Categories: ಕ್ರೀಡೆ

IPL 2025 ಮೆಗಾ ಹರಾಜು: ಇತಿಹಾಸ ನಿರ್ಮಿಸಿದ 13 ವಯಸ್ಸಿನ ವೈಭವ್‌ ಸೂರ್ಯವಂಶಿ

ಸೌದಿ ಅರೇಬಿಯಾದ ಜೆದ್ದಾದಲ್ಲಿ ನಡೆದ ಐಪಿಎಲ್‌ 2025ರ ಮೆಗಾ ಹರಾಜು ನೆನ್ನೆ(ಸೋಮವಾರ) ಮುಕ್ತಾಯಗೊಂಡಿದ್ದು ಹಲವು ವಿಶೇಷಗಳಿಗೆ ಕಾರಣವಾಗಿದೆ.

ಈ ಬಾರಿಯ ಹರಾಜಿನಲ್ಲಿ ಭಾರತ ತಂಡದ ವಿಕೆಟ್‌ ಕೀಪರ್‌ ಹಾಗೂ ಬ್ಯಾಟರ್‌ ರಿಷಭ್‌ ಪಂತ್‌ ಐಪಿಎಲ್‌ ಇತಿಹಾಸದಲ್ಲೇ ಅತಿ ಹೆಚ್ಚು ದಾಖಲೆಯ 27 ಕೋಟಿ ಮೊತ್ತಕ್ಕೆ ಲಕ್ನೋ ತಂಡದ ಪಾಲಾದದ್ದು. ಇನ್ನೊಂದು ವಿಶೇಷತೆ ಆದರೆ 13 ವಯಸ್ಸಿನ ಹುಡುಗನೊಬ್ಬನನ್ನು ಪ್ರಾಂಚೈಸಿಗಳು ಖರೀದಿಸಿದ್ದು.  ಹಾಗೆಯೇ ಹಲವಾರು ಟಿ20 ಪರಿಣಿತ ಆಟಗಾರರು ಮಾರಾಟವಾಗದೇ ಇರುವುದು ಅಚ್ಚರಿಯಾಗಿದೆ.

ವೈಭವ್‌ ಸೂರ್ಯವಂಶಿ ಎನ್ನುವ 13 ವಯಸ್ಸಿನ ಕಿರಿಯ ಆಟಗಾರನಿಗೆ ಈ ಬಾರಿಯ ಹರಾಜಿನಲ್ಲಿ ಟೀಂ ಪ್ರಾಂಚೈಸಿಗಳು ತುಂಬಾ ಬಿಡ್‌ಮಾಡಿದರು ಕೊನೆಯಲ್ಲಿ 1.10 ಕೋಟಿಗೆ ರಾಜಸ್ಥಾನ ಪಾಲಾದರು. 30 ಲಕ್ಷ ಮೂಲಬೆಲೆಯಿಂದ ಬಿಡ್‌ ಆರಂಭವಾಯಿತು.

ಬಿಹಾರದ ಸಮಸ್ತಿಪುರ ಜಿಲ್ಲೆಯ ಮೋತಿಪುರ್‌ ಗ್ರಾಮದ ಯುವಕ ವೈಭವ್‌ ಸೂರ್ಯವಂಶಿ. ಈಗ ದೇಶದಾದ್ಯಂತ ಕ್ರಿಕೆಟ್‌ನಲ್ಲಿ ವೈಭವ್‌ ವಯಸ್ಸು 13 ಅಲ್ಲ ಬದಲಿಗೆ 15ವರ್ಷ ಎಂದು ಚರ್ಚೆಯಾಗುತ್ತಿದ್ದು, ಈ ಕುರಿತು ಈತನ ತಂದೆ ಸಂಜಯ್‌ ಸೂರ್ಯವಂಶಿ ಸ್ಷಷ್ಟನೆ ನೀಡಿದ್ದಾರೆ.

ನನ್ನ ಮಗ 8.5 ವರ್ಷ ವಿದ್ದಾಗಲೇ ಬಿಸಿಸಿಐನ ಬೋನ್‌ ಟೆಸ್ಟ್‌ನಲ್ಲಿ ಕಾಣಿಸಿಕೊಂಡಿದ್ದಾನೆ. ಹಾಗೆಯೇ ಇಂಡಿಯಾದ ಪರವಾಗಿ ಅಡರ್‌ 19 ಈಗಾಗಲೇ ಆಡಿದ್ದಾನೆ. ಡೌಟ್‌ ಬಂದರೆ ಇನ್ನೊಮ್ಮೆ ಬೇಕಾದರೆ ವಯಸ್ಸಿನ ಪರೀಕ್ಷೆಯನ್ನು ಎದುರಿಸುತ್ತಾನೆ ಎಂದು ಹೇಳಿದರು.

ಬಿಹಾರದ ಕ್ರಿಕೆಟ್‌ ಅಸೋಷಿಯೇಶನ್‌ ಅಧ್ಯಕ್ಷ ರಾಕೇಶ್‌ ತಿವಾರಿ ಅವರ ಆಶೀರ್ವಾದ ನಮ್ಮ ಮಗನ ಮೇಲಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು. ಏಕೆಂದರೆ ನಾಗ್ಪುರದಲ್ಲಿ ನಡೆದಿದ್ದ ಪರೀಕ್ಷಾ ಪಂದ್ಯದಲ್ಲಿ ಭಾಗವಹಿಸಿ ನನ್ನ ಮಗ ಓಂದೇ ಓವರ್‌ನಲ್ಲಿ 17 ರನ್‌ ಒಡೆಯುವ ಮೂಲಕ ವಿಕ್ರಂ ರಾಥೋಡ್‌ ಅವರು ನೀಡಿದ್ದ ಪರೀಕ್ಷೆಯನ್ನು ಪಾಸು ಮಾಡಿದ್ದ ಎಂದಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago