ಆರ್ಸಿಬಿ ಫ್ಲೇ-ಆಫ್ ನತ್ತ ; ಕೊಲ್ಕತ್ತಾ ಹೊರಕ್ಕೆ
ಬೆಂಗಳೂರು : ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು(ಮೇ.17) ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಬೇಕಿದ್ದ ಐಪಿಎಲ್-2025ರ 58ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ.
ಪಂದ್ಯ ನೋಡಲು ಲಕ್ಷಾಂತರ ಅಭಿಮಾನಿಗಳು ಕ್ರೀಡಾಂಗಣದತ್ತ ಧಾವಿಸಿ ನಾಲ್ಕು ಗಂಟೆಗೂ ಹೆಚ್ಚು ಕಾದರೂ, ಆದರೆ, ಪಂದ್ಯದ ಟಾಸ್ ಕೂಡ ಆಗಲಿಲ್ಲ. ಸತತವಾಗಿ ಸುರಿದ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆಯಾಯಿತು. ಅಂತಿಮವಾಗಿ ಕೈಬಿಡಲಾಯಿತು.
ಇದರಿಂದಾಗಿ ಎರಡು ತಂಡಗಳಿಗೂ ಒಂದು ಅಂಕವನ್ನು ಹಂಚಲಾಯಿತು. ಇದರೊಂದಿಗೆ 12 ಪಂದ್ಯಗಳಲ್ಲಿ 17 ಅಂಕ ಗಳಿಸಿರುವ ಆರ್ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡು, ಪ್ಲೇ-ಆಫ್ ಸನಿಹದಲ್ಲಿದೆ. ಇತ್ತ ಪ್ಲೇ-ಆಫ್ ರೇಸ್ನಿಂದ ಹೊರಬಿದ್ದರುವ ಕೊಲ್ಕತ್ತಾ ನೈಟ್ ರೈಡರ್ಸ್ ಇದುವರೆಗೂ 12 ಅಂಕ ಗಳಿಸಿದೆ. ಇದರ ಬಳಿ ಇನ್ನೊಂದ ಪಂದ್ಯ ಮಾತ್ರ ಉಳಿದಿದೆ.
ಭಾರತ-ಪಾಕಿಸ್ತಾನ ನಡುವಣ ಬಿಕ್ಕಟ್ಟಿನಿಂದ ಐಪಿಎಸ್ ಪಂದ್ಯಗಳು ಒಂದು ವಾರಗಳ ಕಾಲ ರದ್ದುಗೊಂಡಿತ್ತು. ಇದೀಗ ಪುನಾರರಂಭದ ಪಂದ್ಯದಲ್ಲಿ ಒಂದು ಎಸೆತವನ್ನು ಕಾಣದೇ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…