Mysore
15
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ನಿರಾಸೆಗೊಂಡಿದ್ದ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟ ಆರ್‌ಸಿಬಿ

ಬೆಂಗಳೂರು: ಭಾರೀ ಮಳೆಯಿಂದಾಗಿ ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಕೋಲ್ಕತ್ತಾ ನೈಟ್‌ ರೈಡರ್ಸ್‌ ಹಾಗೂ ಆರ್‌ಸಿಬಿ ನಡುವಿನ ಐಪಿಎಲ್‌ ಪಂದ್ಯ ರದ್ದಾಗಿತ್ತು. ಈ ಪಂದ್ಯದ ಎಲ್ಲಾ ಮಾನ್ಯ ಟಿಕೆಟ್‌ ಹೊಂದಿರುವವರಿಗೆ ಹಣ ಮರುಪಾವತಿ ಮಾಡುವುದಾಗಿ ಫ್ರಾಂಚೈಸಿ ಘೋಷಣೆ ಮಾಡಿದೆ.

ಈ ಬಗ್ಗೆ ಆರ್‌ಸಿಬಿ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಡಿಜಿಟಲ್‌ ಟಿಕೆಟ್‌ ಹೊಂದಿರುವವರಿಗೆ ಟಿಕೆಟ್‌ಗಳನ್ನು ಬುಕ್‌ ಮಾಡಲು ಅವರ ಖಾತೆಗೆ ಮುಂದಿನ ಕೆಲಸದ 10 ದಿನಗಳಲ್ಲಿ ಮರುಪಾವತಿ ಮಾಡಲಾಗುತ್ತದೆ.

ಟಿಕೆಟ್‌ ಹೊಂದಿರುವವರು ಮರುಪಾವತಿಗೆ ತಮ್ಮ ಮೂಲ ಟಿಕೆಟ್‌ನ್ನು ಖರೀದಿಸಿದ ಸ್ಥಳದಲ್ಲೇ ಒಪ್ಪಿಸಬೇಕಾಗುತ್ತದೆ. ಕಾಂಪ್ಲಿಮೆಂಟರಿ ಟಿಕೆಟ್‌ಗಳಿಗೆ ಈ ಮರುಪಾವತಿ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.

Tags:
error: Content is protected !!