ಕ್ರೀಡೆ

IPL 2025 | ಗುಜರಾತ್‌ ವಿರುದ್ಧ ಪಂಜಾಬ್‌ ಕಿಂಗ್ಸ್‌ಗೆ ರೋಚಕ ಜಯ

ಅಹಮದಾಬಾದ್‌: ನಾಯಕ ಶ್ರೇಯಸ್‌ ಅಯ್ಯರ್‌ ಅವರ ಅರ್ಧಶತಕ, ಅರ್ಶ್‌ದೀಪ್‌ ಸಿಂಗ್‌ ಮಾರಕ ದಾಳಿಯ ಸಹಾಯದಿಂದ ಪಂಜಾಬ್‌ ಕಿಂಗ್ಸ್‌ ಅತಿಥೇಯ ಗುಜರಾತ್‌ ಟೈಟನ್ಸ್‌ ತಂಡವನ್ನು 11 ರನ್‌ಗಳ ಅಂತರಿದಿಂದ ಸೋಲಿಸಿದೆ. ಮೊದಲ ಪಂದ್ಯ ಗೆಲ್ಲುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್‌ ಕಿಂಗ್ಸ್‌ ಮತ್ತು ಗುಜರಾತ್‌ ಟೈಟನ್ಸ್‌ ನಡುವಣ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಪಂಜಾಬ್‌ ಕಿಂಗ್ಸ್‌ ನಾಯಕ ಶ್ರೇಯಸ್‌ ಅಯ್ಯರ್‌ ಅವರ ಅರ್ಧಶತಕದ ಬಲದಿಂದ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 243 ರನ್‌ ಗಳಿಸಿತು. ಈ ಮೊತ್ತ ಬೆನ್ನತ್ತಿದ ಗುಜರಾತ್‌ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 232 ರನ್‌ ಗಳಿಸಿ 11 ರನ್‌ಗಳ ಅಂತರಿಂದ ಸೋಲು ಕಂಡಿತು.

ಪಂಜಾಬ್‌ ಇನ್ನಿಂಗ್ಸ್‌: ಟೂರ್ನಿಯ ಮೊದಲ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ಪರ ಪ್ರಿಯಾಂಕ್‌ ಆರ್ಯ ಹಾಗೂ ಪ್ರಭ್‌ಸಿಮ್ರಾನ್‌ ಇನ್ನಿಂಗ್ಸ್‌ ಆರಂಭಿಸಿದರು. ಪ್ರಭ್‌ ಸಿಮ್ರಾನ್‌ ಐದು ರನ್‌ಗಳಿಗೆ ಇನ್ನಿಂಗ್ಸ್‌ ಮುಗಿಸಿದರು. ಆರ್ಯ 23 ಎಸೆತಗಳಲ್ಲಿ 7ಬೌಂಡರಿ, 2 ಸಿಕ್ಸರ್‌ ಸಹಿತ 47 ರನ್‌ ಗಳಿಸಿ ಔಟಾದರು.

ಅಜ್ಮತ್ತುಲ್ಲಾ 16(15) ರನ್‌ ಗಳಿಸಿದರೇ, ಮ್ಯಾಕ್ಸಿ ಇಲ್ಲದ ಔಟ್‌ಗೆ ವಿಕೆಟ್‌ ಒಪ್ಪಿಸಿದರು. ಸ್ಟೋಯ್ನಿಸ್‌ 20(15) ರನ್‌ ಕಲೆಹಾಕಿ ಔಟಾದರು.

ಮತ್ತೊಂದೆಡೆ ನಿಧಾನವಾಗಿ ಬ್ಯಾಟ್‌ ಬೀಸಿದ ನಾಯಕ ಶ್ರೇಯಸ್‌ ಅಯ್ಯರ್‌ ಜಿಟಿ ಬೌಲರ್‌ಗಳನ್ನು ಬೆಂಡೆತ್ತಿದರು. ಅಯ್ಯರ್‌ ಔಟಾಗದೇ 42 ಎಸೆತಗಳಲ್ಲಿ 5 ಬೌಂಡರಿ, 9 ಸಿಕ್ಸರ್‌ ಸಹಿತ 97 ರನ್‌ ಗಳಿಸಿದರು. ಕೊನೆಯಲ್ಲಿ ಅಬ್ಬರಿಸಿದ ಶಶಾಂಕ್‌ ಸಿಂಗ್‌ ಕೇವಲ 16 ಎಸೆತಗಳಲ್ಲಿ 44 ರನ್‌ ಗಳಿಸಿ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿದರು.

ಗುಜರಾತ್‌ ಪರ ಸಾಯ್‌ ಕಿಶೋರ್‌ ಮೂರು ವಿಕೆಟ್‌, ರಶೀದ್‌ ಖಾನ್‌ ಮತ್ತು ರಬಾಡ ತಲಾ ಒಂದೊಂದು ವಿಕೆಟ್‌ ಪಡೆದರು.

ಗುಜರಾತ್‌ ಇನ್ನಿಂಗ್ಸ್‌: ಬೃಹತ್‌ ಮೊತ್ತ ಬೆನ್ನತ್ತಿದ ಜಿಟಿಗೆ ಉತ್ತಮ ಆರಂಭ ದೊರೆಯಿತು. ನಾಯಕ ಶುಭ್‌ಮನ್‌ ಗಿಲ್‌ 33(14) ಹಾಗೂ ಸಾಯ್‌ ಸುದರ್ಶನ್‌ 74(41) ರನ್‌ ಗಳಿಸಿ ಉತ್ತಮ ಆರಂಭ ಒದಗಿಸಿಕೊಟ್ಟರು.

ಬಳಿಕ ಬಂದ ಬಟ್ಲರ್‌ 54(33), ರುದರ್‌ಫರ್ಡ್‌ 46(28) ರನ್‌ ಗಳಿಸಿ ಹೋರಾಟ ನೀಡಿದರೂ ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ. ರಾಹುಲ್‌ ತೆವಾಟಿಯ 6(2) ರನ್‌ ಗಳಿಸಿದರು. ಔಟಾಗದೇ ಶಾರುಖ್‌ ಖಾನ್‌ 6(1) ಹಾಗೂ ಅರ್ಶದ್‌ ಖಾನ್‌ 1(1) ರನ್‌ ಗಳಿಸಿ ಸ್ಕ್ರೀಜ್‌ನಲ್ಲಿಯೇ ಉಳಿದರು.

ಪಂಜಾಬ್‌ ಪರ ಅರ್ಶ್‌ದೀಪ್‌ ಎರಡು, ಮಾರ್ಕೋ ಎನ್ಸನ್‌ ಮತ್ತು ಮ್ಯಾಕ್ಸ್‌ವೆಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

54 mins ago

ಜನವರಿ 28 ಮತ್ತು 29ರಂದು ‘ತಟ್ಟೆ ಇಡ್ಲಿ ರಾದ್ಧಾಂತ’ ಹಾಸ್ಯ ನಾಟಕ ಪ್ರದರ್ಶನ

ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…

1 hour ago

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

2 hours ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

3 hours ago

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

3 hours ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

6 hours ago