ಕ್ರೀಡೆ

IPL 2025 | ಪಂತ್‌ ಮೇಲೆ ಸೇಡು ತೀರಿಸಿಕೊಂಡ ಹಾರ್ದಿಕ್‌; ಲಖೌನ್‌ ಗೆದ್ದ ಮುಂಬೈ

ಮುಂಬೈ : ವೇಗಿ ಜಸ್‌ಪ್ರಿತ್‌ ಬುಮ್ರಾ ಅವರ ಮಾರಕ ದಾಳಿಗೆ ನಲುಗಿದ ಲಖನೌ ಸೂಪರ್‌ ಜೈಂಟ್ಸ್‌ ತಂಡ, ಮುಂಬೈ ಇಂಡಿಯನ್ಸ್‌ ತಂಡದ ವಿರುದ್ಧ 54 ರನ್‌ಗಳ ಅಂತರದಿಂದ ಸೋಲು ಕಂಡಿತು. ಈ ಪಂದ್ಯವನ್ನು ಗೆಲ್ಲುವ ಮೂಲಕ ಮುಂಬೈ ಟೂರ್ನಿಯಲ್ಲಿ ಸತತ ಐದನೇ ಗೆಲುವು ದಾಖಲಿಸಿತು.

ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮುಂಬೈ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 215 ರನ್‌ ಗಳಿಸಿ ಎದುರಾಳಿ ತಂಡಕ್ಕೆ 216 ರನ್‌ಗಳ ಗುರಿ ನೀಡಿತು. ಈ ಮೊತ್ತ ಬೆನ್ನತ್ತುವಲ್ಲಿ ವಿಫಲವಾದ ಲಖನೌ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 161 ರನ್‌ ಗಳಿಸಿ 54 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿತು.

ಮುಂಬೈ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಅತಿಥೇಯ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಬೃಹತ್‌ ಮೊತ್ತ ಪೇರಿಸಲು ರಿಕೆಲ್ಟನ್‌ ಹಾಗೂ ಸೂರ್ಯಕುಮಾರ್‌ ಯಾದವ್‌ ಸಹಕರಿಸಿದರು.

ರಿಕೆಲ್ಟನ್‌ 32 ಎಸೆತಗಳಲ್ಲಿ 6 ಬೌಂಡರಿ, 4 ಸಿಕ್ಸರ್‌ ಸಹಿತ 58 ರನ್‌ ಬಾರಿಸಿದರೇ, ಸೂರ್ಯಕುಮಾರ್‌ ಯಾದವ್‌ 28 ಎಸೆತಗಳಲ್ಲಿ 4 ಬೌಂಡರಿ, 4 ಸಿಕ್ಸರ್‌ ಸಹಿತ 54 ರನ್‌ ಚಚ್ಚಿದರು.

ಉಳಿದಂತೆ ರೋಹಿತ್‌ ಶರ್ಮಾ 12(5), ವಿಲ್‌ ಜಾಕ್‌ 29(21), ತಿಲಕ್‌ ವರ್ಮಾ 6(5), ನಾಯಕ ಹಾರ್ದಿಕ್‌ ಪಾಂಡ್ಯ 5(7), ಕಾರ್ಬಿನ್‌ 20(10) ರನ್‌ ಗಳಿಸಿದರೇ, ನಮನ್‌ ಧಿರ್‌ ಔಟಾಗದೇ 25(11) ಹಾಗೂ ದೀಪಕ್‌ ಚಾಹರ್‌ ಒಂದು ರನ್‌ ಗಳಿಸಿ ಸ್ಕ್ರೀಜ್‌ನಲ್ಲಿಯೇ ಉಳಿದರು.

ಲಖನೌ ಪರ ಮಯಾಂಕ್‌ ಯಾದವ್‌ ಹಾಗೂ ಆವೇಶ್‌ ಖಾನ್‌ ತಲಾ ಎರಡು ವಿಕೆಟ್‌, ಪ್ರಿನ್ಸ್‌ ಯಾದವ್‌, ಬಿಷ್ಣೋಯ್‌ ಹಾಗೂ ದಿಗ್ವೇಶ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಲಖನೌ ಇನ್ನಿಂಗ್ಸ್‌: ಮುಂಬೈ ನೀಡಿದ ಬೃಹತ್‌ ಮೊತ್ತದ ಟಾರ್ಗೆಟ್‌ ಬೆನ್ನತ್ತಿದ ಲಖನೌಗೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಐಡೆನ್‌ ಮಾರ್ಕ್ರಂ 9(11) ವಿಕೆಟ್‌ ಬೇಗನೇ ಕಳೆದುಕೊಂಡಿತು. ಅಬ್ಬರದ ಬ್ಯಾಟಿಂಗ್‌ ಮಾಡುತ್ತಿದ ಮಿಚೆಲ್‌ ಮಾರ್ಷ್‌ 34(24), ನಿಕೋಲಸ್‌ ಪೂರನ್‌ 27(15) ರನ್‌ ಕಲೆಹಾಕಿದರು.

ಬಳಿಕ ಬಂದ ನಾಯಕ ರಿಷಬ್‌ ಪಂತ್‌ ಕೇವಲ ನಾಲ್ಕು ರನ್‌ ಗಳಿಸಿ ಔಟಾಗಿ ನಿರಾಸೆ ಮೂಡಿಸಿದರು. ಮಧ್ಯಮ ಕ್ರಮಾಂಕದಲ್ಲಿ ಒಂದಾದ ಆಯೋಷ್‌ ಬದೋನಿ 35(22) ಹಾಗೂ ಡೇವಿಡ್‌ ಮಿಲ್ಲರ್‌ 24(16) ಕೊಂಚ ಅಬ್ಬರಿಸಿ ಮರೆಯಾದರು. ಈ ಜೋಡಿಯ ವಿಕೆಟ್‌ ಪತನದೊಂದಿಗೆ ಲಖನೌಗೆ ಸೋಲು ಕಂಡಿತು.

ಉಳಿದಂತೆ ಅಬ್ದುಲ್ ಸಮದ್‌ 2(4), ಬಿಷ್ಟೋಯ್‌ 13(14), ಆವೇಶ್‌ ಖಾನ್‌ ಡಕ್‌ಔಟ್‌ ಆದರೇ, ಪ್ರಿನ್ಸ್‌ ಯಾದವ್‌ ನಾಲ್ಕು, ದಿಗ್ವೇಶ್‌ ಒಂದು ರನ್‌ ಗಳಿಸಿ ಔಟಾಗದೇ ಉಳಿದರು.

ಮುಂಬೈ ಪರ ಬುಮ್ರಾ ಪ್ರಮುಖ ನಾಲ್ಕು ವಿಕೆಟ್‌ ಪಡೆದರು. ಟ್ರೆಂಟ್‌ ಬೌಲ್ಟ್‌ ಮೂರು ವಿಕೆಟ್‌, ವಿಲ್‌ ಜಾಕ್‌ ಎರಡು ವಿಕೆಟ್‌ ಪಡೆದು ಗಮನಸೆಳೆದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

7 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

11 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

11 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

11 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

11 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

11 hours ago