Categories: ಕ್ರೀಡೆ

IPL 2025 ಮೆಗಾ ಹರಾಜು: ಇತಿಹಾಸ ನಿರ್ಮಿಸಿದ 13 ವಯಸ್ಸಿನ ವೈಭವ್‌ ಸೂರ್ಯವಂಶಿ

ಸೌದಿ ಅರೇಬಿಯಾದ ಜೆದ್ದಾದಲ್ಲಿ ನಡೆದ ಐಪಿಎಲ್‌ 2025ರ ಮೆಗಾ ಹರಾಜು ನೆನ್ನೆ(ಸೋಮವಾರ) ಮುಕ್ತಾಯಗೊಂಡಿದ್ದು ಹಲವು ವಿಶೇಷಗಳಿಗೆ ಕಾರಣವಾಗಿದೆ.

ಈ ಬಾರಿಯ ಹರಾಜಿನಲ್ಲಿ ಭಾರತ ತಂಡದ ವಿಕೆಟ್‌ ಕೀಪರ್‌ ಹಾಗೂ ಬ್ಯಾಟರ್‌ ರಿಷಭ್‌ ಪಂತ್‌ ಐಪಿಎಲ್‌ ಇತಿಹಾಸದಲ್ಲೇ ಅತಿ ಹೆಚ್ಚು ದಾಖಲೆಯ 27 ಕೋಟಿ ಮೊತ್ತಕ್ಕೆ ಲಕ್ನೋ ತಂಡದ ಪಾಲಾದದ್ದು. ಇನ್ನೊಂದು ವಿಶೇಷತೆ ಆದರೆ 13 ವಯಸ್ಸಿನ ಹುಡುಗನೊಬ್ಬನನ್ನು ಪ್ರಾಂಚೈಸಿಗಳು ಖರೀದಿಸಿದ್ದು.  ಹಾಗೆಯೇ ಹಲವಾರು ಟಿ20 ಪರಿಣಿತ ಆಟಗಾರರು ಮಾರಾಟವಾಗದೇ ಇರುವುದು ಅಚ್ಚರಿಯಾಗಿದೆ.

ವೈಭವ್‌ ಸೂರ್ಯವಂಶಿ ಎನ್ನುವ 13 ವಯಸ್ಸಿನ ಕಿರಿಯ ಆಟಗಾರನಿಗೆ ಈ ಬಾರಿಯ ಹರಾಜಿನಲ್ಲಿ ಟೀಂ ಪ್ರಾಂಚೈಸಿಗಳು ತುಂಬಾ ಬಿಡ್‌ಮಾಡಿದರು ಕೊನೆಯಲ್ಲಿ 1.10 ಕೋಟಿಗೆ ರಾಜಸ್ಥಾನ ಪಾಲಾದರು. 30 ಲಕ್ಷ ಮೂಲಬೆಲೆಯಿಂದ ಬಿಡ್‌ ಆರಂಭವಾಯಿತು.

ಬಿಹಾರದ ಸಮಸ್ತಿಪುರ ಜಿಲ್ಲೆಯ ಮೋತಿಪುರ್‌ ಗ್ರಾಮದ ಯುವಕ ವೈಭವ್‌ ಸೂರ್ಯವಂಶಿ. ಈಗ ದೇಶದಾದ್ಯಂತ ಕ್ರಿಕೆಟ್‌ನಲ್ಲಿ ವೈಭವ್‌ ವಯಸ್ಸು 13 ಅಲ್ಲ ಬದಲಿಗೆ 15ವರ್ಷ ಎಂದು ಚರ್ಚೆಯಾಗುತ್ತಿದ್ದು, ಈ ಕುರಿತು ಈತನ ತಂದೆ ಸಂಜಯ್‌ ಸೂರ್ಯವಂಶಿ ಸ್ಷಷ್ಟನೆ ನೀಡಿದ್ದಾರೆ.

ನನ್ನ ಮಗ 8.5 ವರ್ಷ ವಿದ್ದಾಗಲೇ ಬಿಸಿಸಿಐನ ಬೋನ್‌ ಟೆಸ್ಟ್‌ನಲ್ಲಿ ಕಾಣಿಸಿಕೊಂಡಿದ್ದಾನೆ. ಹಾಗೆಯೇ ಇಂಡಿಯಾದ ಪರವಾಗಿ ಅಡರ್‌ 19 ಈಗಾಗಲೇ ಆಡಿದ್ದಾನೆ. ಡೌಟ್‌ ಬಂದರೆ ಇನ್ನೊಮ್ಮೆ ಬೇಕಾದರೆ ವಯಸ್ಸಿನ ಪರೀಕ್ಷೆಯನ್ನು ಎದುರಿಸುತ್ತಾನೆ ಎಂದು ಹೇಳಿದರು.

ಬಿಹಾರದ ಕ್ರಿಕೆಟ್‌ ಅಸೋಷಿಯೇಶನ್‌ ಅಧ್ಯಕ್ಷ ರಾಕೇಶ್‌ ತಿವಾರಿ ಅವರ ಆಶೀರ್ವಾದ ನಮ್ಮ ಮಗನ ಮೇಲಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು. ಏಕೆಂದರೆ ನಾಗ್ಪುರದಲ್ಲಿ ನಡೆದಿದ್ದ ಪರೀಕ್ಷಾ ಪಂದ್ಯದಲ್ಲಿ ಭಾಗವಹಿಸಿ ನನ್ನ ಮಗ ಓಂದೇ ಓವರ್‌ನಲ್ಲಿ 17 ರನ್‌ ಒಡೆಯುವ ಮೂಲಕ ವಿಕ್ರಂ ರಾಥೋಡ್‌ ಅವರು ನೀಡಿದ್ದ ಪರೀಕ್ಷೆಯನ್ನು ಪಾಸು ಮಾಡಿದ್ದ ಎಂದಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

6 mins ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

20 mins ago

ಬೆಳಗಾವಿ-ಮುಂಬೈ ಇಂಡಿಗೋ ವಿಮಾನ ಸೇವೆ: ದಿನಾಂಕ ಫಿಕ್ಸ್‌

ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ…

53 mins ago

ಬಾಲ್ಯವಿವಾಹ, ವರದಕ್ಷಿಣೆ ಕಾಯ್ದೆ ಕುರಿತು ಅರಿವು ಮೂಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವತಿಯಿಂದ ಗ್ರಾಮಗಳಲ್ಲಿ ಬೀದಿ…

1 hour ago

ಮೊದಲ ಬಾರಿ ಗೆದ್ದ 5 ಶಾಸಕರಿಗೆ ಮಂತ್ರಿ ಸ್ಥಾನ ಕೊಡಬೇಕು: ಪ್ರದೀಪ್‌ ಈಶ್ವರ್‌

ಬೆಂಗಳೂರು: ಮೊದಲ ಬಾರಿ ಗೆದ್ದ 31 ಶಾಸಕರ ಪೈಕಿ ಜನರಿಗಾದರೂ ಸಚಿವ ಸ್ಥಾನ ಕೊಡಬೇಕು. ಹೀಗಾಗಿ ನಾವೆಲ್ಲರೂ ಸೇರಿ ಹೈಕಮಾಂಡ್‌ಗೆ…

1 hour ago

ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ ಆಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, 200…

1 hour ago