ಕ್ರೀಡೆ

IPL 2025: 159ಕ್ಕೆ ರಾಜಸ್ಥಾನ್‌ ಆಲೌಟ್: ಗುಜರಾತ್‌ಗೆ 58 ರನ್‌ಗಳ ಭರ್ಜರಿ ಗೆಲುವು

ಅಹಮದಾಬಾದ್‌: ಸಂಘಟಿತ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಸಹಾಯದಿಂದ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು ಮಣಿಸಿದ ಗುಜರಾತ್‌ ಟೈಟನ್ಸ್‌ 2025ರ 18 ಆವೃತ್ತಿಯ ಐಪಿಎಲ್‌ ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಗುಜರಾತ್‌ ಟೈಟನ್ಸ್‌ ಮತ್ತು ರಾಜಸ್ಥಾನ್‌ ರಾಯಲ್ಸ್‌ ನಡುವಣ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಗುಜರಾತ್‌ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 217 ರನ್‌ ಕಲೆಹಾಕಿತು. ಈ ಮೊತ್ತ ಬೆನ್ನತ್ತಿದ ರಾಜಸ್ಥಾನ್‌ ರಾಯಲ್ಸ್‌ 19.2 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 159 ರನ್‌ ಗಳಿಸಿ 58 ರನ್‌ಗಳ ಅಂತರದಿಂದ ಹೀನಾಯ ಸೋಲು ಕಂಡಿತು.

ಜಿಟಿ ಇನ್ನಿಂಗ್ಸ್‌: ತವರಿನಂಗಳದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಗುಜರಾತ್‌ಗೆ ಆರಂಭಿಕ ಆಘಾತ ಎದುರಾಯಿತು. ನಾಯಕ ಗಿಲ್‌ ಕೇವಲ ಎರಡು ರನ್‌ಗೆ ಸುಸ್ತಾಗಿ ವಿಕೆಟ್‌ ಒಪ್ಪಿಸಿ ಹೊರನಡೆದರು.

ಇದಾದ ಬಳಿಕ ಬಂದ ಜೋಸ್‌ ಬಟ್ಲರ್‌ ಆರಂಭಿಕ ಆಟಗಾರ ಸಾಯ್‌ ಸುದರರ್ಶನ್‌ ಜೊತೆಗೂಡಿ ಉತ್ತಮ ಇನ್ನಿಂಗ್ಸ್‌ ಕಟ್ಟಿದರು. ಈ ಜೋಡಿ 80 ರನ್‌ಗಳ ಜೊತೆಯಾಟ ನೀಡಿದರು. ಜೋಸ್‌ 25 ಎಸೆತಗಳಲ್ಲಿ 36 ರನ್‌ ಗಳಿಸಿ ಔಟಾಗದೇ ಸಾಯ್‌ ಸುದರ್ಶನ್‌ 53 ಎಸೆತಗಳಲ್ಲಿ 8 ಬೌಂಡರಿ, 3 ಸಿಕ್ಸರ್‌ ಸಹಿತ 82 ರನ್‌ ಗಳಸಿ ಶತಕ ವಂಚಿತರಾದರು.

ಕೊನೆಯಲ್ಲಿ ಅಬ್ಬರಿಸಿದ ಶಾರುಖ್‌ ಖಾನ್‌ 36(20), ರುದರ್‌ಫರ್ಡ್‌ 7(3), ರಾಹುಲ್‌ ತೆವಾಟಿಯಾ ಔಟಾಗದೇ 24(12), ರಶೀದ್‌ ಖಾನ್‌ 12(4), ಅರ್ಶದ್‌ ಖಾನ್‌ ಖಾತೆ ತೆರೆಯದೇ ಉಳಿದರು.

ರಾಜಸ್ಥಾನ್‌ ಪರ ತೀಕ್ಷಣ ಹಾಗೂ ತುಷಾರ್‌ ದೇಶ್‌ಪಾಂಡೆ ತಲಾ ಎರಡು ವಿಕಟ್‌, ಜೋಫ್ರಾ ಆರ್ಚರ್‌ ಮತ್ತು ಸಂದೀಪ್‌ ಶರ್ಮಾ ಒಂದೊಂದು ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾದರು.

ಆರ್‌ಆರ್‌ ಇನ್ನಿಂಗ್ಸ್‌: ಈ ಬೃಹತ್ ಮೊತ್ತ ಬೆನ್ನತ್ತಿದ ಆರ್‌ಆರ್‌ಗೆ ಉತ್ತಮ ಜೊತೆಯಾಟ ಸಿಗಲೇ ಇಲ್ಲ. ಹೆಟ್ಮಾಯರ್‌ 52(32), ನಾಯಕ ಸಂಜು ಸ್ಯಾಮ್ಸನ್‌ 41(28) ಮತ್ತು ರಿಯಾನ್‌ ಪರಾಗ್‌ 26(14) ಕೊಂಚ ಅಬ್ಬರಿಸಿದರು ಹೊರತಾಗಿ ಇನ್ಯಾವುದೇ ಆಟಗಾರ ಎರಡಂಕಿ ಮೊತ್ತ ದಾಟಲು ಸಫಲವಾಗಲಿಲ್ಲ. ಮಧ್ಯಮ ಕ್ರಮಾಂಕದ ಕುಸಿತ ರಾಜಸ್ಥಾನ್‌ ಹೀನಾಯ ಸೋಲಿಗೆ ಕಾರಣವಾಯಿತು.

ಗುಜರಾತ್‌ ಪರ ಪ್ರಸಿದ್ಧ್‌ ಕೃಷ್ಣ ಮೂರು ವಿಕೆಟ್‌, ರಶೀದ್‌ ಖಾನ್‌ ಮತ್ತು ಸಾಯ್‌ ಕಿಶೋರ್‌ ತಲಾ ಎರಡು ವಿಕೆಟ್‌ ಪಡೆದು ಗಮನ ಸೆಳೆದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

12 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

12 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

14 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

14 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

14 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

15 hours ago