ಆರ್ಸಿಬಿ ಫ್ಲೇ-ಆಫ್ ನತ್ತ ; ಕೊಲ್ಕತ್ತಾ ಹೊರಕ್ಕೆ
ಬೆಂಗಳೂರು : ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು(ಮೇ.17) ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಬೇಕಿದ್ದ ಐಪಿಎಲ್-2025ರ 58ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ.
ಪಂದ್ಯ ನೋಡಲು ಲಕ್ಷಾಂತರ ಅಭಿಮಾನಿಗಳು ಕ್ರೀಡಾಂಗಣದತ್ತ ಧಾವಿಸಿ ನಾಲ್ಕು ಗಂಟೆಗೂ ಹೆಚ್ಚು ಕಾದರೂ, ಆದರೆ, ಪಂದ್ಯದ ಟಾಸ್ ಕೂಡ ಆಗಲಿಲ್ಲ. ಸತತವಾಗಿ ಸುರಿದ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆಯಾಯಿತು. ಅಂತಿಮವಾಗಿ ಕೈಬಿಡಲಾಯಿತು.
ಇದರಿಂದಾಗಿ ಎರಡು ತಂಡಗಳಿಗೂ ಒಂದು ಅಂಕವನ್ನು ಹಂಚಲಾಯಿತು. ಇದರೊಂದಿಗೆ 12 ಪಂದ್ಯಗಳಲ್ಲಿ 17 ಅಂಕ ಗಳಿಸಿರುವ ಆರ್ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡು, ಪ್ಲೇ-ಆಫ್ ಸನಿಹದಲ್ಲಿದೆ. ಇತ್ತ ಪ್ಲೇ-ಆಫ್ ರೇಸ್ನಿಂದ ಹೊರಬಿದ್ದರುವ ಕೊಲ್ಕತ್ತಾ ನೈಟ್ ರೈಡರ್ಸ್ ಇದುವರೆಗೂ 12 ಅಂಕ ಗಳಿಸಿದೆ. ಇದರ ಬಳಿ ಇನ್ನೊಂದ ಪಂದ್ಯ ಮಾತ್ರ ಉಳಿದಿದೆ.
ಭಾರತ-ಪಾಕಿಸ್ತಾನ ನಡುವಣ ಬಿಕ್ಕಟ್ಟಿನಿಂದ ಐಪಿಎಸ್ ಪಂದ್ಯಗಳು ಒಂದು ವಾರಗಳ ಕಾಲ ರದ್ದುಗೊಂಡಿತ್ತು. ಇದೀಗ ಪುನಾರರಂಭದ ಪಂದ್ಯದಲ್ಲಿ ಒಂದು ಎಸೆತವನ್ನು ಕಾಣದೇ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…