್‌ ಇನ್ನಿಂಗ್ಸ್: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ರಾಜಸ್ಥಾನ್‌ಗೆ ಭರ್ಜರಿ ಆರಂಭ ದೊರೆಯಿತು. ಅತೀಕಿರಿಯ ಆಟಗಾರನಾಗಿ ಐಪಿಎಲ್ ಪಾದಾರ್ಪಣೆ ಮಾಡಿದ ವೈಭವ್ ಸೂರ್ಯವಂಶಿ 34(20) ರನ್ ಕಲೆಹಾಕಿ ಔಟಾದರೇ, ಭರವಸೆ ಆಟಗಾರ ಯಶಸ್ವಿ ಜೈಸ್ವಾಲ್ ಕೇವಲ 52 ಎಸೆತ ಎದುರಿಸಿ 5 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 74 ರನ್ ಚಚ್ಚಿದರು.

ಬಳಿಕ ಬಂದ ಹೇಟ್ನಾಯರ್ 12(7), ನಾಯಕ ರಿಯಾನ್ ಪರಾಗ್ 39(26) ರನ್ ಗಳಿಸಿ ಅಲ್ಪ ಹೋರಾಟ ನೀಡಿದರು ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾದರು. ಆ ಬಳಿಕ ಬಂದ ಬೇರೆ ಯಾರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಧ್ರುವ್ ಜುರೇಲ್ ಔಟಾಗದೆ 6(5), ಶಿವಂ ದುಬೆ 3(3) ರನ್‌ ಗಳಿಸಿ ಸ್ಟ್ರೀಸ್‌ನಲ್ಲಿದ್ದೂ ತಂಡವನ್ನು ಗೆಲ್ಲಿಸಲಾಗಲಿಲ್ಲ.

ಲಖನೌ ಪರ ಆವೇಶ್‌ ಖಾನ್ ಪ್ರಮುಖ ನಾಲ್ಕು ವಿಕೆಟ್ ಪಡೆದು ಗಮನ ಸೆಳೆದರು. ಮಾಕ್ರ್ರಂ ಹಾಗೂ ಶಾರ್ದುಲ್ ಠಾಕೂರ್ ತಲಾ ಒಂದೊಂದು ವಿಕೆಟ್ ಪಡೆದರು.

ಪಂದ್ಯಶ್ರೇಷ್ಠ: ಆವೇಶ್ ಖಾನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿರಾಜಪೇಟೆ ಐತಿಹಾಸಿಕ ಕೆರೆಗಳ ಒತ್ತುವರಿ ಆರೋಪ

ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…

56 mins ago

ಪಿಯುಸಿ : ಗುಂಡ್ಲುಪೇಟೆಯಲ್ಲಿ ಬಾಲಕಿಯರೇ ಮೇಲುಗೈ

ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್‌ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…

1 hour ago

ಮೈಸೂರು ಜಿಲ್ಲೆಯ 147 ಗ್ರಾಪಂಗಳೀಗ ಕ್ಷಯ ಮುಕ್ತ!

ಡಿಎಚ್‌ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…

1 hour ago

ಓದುಗರ ಪತ್ರ | ಜನಗಣತಿ ಪಾರದರ್ಶಕ,ನಿಖರವಾಗಿರಲಿ. . .

ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು…

1 hour ago

ಬಾಪೂ ಆದರ್ಶ ಮಡದಿ ಕಸ್ತೂರ ಬಾ ಗಾಂಧಿ

ಡಾ.ಎಂ.ಡಿ.ಉಮೇಶ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪತ್ನಿ ಕಸ್ತೂರ ಬಾ ಅವರು ಏ. ೧೧, ೧೮೬೯ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಗೋಕುಲ್‌ದಾಸ್ ಕಪಾಡಿಯಾ…

2 hours ago

ದಳಪತಿ ವಿಜಯ್‌ಗೆ ಮತ್ತೆ ಸಂಕಷ್ಟ : ಬಿಡುಗಡೆಗೂ ಮೊದಲೆ ʻಜನ ನಾಯಗನ್‌ʼ ಸೋರಿಕೆ.

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ…

3 hours ago