Categories: ಕ್ರೀಡೆ

IPL 2025 ಮೆಗಾ ಹರಾಜು: ಇತಿಹಾಸ ನಿರ್ಮಿಸಿದ 13 ವಯಸ್ಸಿನ ವೈಭವ್‌ ಸೂರ್ಯವಂಶಿ

ಸೌದಿ ಅರೇಬಿಯಾದ ಜೆದ್ದಾದಲ್ಲಿ ನಡೆದ ಐಪಿಎಲ್‌ 2025ರ ಮೆಗಾ ಹರಾಜು ನೆನ್ನೆ(ಸೋಮವಾರ) ಮುಕ್ತಾಯಗೊಂಡಿದ್ದು ಹಲವು ವಿಶೇಷಗಳಿಗೆ ಕಾರಣವಾಗಿದೆ.

ಈ ಬಾರಿಯ ಹರಾಜಿನಲ್ಲಿ ಭಾರತ ತಂಡದ ವಿಕೆಟ್‌ ಕೀಪರ್‌ ಹಾಗೂ ಬ್ಯಾಟರ್‌ ರಿಷಭ್‌ ಪಂತ್‌ ಐಪಿಎಲ್‌ ಇತಿಹಾಸದಲ್ಲೇ ಅತಿ ಹೆಚ್ಚು ದಾಖಲೆಯ 27 ಕೋಟಿ ಮೊತ್ತಕ್ಕೆ ಲಕ್ನೋ ತಂಡದ ಪಾಲಾದದ್ದು. ಇನ್ನೊಂದು ವಿಶೇಷತೆ ಆದರೆ 13 ವಯಸ್ಸಿನ ಹುಡುಗನೊಬ್ಬನನ್ನು ಪ್ರಾಂಚೈಸಿಗಳು ಖರೀದಿಸಿದ್ದು.  ಹಾಗೆಯೇ ಹಲವಾರು ಟಿ20 ಪರಿಣಿತ ಆಟಗಾರರು ಮಾರಾಟವಾಗದೇ ಇರುವುದು ಅಚ್ಚರಿಯಾಗಿದೆ.

ವೈಭವ್‌ ಸೂರ್ಯವಂಶಿ ಎನ್ನುವ 13 ವಯಸ್ಸಿನ ಕಿರಿಯ ಆಟಗಾರನಿಗೆ ಈ ಬಾರಿಯ ಹರಾಜಿನಲ್ಲಿ ಟೀಂ ಪ್ರಾಂಚೈಸಿಗಳು ತುಂಬಾ ಬಿಡ್‌ಮಾಡಿದರು ಕೊನೆಯಲ್ಲಿ 1.10 ಕೋಟಿಗೆ ರಾಜಸ್ಥಾನ ಪಾಲಾದರು. 30 ಲಕ್ಷ ಮೂಲಬೆಲೆಯಿಂದ ಬಿಡ್‌ ಆರಂಭವಾಯಿತು.

ಬಿಹಾರದ ಸಮಸ್ತಿಪುರ ಜಿಲ್ಲೆಯ ಮೋತಿಪುರ್‌ ಗ್ರಾಮದ ಯುವಕ ವೈಭವ್‌ ಸೂರ್ಯವಂಶಿ. ಈಗ ದೇಶದಾದ್ಯಂತ ಕ್ರಿಕೆಟ್‌ನಲ್ಲಿ ವೈಭವ್‌ ವಯಸ್ಸು 13 ಅಲ್ಲ ಬದಲಿಗೆ 15ವರ್ಷ ಎಂದು ಚರ್ಚೆಯಾಗುತ್ತಿದ್ದು, ಈ ಕುರಿತು ಈತನ ತಂದೆ ಸಂಜಯ್‌ ಸೂರ್ಯವಂಶಿ ಸ್ಷಷ್ಟನೆ ನೀಡಿದ್ದಾರೆ.

ನನ್ನ ಮಗ 8.5 ವರ್ಷ ವಿದ್ದಾಗಲೇ ಬಿಸಿಸಿಐನ ಬೋನ್‌ ಟೆಸ್ಟ್‌ನಲ್ಲಿ ಕಾಣಿಸಿಕೊಂಡಿದ್ದಾನೆ. ಹಾಗೆಯೇ ಇಂಡಿಯಾದ ಪರವಾಗಿ ಅಡರ್‌ 19 ಈಗಾಗಲೇ ಆಡಿದ್ದಾನೆ. ಡೌಟ್‌ ಬಂದರೆ ಇನ್ನೊಮ್ಮೆ ಬೇಕಾದರೆ ವಯಸ್ಸಿನ ಪರೀಕ್ಷೆಯನ್ನು ಎದುರಿಸುತ್ತಾನೆ ಎಂದು ಹೇಳಿದರು.

ಬಿಹಾರದ ಕ್ರಿಕೆಟ್‌ ಅಸೋಷಿಯೇಶನ್‌ ಅಧ್ಯಕ್ಷ ರಾಕೇಶ್‌ ತಿವಾರಿ ಅವರ ಆಶೀರ್ವಾದ ನಮ್ಮ ಮಗನ ಮೇಲಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು. ಏಕೆಂದರೆ ನಾಗ್ಪುರದಲ್ಲಿ ನಡೆದಿದ್ದ ಪರೀಕ್ಷಾ ಪಂದ್ಯದಲ್ಲಿ ಭಾಗವಹಿಸಿ ನನ್ನ ಮಗ ಓಂದೇ ಓವರ್‌ನಲ್ಲಿ 17 ರನ್‌ ಒಡೆಯುವ ಮೂಲಕ ವಿಕ್ರಂ ರಾಥೋಡ್‌ ಅವರು ನೀಡಿದ್ದ ಪರೀಕ್ಷೆಯನ್ನು ಪಾಸು ಮಾಡಿದ್ದ ಎಂದಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

4 hours ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

4 hours ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

4 hours ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

4 hours ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

5 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

5 hours ago