ಕ್ರೀಡೆ

IPL 2025 | ತವರಿನಲ್ಲಿ ಮೊದಲ ಪಂದ್ಯ ಸೋತ ಆರ್‌ಸಿಬಿ

ಬೆಂಗಳೂರು:  ಜೋಶ್‌ ಬಟ್ಲರ್‌ ಅವರ ಅರ್ಧಶತಕದಾಟದ ನೆರವಿನಿಂದ ಗುಜರಾತ್‌ ಜೈಂಟ್ಸ್‌ ಅತಿಥೇಯ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಸೋಲಿಸಿತು. ಆ ಮೂಲಕ ಆರ್‌ಸಿಬಿಯ ಅಜೇಯ ಓಟಕ್ಕೆ ಕಡಿವಾಣ ಹಾಕಿತು.

ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಗುಜರಾತ್‌ ಟೈಟನ್ಸ್‌ ನಡುವಣ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 169 ರನ್‌ ಕಲೆಹಾಕಿತು. ಈ ಮೊತ್ತ ಬೆನ್ನತ್ತಿದ ಗುಜರಾತ್‌ 17.5 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 170 ರನ್‌ ಕಲೆಹಾಕಿ 8 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿತು.

ಆರ್‌ಸಿಬಿ ಇನ್ನಿಂಗ್ಸ್‌: ತನ್ನ ತವರು ನೆಲದಲ್ಲಿ ಟೂರ್ನಿಯ ಮೊದಲ ಪಂದ್ಯವನ್ನಾಡಿದ ಆರ್‌ಸಿಬಿಗೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಫಿಲ್‌ ಸಾಲ್ಟ್‌ ಹಾಗೂ ವಿರಾಟ್‌ ಕೊಹ್ಲಿ ಆರ್ಸಿಬಿ ಆರಂಭಿಕರಾಗಿ ಕಣಕ್ಕಿಳಿದರು. ವಿರಾಟ್‌ ಕೊಹ್ಲಿ 7(6) ರನ್‌ ಗಳಿಸಿ ಅರ್ಶದ್‌ ಖಾನ್‌ಗೆ ವಿಕೆಟ್‌ ಒಪ್ಪಿಸಿ ಹೊರ ನಡೆದರು. ಇವರ ಹಿಂದೆಯೇ ಫಿಲ್‌ ಸಾಲ್ಟ್‌ 14(13) ರನ್‌ ಗಳಿಸಿ ಪೆವಿಲಿಯನ್‌ ಸೇರಿದರು.

ನಂತರ ಬಂದ ಪಡಿಕ್ಕಲ್‌ 4(3), ನಾಯಕ ಪಾಟೀದರ್‌ 12(12) ರನ್‌ ಬಾರಿಸಿ ಔಟಾದರು. ಬಳಿಕ ಒಂದಾದ ಲಿವಿಂಗ್‌ಸ್ಟೋನ್‌ ಹಾಗೂ ಜಿತೇಶ್‌ ಶರ್ಮಾ ತಂಡದ ಮೊತ್ತ ನೂರರ ಗಟಿ ದಾಟಲು ಸಹಕರಿಸಿದರು. ವಿಲಿಂಗ್‌ಸ್ಟೋನ್‌ 40 ಎಸೆತಗಳಲ್ಲಿ 1 ಬೌಂಡರಿ, 5 ಸಿಕ್ಸರ್‌ ಸಹಿತ 54 ರನ್‌ ಚಚ್ಚಿದರೇ, ಜಿತೇಶ್‌ ಶರ್ಮಾ 33(21) ರನ್‌ ಕಲೆಹಾಕಿದರು. ಕೃನಾಲ್‌ ಪಾಂಡ್ಯ 5(5), ಕೊನೆಯಲ್ಲಿ ಅಬ್ಬರಿಸಿದ ಟಿಮ್‌ ಡೇವಿಡ್‌ 32(18), ಭುವನೇಶ್ವರ್‌ ಕುಮಾರ್‌ ಔಟಾಗದೇ 1(2) ರನ್‌ ಗಳಿಸಿದರು.

ಗುಜರಾತ್‌ ಪರ ಮೊಹಮ್ಮದ್‌ ಸಿರಾಜ್‌ ಮೂರು ವಿಕೆಟ್‌, ಸಾಯ್‌ ಕಿಶೋರ್‌ ಎರಡು ವಿಕೆಟ್‌, ಅರ್ಶದ್‌ ಖಾನ್‌, ಪ್ರಸಿದ್ಧ್‌ ಕೃಷ್ಣ ಹಾಗೂ ಇಶಾಂತ್‌ ಶರ್ಮಾ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

ಜಿಟಿ ಇನ್ನಿಂಗ್ಸ್‌: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಜಿಟಿಗೆ ಆರಂಭದಲ್ಲಿಯೇ ಸಂಕಷ್ಟಕ್ಕೆ ಸಿಲುಕಿತು. ನಾಯಕ ಶುಭ್‌ಮನ್‌ ಗಿಲ್‌ 14(14) ರನ್‌ ಗಳಿಸಿ ಭುವಿಗೆ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಸೇರಿದರು. ಸಾಯ್‌ ಸುದರ್ಶನ್‌ 49(36) ರನ್‌ ಗಳಿಸಿ ಒಂದು ರನ್‌ಗಳಿಂದ ಅರ್ಧಶತಕ ವಂಚಿತರಾದರು.

ಮತ್ತೊಂದೆಡೆ ಅಬ್ಬರಿಸಿದ ಜೋಸ್‌ ಬಟ್ಲರ್‌ 39 ಎಸೆತಗಳಲ್ಲಿ 5 ಬೌಂಡರಿ, 6 ಸಿಕ್ಸರ್‌ ಸಹಿತ 73 ರನ್‌ ಗಳಿಸಿ ಔಟಾಗದೇ ಉಳಿದರು. ಇವರಿಗೆ ರುದರ್‌ಫರ್ಡ್‌ ಔಟಾಗದೇ 30(18) ರನ್‌ ಗಳಿಸಿ ಸಾಥ್‌ ನೀಡಿದರು.

ಆರ್‌ಸಿಬಿ ಪರ ಭುವನೇಶ್ವರ್‌ ಕುಮಾರ್‌ ಹಾಗೂ ಜೋಶ್‌ ಹೇಜಲ್‌ವುಡ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಪಂದ್ಯಶ್ರೇಷ್ಠ: ಜೋಸ್‌ ಬಟ್ಲರ್‌

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

7 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

7 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

7 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

7 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

7 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

7 hours ago