ಕ್ರೀಡೆ

IPL 2025 | ರಾಜಸ್ಥಾನ್‌ ವಿರುದ್ಧ ಲಖೌನ್‌ಗೆ ರೋಚಕ ಗೆಲುವು

ಜೈಪುರ್: ಡೆತ್ ಓವರ್‌ನಲ್ಲಿ ಅದ್ಭುತ ಸ್ಪೆಲ್ ಮಾಡಿದ ಲಖನೌ ತಂಡದ ಆವೇಶ್ ಖಾನ್ ಅತಿಥೇಯ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಲಖನೌ ಸೂಪರ್ ಜೈಂಟ್ಸ್ ತಂಡಕ್ಕೆ 2 ರನ್‌ಗಳ ರೋಚಕ ಗೆಲುವು ತಂದುಕೊಟ್ಟರು.

ಇಲ್ಲಿನ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಲಖನೌ ಸೂಪರ್ ಜೈಂಟ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 5ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿ ಎದುರಾಳಿಗೆ 181 ರನ್ ಗಳ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 178 ರನ್ ಗಳಿಸಿ 2 ವಿಕೆಟ್‌ಗಳ ಅಂತರದ ಹೀನಾಯ ಸೋಲು ಕಂಡಿತು.

ಲಖನೌ ಇನ್ನಿಂಗ್ಸ್: ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಲಖನೌಗೆ ಆರಂಭಿಕ ಹಿನ್ನಡೆ ಎದುರಾಯಿತು. ಆರಂಭಿಕ ಆಟಗಾರ ಐಡೆನ್ ಮಾಕ್ರ್ರಂ 66(45) ರನ್, ಆಯೂಷ್‌ ಬದೋನಿ 50(34) ರನ್ ಹೊರತುಪಡಿಸಿ ಬೇರಾರಿಂದಲೂ ನಿರೀಕ್ಷಿತ ಆಟ ಕಂಡುಬರಲಿಲ್ಲ.

ಮಿಡೆಲ್ ಆರ್ಡರ್ ಕೈಕೊಟ್ಟ ಪರಿಣಾಮ ತಂಡ ಬೃಹತ್ ಮೊತ್ತ ಕಲೆಹಾಕುವಲ್ಲಿ ವಿಫಲವಾಯಿತು. ತಂಡದ ಪರವಾಗಿ ಮಿಚೆಲ್ ಮಾರ್ಷ್ 4(6), ಪೂರನ್ 11(8), ನಾಯಕ ಪಂತ್ 3(9), ರನ್ ಗಳಿಸಿದರು.

ಕೊನೆಯಲ್ಲಿ ಅಬ್ಬರಿಸಿದ ಅಬ್ದುಲ್ ಸಮದ್ 30(19) ರನ್ ಗಳಿಸಿ ಔಟಾಗದೇ ಉಳಿದರೇ, ಡೆವಿಡ್ ಮಿಲ್ಲರ್ 7(8) ರನ್ ಗಳಿಸಿ ಅವರಿಗೆ ಸಾಥ್ ನೀಡಿದರು.

ರಾಜಸ್ಥಾನ್‌ ಇನ್ನಿಂಗ್ಸ್: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ರಾಜಸ್ಥಾನ್‌ಗೆ ಭರ್ಜರಿ ಆರಂಭ ದೊರೆಯಿತು. ಅತೀಕಿರಿಯ ಆಟಗಾರನಾಗಿ ಐಪಿಎಲ್ ಪಾದಾರ್ಪಣೆ ಮಾಡಿದ ವೈಭವ್ ಸೂರ್ಯವಂಶಿ 34(20) ರನ್ ಕಲೆಹಾಕಿ ಔಟಾದರೇ, ಭರವಸೆ ಆಟಗಾರ ಯಶಸ್ವಿ ಜೈಸ್ವಾಲ್ ಕೇವಲ 52 ಎಸೆತ ಎದುರಿಸಿ 5 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 74 ರನ್ ಚಚ್ಚಿದರು.

ಬಳಿಕ ಬಂದ ಹೇಟ್ನಾಯರ್ 12(7), ನಾಯಕ ರಿಯಾನ್ ಪರಾಗ್ 39(26) ರನ್ ಗಳಿಸಿ ಅಲ್ಪ ಹೋರಾಟ ನೀಡಿದರು ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾದರು. ಆ ಬಳಿಕ ಬಂದ ಬೇರೆ ಯಾರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಧ್ರುವ್ ಜುರೇಲ್ ಔಟಾಗದೆ 6(5), ಶಿವಂ ದುಬೆ 3(3) ರನ್‌ ಗಳಿಸಿ ಸ್ಟ್ರೀಸ್‌ನಲ್ಲಿದ್ದೂ ತಂಡವನ್ನು ಗೆಲ್ಲಿಸಲಾಗಲಿಲ್ಲ.

ಲಖನೌ ಪರ ಆವೇಶ್‌ ಖಾನ್ ಪ್ರಮುಖ ನಾಲ್ಕು ವಿಕೆಟ್ ಪಡೆದು ಗಮನ ಸೆಳೆದರು. ಮಾಕ್ರ್ರಂ ಹಾಗೂ ಶಾರ್ದುಲ್ ಠಾಕೂರ್ ತಲಾ ಒಂದೊಂದು ವಿಕೆಟ್ ಪಡೆದರು.

ಪಂದ್ಯಶ್ರೇಷ್ಠ: ಆವೇಶ್ ಖಾನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

18 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

18 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

18 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

18 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

18 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

18 hours ago