ಕ್ರೀಡೆ

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.

ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್‌ರೈಸರ್ಸ್ ಹೈದರಾಬಾದ್ ತಂಡದ ಸವಾಲನ್ನು ಎದುರಿಸಲಿದೆ.

ಪಶ್ಚಿಮ ಏಷ್ಯಾದಲ್ಲಿ ಸಂಘರ್ಷದ ಹಿನ್ನೆಲೆಯಲ್ಲಿ ಮಾರ್ಚ್ 28ರಿಂದ ಏಪ್ರಿಲ್ 12ರವರೆಗಿನ ಮೊದಲ 20 ಪಂದ್ಯಗಳ ವೇಳಾಪಟ್ಟಿಯನ್ನು ಘೋಷಿಸಲಾಗಿದೆ. ಮೂರು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಚುನಾವಣಾ ಆಯೋಗದಿಂದ ಮತದಾನದ ದಿನಾಂಕ ಬಿಡುಗಡೆಯಾದ ಬಳಿಕವಷ್ಟೇ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಘೋಷಣೆ ಮಾಡಲಿದೆ.

10 ತಾಣಗಳಲ್ಲಿ ಮೊದಲ 20 ಪಂದ್ಯಗಳು ಆಯೋಜನೆಯಾಗಲಿದೆ. ಬೆಂಗಳೂರು, ಮುಂಬೈ, ಗುವಾಹಟಿ, ನ್ಯೂ ಚಂಡೀಗಡ, ಲಖನೌ, ಕೋಲ್ಕತ್ತ, ಚೆನ್ನೆ , ಹೊಸದಿಲ್ಲಿ, ಅಹಮದಾಬಾದ್ ಮತ್ತು ಹೈದರಾಬಾದ್ ಮೈದಾನಗಳಲ್ಲಿ ಪಂದ್ಯಗಳು ನಡೆಯಲಿವೆ.

ಈ ಅವಧಿಯಲ್ಲಿ ನಾಲ್ಕು ಡಬಲ್ ಹೆಡ್ಡರ್ ಪಂದ್ಯಗಳು (ದಿನಕ್ಕೆ 2 ಪಂದ್ಯ) ನಿಗದಿಯಾಗಿವೆ.

ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಿಗದಿಯಾಗದಿರುವ ಪಂದ್ಯಗಳು ಕರ್ನಾಟಕ ಸರ್ಕಾರ ರಚಿಸಿರುವ ತಜ್ಞರ ಸಮಿತಿಯ ಅನುಮೋದನೆಗೆ ಒಳಪಟ್ಟಿರುತ್ತವೆ ಎಂದೂ ಉಲ್ಲೇಖಿಸಲಾಗಿದೆ. ಮೊದಲ ಹಂತದಲ್ಲಿ ಆರ್‌ಸಿಬಿ ನಾಲ್ಕು ಪಂದ್ಯಗಳನ್ನು ಆಡಲಿದೆ. ಮಾರ್ಚ್ 28ರಂದು ಬೆಂಗಳೂರಿನಲ್ಲಿ ಹೈದರಾಬಾದ್ ವಿರುದ್ಧ, ಏಪ್ರಿಲ್ 5ರಂದು ಬೆಂಗಳೂರಿನಲ್ಲೇ ಚೆನ್ನೆ ಸೂಪರ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಬಳಿಕ ಏಪ್ರಿಲ್ 10ರಂದು ಗುವಾಹಟಿಯಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಏಪ್ರಿಲ್ 12ರಂದು ಮುಂಬೈಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ.

ಮೊದಲ ಹಂತದ ವೇಳಾಪಟ್ಟಿ
ಮಾರ್ಚ್ 28: ಆರ್‌ಸಿಬಿ – ಸನ್‌ರೈಸರ್ಸ್ ಹೈದರಾಬಾದ್: ಎಂ. ಚಿನ್ನಸ್ವಾಮಿ ಸ್ಟೇಡಿಯಂ, ಬೆಂಗಳೂರು.
ಮಾರ್ಚ್ 29, ಮುಂಬೈ ಇಂಡಿಯನ್ಸ್ -ಕೊಲ್ಕತ್ತಾ ನೈಟ್ ರೈಡಸ್ ವಾಂಖೇಡೆ.
ಮಾರ್ಚ್ 30: ರಾಜಸ್ಥಾನ್ ರಾಯಲ್ಸ್ -ಚೆನ್ನೆ ಸೂಪರ್ ಕಿಂಗ್ಸ್ ಗುವಾಹಟಿ.
ಮಾರ್ಚ್ 31: ಪಂಜಾಬ್ ಕಿಂಗ್ಸ್ -ಗುಜರಾತ್ ಟೈಟನ್ಸ್ ನ್ಯೂ ಚಂಡೀಗಡ.
ಏಪ್ರಿಲ್ 1: ಲಕ್ನೋ ಸೂಪರ್ ಜೈಂಟ್ಸ್ – ಆರ್‌ಸಿಬಿ : ಲಕ್ನೋ.
ಏಪ್ರಿಲ್ 2: ಕೊಲ್ಕತ್ತಾ -ಸನ್‌ರೈಸರ್ಸ್ ಹೈದರಾಬಾದ್ ಕೊಲ್ಕತ್ತಾ.
ಏಪ್ರಿಲ್ 3: ಚೆನ್ನೆ – ಪಂಜಾಬ್ ಕಿಂಗ್ಸ್ : ಚೆನ್ನೆ .
ಏಪ್ರಿಲ್ 4: ಡೆಲ್ಲಿ ಕ್ಯಾಪಿಟಲ್ಸ್ – ಮುಂಬೈ ಇಂಡಿಯನ್ಸ್ : ಡೆಲ್ಲಿ
ಏಪ್ರಿಲ್ 4: ಗುಜರಾತ್ ಟೈಟನ್ಸ್ -ರಾಜಸ್ಥಾನ್ ರಾಯಲ್ಸ್ ಅಹಮದಾಬಾದ್.
ಏಪ್ರಿಲ್ 5: ಸನ್‌ರೈಸರ್ಸ್ ಹೈದರಾಬಾದ್- ಲಕ್ನೋ ಸೂಪರ್ ಜೈಂಟ್: ಹೈದರಾಬಾದ್
ಏಪ್ರಿಲ್ 5: ಆರ್‌ಸಿಬಿ -ಚೆನ್ನೆ ಸೂಪರ್ ಕಿಂಗ್ಸ್ : ಬೆಂಗಳೂರು.
ಏಪ್ರಿಲ್ 6: ಕೊಲ್ಕತ್ತಾ- ಪಂಜಾಬ್ ಕಿಂಗ್ಸ್ : ಕೊಲ್ಕತ್ತಾ.
ಏಪ್ರಿಲ್ 7: ರಾಜಸ್ಥಾನ್- ಮುಂಬೈ : ಗುವಾಹಟಿ.
ಏಪ್ರಿಲ್ 8: ಡೆಲ್ಲಿ – ಗುಜರಾತ್ ಡೆಲ್ಲಿ.
ಏಪ್ರಿಲ್ 9: ಕೊಲ್ಕತ್ತಾ -ಲಕ್ನೋ : ಕೊಲ್ಕತ್ತಾ.
ಏಪ್ರಿಲ್ 10: ರಾಜಸ್ಥಾನ್ – ಆರ್‌ಸಿಬಿ : ಗುವಾಹಟಿ.
ಏಪ್ರಿಲ್ 11: ಪಂಜಾಬ್ ಕಿಂಗ್ಸ್- ಸನ್‌ರೈಸರ್ಸ್ ಹೈದರಾಬಾದ್ : ನ್ಯೂ ಚಂಡೀಗಡ
ಏಪ್ರಿಲ್ 11: ಚೆನ್ನೆ – ಡೆಲ್ಲಿ ಕ್ಯಾಪಿಟಲ್ಸ್ ಚೆನ್ನೆ .
ಏಪ್ರಿಲ್ 12: ಲಕ್ನೋ- ಗುಜರಾತ್: ಲಕ್ನೋ
ಏಪ್ರಿಲ್ 12: ಮುಂಬೈ- ಆರ್‌ಸಿಬಿ ಮುಂಬೈ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

2 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

2 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

2 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

3 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

3 hours ago

ಬಿಡುಗಡೆಗೂ ಮುನ್ನವೆ ದಾಖಲೆ ಬರೆದ ಧುರಂಧರ್‌ -2 ; ಮುಂಗಡ ಬುಕ್ಕಿಂಗ್‌ನಲ್ಲಿ ದಾಖಲೆ ಗಳಿಕೆ

ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್‌ : ದಿ ರೆವೆಂಜ್‌ನ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ…

3 hours ago