ಆರ್ಸಿಬಿ ಫ್ಲೇ-ಆಫ್ ನತ್ತ ; ಕೊಲ್ಕತ್ತಾ ಹೊರಕ್ಕೆ
ಬೆಂಗಳೂರು : ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು(ಮೇ.17) ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಬೇಕಿದ್ದ ಐಪಿಎಲ್-2025ರ 58ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ.
ಪಂದ್ಯ ನೋಡಲು ಲಕ್ಷಾಂತರ ಅಭಿಮಾನಿಗಳು ಕ್ರೀಡಾಂಗಣದತ್ತ ಧಾವಿಸಿ ನಾಲ್ಕು ಗಂಟೆಗೂ ಹೆಚ್ಚು ಕಾದರೂ, ಆದರೆ, ಪಂದ್ಯದ ಟಾಸ್ ಕೂಡ ಆಗಲಿಲ್ಲ. ಸತತವಾಗಿ ಸುರಿದ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆಯಾಯಿತು. ಅಂತಿಮವಾಗಿ ಕೈಬಿಡಲಾಯಿತು.
ಇದರಿಂದಾಗಿ ಎರಡು ತಂಡಗಳಿಗೂ ಒಂದು ಅಂಕವನ್ನು ಹಂಚಲಾಯಿತು. ಇದರೊಂದಿಗೆ 12 ಪಂದ್ಯಗಳಲ್ಲಿ 17 ಅಂಕ ಗಳಿಸಿರುವ ಆರ್ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡು, ಪ್ಲೇ-ಆಫ್ ಸನಿಹದಲ್ಲಿದೆ. ಇತ್ತ ಪ್ಲೇ-ಆಫ್ ರೇಸ್ನಿಂದ ಹೊರಬಿದ್ದರುವ ಕೊಲ್ಕತ್ತಾ ನೈಟ್ ರೈಡರ್ಸ್ ಇದುವರೆಗೂ 12 ಅಂಕ ಗಳಿಸಿದೆ. ಇದರ ಬಳಿ ಇನ್ನೊಂದ ಪಂದ್ಯ ಮಾತ್ರ ಉಳಿದಿದೆ.
ಭಾರತ-ಪಾಕಿಸ್ತಾನ ನಡುವಣ ಬಿಕ್ಕಟ್ಟಿನಿಂದ ಐಪಿಎಸ್ ಪಂದ್ಯಗಳು ಒಂದು ವಾರಗಳ ಕಾಲ ರದ್ದುಗೊಂಡಿತ್ತು. ಇದೀಗ ಪುನಾರರಂಭದ ಪಂದ್ಯದಲ್ಲಿ ಒಂದು ಎಸೆತವನ್ನು ಕಾಣದೇ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿ ಜೋಳದ ಪಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ…
ಅಧಿಕ ಸುಂಕ ಹೇರಿಕೆ ಚಟ ಬ್ರಹ್ಮಾಸ್ತ್ರವಾಗಿತ್ತು ಟ್ರಂಪಣ್ಣನಿಗೆ ವಿವಿಧ ದೇಶಗಳನು ನಿಯಂತ್ರಿಸಲು! ಆದರೀಗ ರದ್ದುಗೊಳಿಸಿದೆ ಅಮೆರಿಕದ ಸುಪ್ರೀಂ ಕೋರ್ಟ್ ಅಽಕ…
ರಾಜ್ಯದಲ್ಲಿ ೧೬ ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದು ಸ್ವಾಗತಾರ್ಹ.…
ಶಾಲಾ -ಕಾಲೇಜುಗಳಲ್ಲಿ, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಮಾಧ್ಯಮಗಳಲ್ಲಿ…
ಮೈಸೂರಿನಲ್ಲಿ ೧೯೧೨ರಲ್ಲಿ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ರೇಷ್ಮೆ ಉದ್ಯಮವು ಜಾಗತಿಕ ಮಟ್ಟದಲ್ಲಿ ಮೈಸೂರು ಸಿಲ್ಕ್ ಸೀರೆ…
ತಮಿಳುನಾಡಿನ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸೆಲ್ವಕುಮಾರ್ ಹೊಲಿಗೆ ತರಬೇತಿ ಯೂಟ್ಯೂಬ್ ತೆರೆದು ಅದರಲ್ಲಿ ‘ಟೈಲರ್ ಬ್ರೋ’ ಎಂದು ಟೈಪಿಸಿದರೆ…