ನವದೆಹಲಿ : ಹ್ಯಾಜಲ್ವುಡ್, ಭುವನೇಶ್ವರ್ ಬೌಲಿಂಗ್ ಅಬ್ಬರ, ಸಂಘಟಿತ ಫೀಲ್ಡಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವಿಕೆಟ್ಗಳಿಂದ ಗೆಲುವು ಸಾಧಿಸಿದೆ.
ಇಲ್ಲಿನ ಅರುಣ್ ಜೇಟ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 16.3 ಓವರ್ನಲ್ಲಿ 75 ರನ್ಗಳಿಸಿ ಆಲೌಟ್ ಆಯಿತು. 76 ರನ್ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಆರ್ಸಿಬಿ 6.3 ಓವರ್ನಲ್ಲಿಯೇ 77 ರನ್ಗಳಿಸುವ ಮೂಲಕ ಗೆಲುವು ಸಾಧಿಸಿದೆ
ಡೆಲ್ಲಿ ನೀಡಿದ್ದ 76 ರನ್ಗಳ ಸುಲಭ ಗುರಿ ಬೆನ್ನಟ್ಟಿದ ಆರ್ಸಿಬಿ, ಆರಂಭದಲ್ಲಿ ಜೋಸೆಫ್ ಬೆಥೆಲ್ (20) ಅವರ ವಿಕೆಟ್ ಕಳೆದುಕೊಂಡರೂ, ದೇವದತ್ ಪಡಿಕ್ಕಲ್ (34) ಮತ್ತು ವಿರಾಟ್ ಕೋಹ್ಲಿ (23) ತಂಡವನ್ನು ಗೆಲುವಿನ ದಡಕ್ಕೆ ಸೇರಿಸಿದರು.
ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟ್ ಮಾಡಿದ ಡೆಲ್ಲಿ, 16.3 ಓವರ್ನಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 75 ರನ್ ಗಳಿಸಿತು. ಪಂದ್ಯದ ಆರಂಭದ ಕೇವಲ 3.5 ಓವರ್ನಲ್ಲೇ ಡೆಲ್ಲಿ 9 ರನ್ಗಳಿಗೆ 6 ವಿಕೆಟ್ ಕಳೆದುಕೊಂಡು ಭಾರೀ ಸಂಕಷ್ಟಕ್ಕೆ ಸಿಲುಕಿತ್ತು. ಡೆಲ್ಲಿ ಪವರ್ಪ್ಲೇನಲ್ಲಿ ಅತಿ ಕಡಿಮೆ ರನ್ಗೆ ಅತಿಹೆಚ್ಚು ವಿಕೆಟ್ ಕಳೆದುಕೊಂಡ ತಂಡ ಎಂಬ ಅಪಖ್ಯಾತಿಗೆ ಗುರಿಯಾಯಿತು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…