ಕ್ರೀಡೆ

IPL 2025: 159ಕ್ಕೆ ರಾಜಸ್ಥಾನ್‌ ಆಲೌಟ್: ಗುಜರಾತ್‌ಗೆ 58 ರನ್‌ಗಳ ಭರ್ಜರಿ ಗೆಲುವು

ಅಹಮದಾಬಾದ್‌: ಸಂಘಟಿತ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಸಹಾಯದಿಂದ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು ಮಣಿಸಿದ ಗುಜರಾತ್‌ ಟೈಟನ್ಸ್‌ 2025ರ 18 ಆವೃತ್ತಿಯ ಐಪಿಎಲ್‌ ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಗುಜರಾತ್‌ ಟೈಟನ್ಸ್‌ ಮತ್ತು ರಾಜಸ್ಥಾನ್‌ ರಾಯಲ್ಸ್‌ ನಡುವಣ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಗುಜರಾತ್‌ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 217 ರನ್‌ ಕಲೆಹಾಕಿತು. ಈ ಮೊತ್ತ ಬೆನ್ನತ್ತಿದ ರಾಜಸ್ಥಾನ್‌ ರಾಯಲ್ಸ್‌ 19.2 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 159 ರನ್‌ ಗಳಿಸಿ 58 ರನ್‌ಗಳ ಅಂತರದಿಂದ ಹೀನಾಯ ಸೋಲು ಕಂಡಿತು.

ಜಿಟಿ ಇನ್ನಿಂಗ್ಸ್‌: ತವರಿನಂಗಳದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಗುಜರಾತ್‌ಗೆ ಆರಂಭಿಕ ಆಘಾತ ಎದುರಾಯಿತು. ನಾಯಕ ಗಿಲ್‌ ಕೇವಲ ಎರಡು ರನ್‌ಗೆ ಸುಸ್ತಾಗಿ ವಿಕೆಟ್‌ ಒಪ್ಪಿಸಿ ಹೊರನಡೆದರು.

ಇದಾದ ಬಳಿಕ ಬಂದ ಜೋಸ್‌ ಬಟ್ಲರ್‌ ಆರಂಭಿಕ ಆಟಗಾರ ಸಾಯ್‌ ಸುದರರ್ಶನ್‌ ಜೊತೆಗೂಡಿ ಉತ್ತಮ ಇನ್ನಿಂಗ್ಸ್‌ ಕಟ್ಟಿದರು. ಈ ಜೋಡಿ 80 ರನ್‌ಗಳ ಜೊತೆಯಾಟ ನೀಡಿದರು. ಜೋಸ್‌ 25 ಎಸೆತಗಳಲ್ಲಿ 36 ರನ್‌ ಗಳಿಸಿ ಔಟಾಗದೇ ಸಾಯ್‌ ಸುದರ್ಶನ್‌ 53 ಎಸೆತಗಳಲ್ಲಿ 8 ಬೌಂಡರಿ, 3 ಸಿಕ್ಸರ್‌ ಸಹಿತ 82 ರನ್‌ ಗಳಸಿ ಶತಕ ವಂಚಿತರಾದರು.

ಕೊನೆಯಲ್ಲಿ ಅಬ್ಬರಿಸಿದ ಶಾರುಖ್‌ ಖಾನ್‌ 36(20), ರುದರ್‌ಫರ್ಡ್‌ 7(3), ರಾಹುಲ್‌ ತೆವಾಟಿಯಾ ಔಟಾಗದೇ 24(12), ರಶೀದ್‌ ಖಾನ್‌ 12(4), ಅರ್ಶದ್‌ ಖಾನ್‌ ಖಾತೆ ತೆರೆಯದೇ ಉಳಿದರು.

ರಾಜಸ್ಥಾನ್‌ ಪರ ತೀಕ್ಷಣ ಹಾಗೂ ತುಷಾರ್‌ ದೇಶ್‌ಪಾಂಡೆ ತಲಾ ಎರಡು ವಿಕಟ್‌, ಜೋಫ್ರಾ ಆರ್ಚರ್‌ ಮತ್ತು ಸಂದೀಪ್‌ ಶರ್ಮಾ ಒಂದೊಂದು ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾದರು.

ಆರ್‌ಆರ್‌ ಇನ್ನಿಂಗ್ಸ್‌: ಈ ಬೃಹತ್ ಮೊತ್ತ ಬೆನ್ನತ್ತಿದ ಆರ್‌ಆರ್‌ಗೆ ಉತ್ತಮ ಜೊತೆಯಾಟ ಸಿಗಲೇ ಇಲ್ಲ. ಹೆಟ್ಮಾಯರ್‌ 52(32), ನಾಯಕ ಸಂಜು ಸ್ಯಾಮ್ಸನ್‌ 41(28) ಮತ್ತು ರಿಯಾನ್‌ ಪರಾಗ್‌ 26(14) ಕೊಂಚ ಅಬ್ಬರಿಸಿದರು ಹೊರತಾಗಿ ಇನ್ಯಾವುದೇ ಆಟಗಾರ ಎರಡಂಕಿ ಮೊತ್ತ ದಾಟಲು ಸಫಲವಾಗಲಿಲ್ಲ. ಮಧ್ಯಮ ಕ್ರಮಾಂಕದ ಕುಸಿತ ರಾಜಸ್ಥಾನ್‌ ಹೀನಾಯ ಸೋಲಿಗೆ ಕಾರಣವಾಯಿತು.

ಗುಜರಾತ್‌ ಪರ ಪ್ರಸಿದ್ಧ್‌ ಕೃಷ್ಣ ಮೂರು ವಿಕೆಟ್‌, ರಶೀದ್‌ ಖಾನ್‌ ಮತ್ತು ಸಾಯ್‌ ಕಿಶೋರ್‌ ತಲಾ ಎರಡು ವಿಕೆಟ್‌ ಪಡೆದು ಗಮನ ಸೆಳೆದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

3 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

3 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

3 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

3 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

3 hours ago