ಬೆಂಗಳೂರು: ಜೋಶ್ ಬಟ್ಲರ್ ಅವರ ಅರ್ಧಶತಕದಾಟದ ನೆರವಿನಿಂದ ಗುಜರಾತ್ ಜೈಂಟ್ಸ್ ಅತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 8 ವಿಕೆಟ್ಗಳ ಅಂತರದಿಂದ ಸೋಲಿಸಿತು. ಆ ಮೂಲಕ ಆರ್ಸಿಬಿಯ ಅಜೇಯ ಓಟಕ್ಕೆ ಕಡಿವಾಣ ಹಾಕಿತು.
ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ನಡುವಣ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್ ಕಲೆಹಾಕಿತು. ಈ ಮೊತ್ತ ಬೆನ್ನತ್ತಿದ ಗುಜರಾತ್ 17.5 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 170 ರನ್ ಕಲೆಹಾಕಿ 8 ವಿಕೆಟ್ಗಳ ಅಂತರದಿಂದ ಗೆದ್ದು ಬೀಗಿತು.
ಆರ್ಸಿಬಿ ಇನ್ನಿಂಗ್ಸ್: ತನ್ನ ತವರು ನೆಲದಲ್ಲಿ ಟೂರ್ನಿಯ ಮೊದಲ ಪಂದ್ಯವನ್ನಾಡಿದ ಆರ್ಸಿಬಿಗೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಆರ್ಸಿಬಿ ಆರಂಭಿಕರಾಗಿ ಕಣಕ್ಕಿಳಿದರು. ವಿರಾಟ್ ಕೊಹ್ಲಿ 7(6) ರನ್ ಗಳಿಸಿ ಅರ್ಶದ್ ಖಾನ್ಗೆ ವಿಕೆಟ್ ಒಪ್ಪಿಸಿ ಹೊರ ನಡೆದರು. ಇವರ ಹಿಂದೆಯೇ ಫಿಲ್ ಸಾಲ್ಟ್ 14(13) ರನ್ ಗಳಿಸಿ ಪೆವಿಲಿಯನ್ ಸೇರಿದರು.
ನಂತರ ಬಂದ ಪಡಿಕ್ಕಲ್ 4(3), ನಾಯಕ ಪಾಟೀದರ್ 12(12) ರನ್ ಬಾರಿಸಿ ಔಟಾದರು. ಬಳಿಕ ಒಂದಾದ ಲಿವಿಂಗ್ಸ್ಟೋನ್ ಹಾಗೂ ಜಿತೇಶ್ ಶರ್ಮಾ ತಂಡದ ಮೊತ್ತ ನೂರರ ಗಟಿ ದಾಟಲು ಸಹಕರಿಸಿದರು. ವಿಲಿಂಗ್ಸ್ಟೋನ್ 40 ಎಸೆತಗಳಲ್ಲಿ 1 ಬೌಂಡರಿ, 5 ಸಿಕ್ಸರ್ ಸಹಿತ 54 ರನ್ ಚಚ್ಚಿದರೇ, ಜಿತೇಶ್ ಶರ್ಮಾ 33(21) ರನ್ ಕಲೆಹಾಕಿದರು. ಕೃನಾಲ್ ಪಾಂಡ್ಯ 5(5), ಕೊನೆಯಲ್ಲಿ ಅಬ್ಬರಿಸಿದ ಟಿಮ್ ಡೇವಿಡ್ 32(18), ಭುವನೇಶ್ವರ್ ಕುಮಾರ್ ಔಟಾಗದೇ 1(2) ರನ್ ಗಳಿಸಿದರು.
ಗುಜರಾತ್ ಪರ ಮೊಹಮ್ಮದ್ ಸಿರಾಜ್ ಮೂರು ವಿಕೆಟ್, ಸಾಯ್ ಕಿಶೋರ್ ಎರಡು ವಿಕೆಟ್, ಅರ್ಶದ್ ಖಾನ್, ಪ್ರಸಿದ್ಧ್ ಕೃಷ್ಣ ಹಾಗೂ ಇಶಾಂತ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
ಜಿಟಿ ಇನ್ನಿಂಗ್ಸ್: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಜಿಟಿಗೆ ಆರಂಭದಲ್ಲಿಯೇ ಸಂಕಷ್ಟಕ್ಕೆ ಸಿಲುಕಿತು. ನಾಯಕ ಶುಭ್ಮನ್ ಗಿಲ್ 14(14) ರನ್ ಗಳಿಸಿ ಭುವಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು. ಸಾಯ್ ಸುದರ್ಶನ್ 49(36) ರನ್ ಗಳಿಸಿ ಒಂದು ರನ್ಗಳಿಂದ ಅರ್ಧಶತಕ ವಂಚಿತರಾದರು.
ಮತ್ತೊಂದೆಡೆ ಅಬ್ಬರಿಸಿದ ಜೋಸ್ ಬಟ್ಲರ್ 39 ಎಸೆತಗಳಲ್ಲಿ 5 ಬೌಂಡರಿ, 6 ಸಿಕ್ಸರ್ ಸಹಿತ 73 ರನ್ ಗಳಿಸಿ ಔಟಾಗದೇ ಉಳಿದರು. ಇವರಿಗೆ ರುದರ್ಫರ್ಡ್ ಔಟಾಗದೇ 30(18) ರನ್ ಗಳಿಸಿ ಸಾಥ್ ನೀಡಿದರು.
ಆರ್ಸಿಬಿ ಪರ ಭುವನೇಶ್ವರ್ ಕುಮಾರ್ ಹಾಗೂ ಜೋಶ್ ಹೇಜಲ್ವುಡ್ ತಲಾ ಒಂದೊಂದು ವಿಕೆಟ್ ಪಡೆದರು.
ಪಂದ್ಯಶ್ರೇಷ್ಠ: ಜೋಸ್ ಬಟ್ಲರ್
ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…
ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…