ಕ್ರೀಡೆ

IPL 2025 | ತವರಿನಲ್ಲಿ ಮೊದಲ ಪಂದ್ಯ ಸೋತ ಆರ್‌ಸಿಬಿ

ಬೆಂಗಳೂರು:  ಜೋಶ್‌ ಬಟ್ಲರ್‌ ಅವರ ಅರ್ಧಶತಕದಾಟದ ನೆರವಿನಿಂದ ಗುಜರಾತ್‌ ಜೈಂಟ್ಸ್‌ ಅತಿಥೇಯ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಸೋಲಿಸಿತು. ಆ ಮೂಲಕ ಆರ್‌ಸಿಬಿಯ ಅಜೇಯ ಓಟಕ್ಕೆ ಕಡಿವಾಣ ಹಾಕಿತು.

ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಗುಜರಾತ್‌ ಟೈಟನ್ಸ್‌ ನಡುವಣ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 169 ರನ್‌ ಕಲೆಹಾಕಿತು. ಈ ಮೊತ್ತ ಬೆನ್ನತ್ತಿದ ಗುಜರಾತ್‌ 17.5 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 170 ರನ್‌ ಕಲೆಹಾಕಿ 8 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿತು.

ಆರ್‌ಸಿಬಿ ಇನ್ನಿಂಗ್ಸ್‌: ತನ್ನ ತವರು ನೆಲದಲ್ಲಿ ಟೂರ್ನಿಯ ಮೊದಲ ಪಂದ್ಯವನ್ನಾಡಿದ ಆರ್‌ಸಿಬಿಗೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಫಿಲ್‌ ಸಾಲ್ಟ್‌ ಹಾಗೂ ವಿರಾಟ್‌ ಕೊಹ್ಲಿ ಆರ್ಸಿಬಿ ಆರಂಭಿಕರಾಗಿ ಕಣಕ್ಕಿಳಿದರು. ವಿರಾಟ್‌ ಕೊಹ್ಲಿ 7(6) ರನ್‌ ಗಳಿಸಿ ಅರ್ಶದ್‌ ಖಾನ್‌ಗೆ ವಿಕೆಟ್‌ ಒಪ್ಪಿಸಿ ಹೊರ ನಡೆದರು. ಇವರ ಹಿಂದೆಯೇ ಫಿಲ್‌ ಸಾಲ್ಟ್‌ 14(13) ರನ್‌ ಗಳಿಸಿ ಪೆವಿಲಿಯನ್‌ ಸೇರಿದರು.

ನಂತರ ಬಂದ ಪಡಿಕ್ಕಲ್‌ 4(3), ನಾಯಕ ಪಾಟೀದರ್‌ 12(12) ರನ್‌ ಬಾರಿಸಿ ಔಟಾದರು. ಬಳಿಕ ಒಂದಾದ ಲಿವಿಂಗ್‌ಸ್ಟೋನ್‌ ಹಾಗೂ ಜಿತೇಶ್‌ ಶರ್ಮಾ ತಂಡದ ಮೊತ್ತ ನೂರರ ಗಟಿ ದಾಟಲು ಸಹಕರಿಸಿದರು. ವಿಲಿಂಗ್‌ಸ್ಟೋನ್‌ 40 ಎಸೆತಗಳಲ್ಲಿ 1 ಬೌಂಡರಿ, 5 ಸಿಕ್ಸರ್‌ ಸಹಿತ 54 ರನ್‌ ಚಚ್ಚಿದರೇ, ಜಿತೇಶ್‌ ಶರ್ಮಾ 33(21) ರನ್‌ ಕಲೆಹಾಕಿದರು. ಕೃನಾಲ್‌ ಪಾಂಡ್ಯ 5(5), ಕೊನೆಯಲ್ಲಿ ಅಬ್ಬರಿಸಿದ ಟಿಮ್‌ ಡೇವಿಡ್‌ 32(18), ಭುವನೇಶ್ವರ್‌ ಕುಮಾರ್‌ ಔಟಾಗದೇ 1(2) ರನ್‌ ಗಳಿಸಿದರು.

ಗುಜರಾತ್‌ ಪರ ಮೊಹಮ್ಮದ್‌ ಸಿರಾಜ್‌ ಮೂರು ವಿಕೆಟ್‌, ಸಾಯ್‌ ಕಿಶೋರ್‌ ಎರಡು ವಿಕೆಟ್‌, ಅರ್ಶದ್‌ ಖಾನ್‌, ಪ್ರಸಿದ್ಧ್‌ ಕೃಷ್ಣ ಹಾಗೂ ಇಶಾಂತ್‌ ಶರ್ಮಾ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

ಜಿಟಿ ಇನ್ನಿಂಗ್ಸ್‌: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಜಿಟಿಗೆ ಆರಂಭದಲ್ಲಿಯೇ ಸಂಕಷ್ಟಕ್ಕೆ ಸಿಲುಕಿತು. ನಾಯಕ ಶುಭ್‌ಮನ್‌ ಗಿಲ್‌ 14(14) ರನ್‌ ಗಳಿಸಿ ಭುವಿಗೆ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಸೇರಿದರು. ಸಾಯ್‌ ಸುದರ್ಶನ್‌ 49(36) ರನ್‌ ಗಳಿಸಿ ಒಂದು ರನ್‌ಗಳಿಂದ ಅರ್ಧಶತಕ ವಂಚಿತರಾದರು.

ಮತ್ತೊಂದೆಡೆ ಅಬ್ಬರಿಸಿದ ಜೋಸ್‌ ಬಟ್ಲರ್‌ 39 ಎಸೆತಗಳಲ್ಲಿ 5 ಬೌಂಡರಿ, 6 ಸಿಕ್ಸರ್‌ ಸಹಿತ 73 ರನ್‌ ಗಳಿಸಿ ಔಟಾಗದೇ ಉಳಿದರು. ಇವರಿಗೆ ರುದರ್‌ಫರ್ಡ್‌ ಔಟಾಗದೇ 30(18) ರನ್‌ ಗಳಿಸಿ ಸಾಥ್‌ ನೀಡಿದರು.

ಆರ್‌ಸಿಬಿ ಪರ ಭುವನೇಶ್ವರ್‌ ಕುಮಾರ್‌ ಹಾಗೂ ಜೋಶ್‌ ಹೇಜಲ್‌ವುಡ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಪಂದ್ಯಶ್ರೇಷ್ಠ: ಜೋಸ್‌ ಬಟ್ಲರ್‌

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

13 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

13 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

14 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

16 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

20 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

20 hours ago