ಕ್ರೀಡೆ

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್‌ಗಳ ಭರ್ಜರಿ ಜಯ ಗಳಿಸಿದೆ.

ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲಿಗೆ ಬ್ಯಾಟ್ ಬೀಸಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 163 ರನ್ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ 4 ವಿಕೆಟ್ ನಷ್ಟಕ್ಕೆ 164 ರನ್ ಗಳಿಸುವ ಮೂಲಕ ಜಯ ಗಳಿಸಿತು.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೆಎಲ್ ರಾಹುಲ್ ಎರಡನೇ ಪಂದ್ಯದಲ್ಲೂ ನಿರಾಸೆ ಮೂಡಿಸಿದರು. ಕೇವಲ 1 ರನ್ ಗಳಿಸಿ ಔಟಾದರು. ನಿತೀಶ್ ರಾಣಾ ರನೌಟ್ ಆದರು. ಕೇವಲ 7 ರನ್‌ಗಳಿಗೆ ಎರಡು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ತಂಡ ಆಘಾತಕ್ಕೊಳಗಾಗಿತ್ತು. ಈ ವೇಳೆ, ಪಾತುಮ್ ನಿಸ್ಸಾಂಕ 30 ಎಸೆತಗಳಿಗೆ 4 ಬೌಂಡರಿ ಹಾಗೂ ಒಂದು ಸಿಕ್ಸ್ ಬಾರಿಸಿ ಒಟ್ಟು 44 ರನ್ ಕಲೆಹಾಕಿ, ತಂಡಕ್ಕೆ ಚೇತರಿಗೆ ನೀಡಿತು. ಸಮೀರ್ ರಿಜ್ವಿ 51 ಬಾಲ್‌ಗೆ 90 ರನ್ ಗಳಿಸಿ (7 ಫೋರ್ ಮತ್ತು 7 ಸಿಕ್ಸರ್) ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಸಮೀರ್ ರಿಜ್ವಿ ಹಾಗೂ ನಿಸ್ಸಾಂಕ ಜೊತೆಯಾಟವಾಡಿ 66 ರನ್ ಗಳಿಸಿದರು. ಬಳಿಕ ಮಿಲ್ಲರ್ ಹಾಗೂ ರಿಜ್ವಿ 78 ರನ್‌ಗಳ ಜೊತೆಯಾಟವಾಡಿದರು.

ಇದಕ್ಕೂ ಮೊದಲು ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಆಟಗಾರರಾಗಿ ರೋಹಿತ್ ಶರ್ಮಾ ಹಾಗೂ ರಿಯಾನ್ ರಿಕಲ್ಟನ್ ಫೀಲ್ಡಿಗಿಳಿದರು. ರಿಯಾನ್ ರಿಕಲ್ಟನ್ 9 ರನ್ ಗಳಿಸಿ ಔಟಾದರು. ಬಳಿಕ ಬಂದ ಯುವ ಬ್ಯಾಟರ್ ತಿಲಕ್ ವರ್ಮಾ ಯಾವುದೇ ರನ್ ಗಳಿಸದೇ ಪೆವಿಲಿಯನ್‌ಗೆ ಮರಳಿದರು. ಬಳಿಕ ತಂಡದ ನಾಯಕ ಸೂರ್ಯಕುಮಾರ್ ಯಾದವ್ 3 ಬೌಂಡರಿ ಹಾಗೂ 2 ಸಿಕ್ಸ್ ಬಾರಿಸಿ 36 ಎಸೆತಗಳಿಗೆ 51 ರನ್ ಗಳಿಸಿದರು. ರೋಹಿತ್ ಶರ್ಮಾ 26 ಬಾಲ್‌ಗಳಿಗೆ 5 ಫೋರ್, 1 ಸಿಕ್ಸ್ ಸಿಡಿಸಿ 35 ರನ್ ಗಳಿಸಿದರು. ಕೊನೆಯಲ್ಲಿ ನಮನ್ ಧರ್ 28 ರನ್ ಹಾಗೂ ಮಿಚೆಲ್ ಸ್ಯಾಂಟ್ನರ್ 18 ರನ್ ಗಳಿಸುವ ಮೂಲಕ ತಂಡದ ಮೊತ್ತ 160ರ ಗಡಿ ದಾಟಿಸಿದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಜೈಲಿನಲ್ಲಿ ದುಡ್ಡು ಕೊಟ್ಟರೆ ರಾಜಾತಿಥ್ಯ ಆರೋಪ ; ಕಾರಾಗೃಹದ ಅದೀಕ್ಷಕಿ ವರ್ಗಾವಣೆ

ಕಾರಾಗೃಹದ ಅಧೀಕ್ಷಕಿ ಎಂ.ಶಾಂತಮ್ಮ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಂಡ್ಯ: ವಿಚಾರಣಾಧೀನ ಕೈದಿ ಶ್ರೀರಂಗಪಟ್ಟಣ ಎಡಿಎಲ್‌ಆರ್ ಮೊಹಮದ್ ಹುಸೇನ್‌ಗೆ ಅನಧಿಕೃತ…

47 mins ago

ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ ನಿರ್ಮಾಣ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದು…

2 hours ago

ಗೃಹಜ್ಯೋತಿ | ಮನೆ-ಮನೆ ಸಮೀಕ್ಷೆ ಅವಧಿ ಸೆಪ್ಟೆಂಬರ್‌ 30ರವರೆಗೆ ವಿಸ್ತರಣೆ

ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್‌ 30ರವರೆಗೆ ವಿಸ್ತರಿಸಿದೆ. 2023ರ…

3 hours ago

ಮೈಸೂರು ದಸರಾ | ಸೆ.28 ರಿಂದ ಅ.5ರವರೆಗೆ ಯುವ ಸಂಭ್ರಮ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ…

4 hours ago

ಕಾವೇರಿ ಜಲವಿವಾದ: ಸೆ.15ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಸೆಪ್ಟೆಂಬರ್‌ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…

9 hours ago

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…

10 hours ago