ಕ್ರೀಡೆ

IPL 2025: 159ಕ್ಕೆ ರಾಜಸ್ಥಾನ್‌ ಆಲೌಟ್: ಗುಜರಾತ್‌ಗೆ 58 ರನ್‌ಗಳ ಭರ್ಜರಿ ಗೆಲುವು

ಅಹಮದಾಬಾದ್‌: ಸಂಘಟಿತ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಸಹಾಯದಿಂದ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು ಮಣಿಸಿದ ಗುಜರಾತ್‌ ಟೈಟನ್ಸ್‌ 2025ರ 18 ಆವೃತ್ತಿಯ ಐಪಿಎಲ್‌ ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಗುಜರಾತ್‌ ಟೈಟನ್ಸ್‌ ಮತ್ತು ರಾಜಸ್ಥಾನ್‌ ರಾಯಲ್ಸ್‌ ನಡುವಣ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಗುಜರಾತ್‌ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 217 ರನ್‌ ಕಲೆಹಾಕಿತು. ಈ ಮೊತ್ತ ಬೆನ್ನತ್ತಿದ ರಾಜಸ್ಥಾನ್‌ ರಾಯಲ್ಸ್‌ 19.2 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 159 ರನ್‌ ಗಳಿಸಿ 58 ರನ್‌ಗಳ ಅಂತರದಿಂದ ಹೀನಾಯ ಸೋಲು ಕಂಡಿತು.

ಜಿಟಿ ಇನ್ನಿಂಗ್ಸ್‌: ತವರಿನಂಗಳದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಗುಜರಾತ್‌ಗೆ ಆರಂಭಿಕ ಆಘಾತ ಎದುರಾಯಿತು. ನಾಯಕ ಗಿಲ್‌ ಕೇವಲ ಎರಡು ರನ್‌ಗೆ ಸುಸ್ತಾಗಿ ವಿಕೆಟ್‌ ಒಪ್ಪಿಸಿ ಹೊರನಡೆದರು.

ಇದಾದ ಬಳಿಕ ಬಂದ ಜೋಸ್‌ ಬಟ್ಲರ್‌ ಆರಂಭಿಕ ಆಟಗಾರ ಸಾಯ್‌ ಸುದರರ್ಶನ್‌ ಜೊತೆಗೂಡಿ ಉತ್ತಮ ಇನ್ನಿಂಗ್ಸ್‌ ಕಟ್ಟಿದರು. ಈ ಜೋಡಿ 80 ರನ್‌ಗಳ ಜೊತೆಯಾಟ ನೀಡಿದರು. ಜೋಸ್‌ 25 ಎಸೆತಗಳಲ್ಲಿ 36 ರನ್‌ ಗಳಿಸಿ ಔಟಾಗದೇ ಸಾಯ್‌ ಸುದರ್ಶನ್‌ 53 ಎಸೆತಗಳಲ್ಲಿ 8 ಬೌಂಡರಿ, 3 ಸಿಕ್ಸರ್‌ ಸಹಿತ 82 ರನ್‌ ಗಳಸಿ ಶತಕ ವಂಚಿತರಾದರು.

ಕೊನೆಯಲ್ಲಿ ಅಬ್ಬರಿಸಿದ ಶಾರುಖ್‌ ಖಾನ್‌ 36(20), ರುದರ್‌ಫರ್ಡ್‌ 7(3), ರಾಹುಲ್‌ ತೆವಾಟಿಯಾ ಔಟಾಗದೇ 24(12), ರಶೀದ್‌ ಖಾನ್‌ 12(4), ಅರ್ಶದ್‌ ಖಾನ್‌ ಖಾತೆ ತೆರೆಯದೇ ಉಳಿದರು.

ರಾಜಸ್ಥಾನ್‌ ಪರ ತೀಕ್ಷಣ ಹಾಗೂ ತುಷಾರ್‌ ದೇಶ್‌ಪಾಂಡೆ ತಲಾ ಎರಡು ವಿಕಟ್‌, ಜೋಫ್ರಾ ಆರ್ಚರ್‌ ಮತ್ತು ಸಂದೀಪ್‌ ಶರ್ಮಾ ಒಂದೊಂದು ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾದರು.

ಆರ್‌ಆರ್‌ ಇನ್ನಿಂಗ್ಸ್‌: ಈ ಬೃಹತ್ ಮೊತ್ತ ಬೆನ್ನತ್ತಿದ ಆರ್‌ಆರ್‌ಗೆ ಉತ್ತಮ ಜೊತೆಯಾಟ ಸಿಗಲೇ ಇಲ್ಲ. ಹೆಟ್ಮಾಯರ್‌ 52(32), ನಾಯಕ ಸಂಜು ಸ್ಯಾಮ್ಸನ್‌ 41(28) ಮತ್ತು ರಿಯಾನ್‌ ಪರಾಗ್‌ 26(14) ಕೊಂಚ ಅಬ್ಬರಿಸಿದರು ಹೊರತಾಗಿ ಇನ್ಯಾವುದೇ ಆಟಗಾರ ಎರಡಂಕಿ ಮೊತ್ತ ದಾಟಲು ಸಫಲವಾಗಲಿಲ್ಲ. ಮಧ್ಯಮ ಕ್ರಮಾಂಕದ ಕುಸಿತ ರಾಜಸ್ಥಾನ್‌ ಹೀನಾಯ ಸೋಲಿಗೆ ಕಾರಣವಾಯಿತು.

ಗುಜರಾತ್‌ ಪರ ಪ್ರಸಿದ್ಧ್‌ ಕೃಷ್ಣ ಮೂರು ವಿಕೆಟ್‌, ರಶೀದ್‌ ಖಾನ್‌ ಮತ್ತು ಸಾಯ್‌ ಕಿಶೋರ್‌ ತಲಾ ಎರಡು ವಿಕೆಟ್‌ ಪಡೆದು ಗಮನ ಸೆಳೆದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

3 hours ago

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

4 hours ago

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…

4 hours ago

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…

4 hours ago

ಇವಿ ಹಬ್ ಆಗಿ ಕರ್ನಾಟಕ ರೂಪಾಂತರ ; ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…

4 hours ago

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

5 hours ago