ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್ಗಳ ಭರ್ಜರಿ ಜಯ ಗಳಿಸಿದೆ.
ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲಿಗೆ ಬ್ಯಾಟ್ ಬೀಸಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 163 ರನ್ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ 4 ವಿಕೆಟ್ ನಷ್ಟಕ್ಕೆ 164 ರನ್ ಗಳಿಸುವ ಮೂಲಕ ಜಯ ಗಳಿಸಿತು.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೆಎಲ್ ರಾಹುಲ್ ಎರಡನೇ ಪಂದ್ಯದಲ್ಲೂ ನಿರಾಸೆ ಮೂಡಿಸಿದರು. ಕೇವಲ 1 ರನ್ ಗಳಿಸಿ ಔಟಾದರು. ನಿತೀಶ್ ರಾಣಾ ರನೌಟ್ ಆದರು. ಕೇವಲ 7 ರನ್ಗಳಿಗೆ ಎರಡು ಪ್ರಮುಖ ವಿಕೆಟ್ಗಳನ್ನು ಕಳೆದುಕೊಂಡು ತಂಡ ಆಘಾತಕ್ಕೊಳಗಾಗಿತ್ತು. ಈ ವೇಳೆ, ಪಾತುಮ್ ನಿಸ್ಸಾಂಕ 30 ಎಸೆತಗಳಿಗೆ 4 ಬೌಂಡರಿ ಹಾಗೂ ಒಂದು ಸಿಕ್ಸ್ ಬಾರಿಸಿ ಒಟ್ಟು 44 ರನ್ ಕಲೆಹಾಕಿ, ತಂಡಕ್ಕೆ ಚೇತರಿಗೆ ನೀಡಿತು. ಸಮೀರ್ ರಿಜ್ವಿ 51 ಬಾಲ್ಗೆ 90 ರನ್ ಗಳಿಸಿ (7 ಫೋರ್ ಮತ್ತು 7 ಸಿಕ್ಸರ್) ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಸಮೀರ್ ರಿಜ್ವಿ ಹಾಗೂ ನಿಸ್ಸಾಂಕ ಜೊತೆಯಾಟವಾಡಿ 66 ರನ್ ಗಳಿಸಿದರು. ಬಳಿಕ ಮಿಲ್ಲರ್ ಹಾಗೂ ರಿಜ್ವಿ 78 ರನ್ಗಳ ಜೊತೆಯಾಟವಾಡಿದರು.
ಇದಕ್ಕೂ ಮೊದಲು ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಆಟಗಾರರಾಗಿ ರೋಹಿತ್ ಶರ್ಮಾ ಹಾಗೂ ರಿಯಾನ್ ರಿಕಲ್ಟನ್ ಫೀಲ್ಡಿಗಿಳಿದರು. ರಿಯಾನ್ ರಿಕಲ್ಟನ್ 9 ರನ್ ಗಳಿಸಿ ಔಟಾದರು. ಬಳಿಕ ಬಂದ ಯುವ ಬ್ಯಾಟರ್ ತಿಲಕ್ ವರ್ಮಾ ಯಾವುದೇ ರನ್ ಗಳಿಸದೇ ಪೆವಿಲಿಯನ್ಗೆ ಮರಳಿದರು. ಬಳಿಕ ತಂಡದ ನಾಯಕ ಸೂರ್ಯಕುಮಾರ್ ಯಾದವ್ 3 ಬೌಂಡರಿ ಹಾಗೂ 2 ಸಿಕ್ಸ್ ಬಾರಿಸಿ 36 ಎಸೆತಗಳಿಗೆ 51 ರನ್ ಗಳಿಸಿದರು. ರೋಹಿತ್ ಶರ್ಮಾ 26 ಬಾಲ್ಗಳಿಗೆ 5 ಫೋರ್, 1 ಸಿಕ್ಸ್ ಸಿಡಿಸಿ 35 ರನ್ ಗಳಿಸಿದರು. ಕೊನೆಯಲ್ಲಿ ನಮನ್ ಧರ್ 28 ರನ್ ಹಾಗೂ ಮಿಚೆಲ್ ಸ್ಯಾಂಟ್ನರ್ 18 ರನ್ ಗಳಿಸುವ ಮೂಲಕ ತಂಡದ ಮೊತ್ತ 160ರ ಗಡಿ ದಾಟಿಸಿದರು.
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…
ಭಾರತೀಯ ಚಿತ್ರೋದ್ಯಮದ ಉತ್ತೇಜನಕ್ಕಾಗಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿರುವ ಸುದ್ದಿ. ಚಿತ್ರರಂಗಕ್ಕೆ ಸಂಬಂಧಿಸಿದಂತೆ, ಚಿತ್ರಗಳನ್ನು ವರ್ಗೀಕರಿಸಿ, ಪ್ರಮಾಣಪತ್ರ…
ನವೀನ್ ಡಿಸೋಜ ತ್ವರಿತಗತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ; ಒಟ್ಟು ೪,೬೮,೬೫೭ ನಮೂನೆ ವಿತರಣೆ ಮೂಲಕ ಶೇ.೧೦೦ ಪ್ರಗತಿ…
ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡುವಿನದೊಡ್ಡಿ ಮತ್ತು ಅರ್ಧನಾರೀಪುರ ಗ್ರಾಮಗಳಿಗೆ ಗುರುವಾರ ಗ್ರಾಮ ಪಂಚಾಯಿತಿ ವತಿಯಿಂದ ಟ್ಯಾಂಕರ್…