ಗುವಾಹಟಿ : ಭಾರತ ಮತ್ತು ಬಾಂಗ್ಲಾದೇಶ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಉದ್ವಿಘ್ನಗೊಂಡಿರುವ ನಡುವೆ, ಇಂಡಿಯನ್ ಪ್ರಿಮಿಯರ್ ಲೀಗ್ನ(ಐಪಿಎಲ್) 2026ರ ಆವೃತ್ತಿಗೆ ಆಯ್ಕೆಯಾಗಿದ್ದ ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆಡಳಿತ ಮಂಡಳಿ ಕೈಬಿಟ್ಟಿದೆ.
ಕಳೆದ ತಿಂಗಳು ನಡೆದ ಆಟಗಾರರ ಹರಾಜಿನಲ್ಲಿ ಚೆನ್ನೈಸೂಪರ್ ಕಿಂಗ್ ಮತ್ತು ದೆಹಲಿ ಕ್ಯಾಪಿಟಲ್ ಜೊತೆಗಿನ ಜಿದ್ದಾಜಿದ್ದ ಬಿಡ್ಡಿಂಗ್ ನಂತರ ಕೆಕೆಆರ್ 30 ವರ್ಷದ ಎಡಗೈ ಬೌಲರ್ಅನ್ನು 2 ಕೋಟಿ ರೂ.ಮೂಲ ಬೆಲೆಯಿಂದ 9.20 ಕೋಟಿ ರೂ.ಗೆ ಪಡೆದುಕೊಂಡಿತ್ತು. ಹಲವಾರು ಟೀಕೆಗಳ ನಡುವೆ ಇಂದು ಎಚ್ಚೆತ್ತ ಬಿಸಿಸಿಐ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿತ್ತು. ಅಲ್ಲದೇ ಅಗತ್ಯವಿದ್ದರೆ ಕೆಕೆಆರ್ ಬದಲಿ ಆಟಗಾರನನ್ನು ಹೆಸರಿಸಲು ಅವಕಾಶ ನೀಡಲಾಗುವುದು ಎಂದು ಬಿಸಿಸಿಐ ಘೋಷಣೆ ಮಾಡಿದೆ.
ಇತ್ತೀಚೆಗೆ ಬಾಂಗ್ಲದೇಶದಲ್ಲಿ ಸಂಭವಿಸಿದ ಕೆಲ ಘಟನೆಯಿಂದ ಉಭಯ ದೇಶಗಳ ಬಾಂದವ್ಯ ಕುಸಿದಿತ್ತು. ಬಳಿಕ ಕ್ರಿಕೆಟಿಗನ ಭಾಗವಹಿಸುವಿಕೆ ತಡೆಗೆ ಬಿಸಿಸಿಐ ಮೇಲೆ ಒತ್ತಡ ಹೆಚ್ಚುತ್ತಿತ್ತು. ಜನರ ಬಾವನೆಗೆ ಸ್ಪಂದಸಿದ ಬಿಸಿಸಿಐ ಬಾಂಗ್ಲಾ ಆಟಗಾರ ಆಯ್ಕೆಯನ್ನು ರದ್ದು ಮಾಡಿ ಅವರನ್ನು ತಂಡದಿಂದ ಕೈಬಿಡಲಾಗಿದೆ ಎಂದು ಕೆಕೆಆರ್ ತಿಳಿಸಿದೆ. ಈ ಮೂಲಕ ಪ್ರಸ್ತುತ ಎದ್ದಿದ್ದ ವಿವಾದಕ್ಕೆ ತೆರೆ ಎಳೆದಂತಾಗಿದೆ.
ನಮ್ಮ ತಂದೆ ಪೋರ್ಬಂದರನ್ನು ಬಿಟ್ಟು ರಾಜ ಕೋಬಿಯ ರಾಜಾಸ್ಥಾನಿಕ ನ್ಯಾಯಾಲಯದ ಸದಸ್ಯರಾಗಿ ಹೊರಟಾಗ, ನನಗೆ ಕೇವಲ ಏಳು ವರ್ಷಗಳು. ಅಲ್ಲಿ…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಭಾಗಿತ್ವದಲಿ ಎಳೆಯ ಮಕಳ ಅಂಗಳಕೆ…
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸೃಜನಶೀಲತೆಯ ವೇದಿಕೆಗಳಾಗುವ ಬದಲು ಹಣದಾಸೆಗಾಗಿ ಅಶ್ಲೀಲತೆಯನ್ನು ಪ್ರದರ್ಶಿಸುವ ಮಾರುಕಟ್ಟೆಗಳಾಗುತ್ತಿರುವುದು ಆತಂಕಕಾರಿ ವಿದ್ಯಮಾನ. ಪ್ರಭಾವಿ ವ್ಯಕ್ತಿಗಳು…
೮ ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಆದಿವಾಸಿ ಹೋರಾಟ ಸಮಿತಿ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಮೆದಗನಾಣೆ…
ಜಿಪಿಎಸ್ ವಾಕಿಟಾಕಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ ಎಸ್ಒಪಿ ಬಿಡುಗಡೆ ಮಾಡಿದ ಸಚಿವ ಈಶ್ವರ್ ಖಂಡ್ರೆ ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಇಲಾಖೆ…