ಕ್ರೀಡೆ

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.

ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್‌ರೈಸರ್ಸ್ ಹೈದರಾಬಾದ್ ತಂಡದ ಸವಾಲನ್ನು ಎದುರಿಸಲಿದೆ.

ಪಶ್ಚಿಮ ಏಷ್ಯಾದಲ್ಲಿ ಸಂಘರ್ಷದ ಹಿನ್ನೆಲೆಯಲ್ಲಿ ಮಾರ್ಚ್ 28ರಿಂದ ಏಪ್ರಿಲ್ 12ರವರೆಗಿನ ಮೊದಲ 20 ಪಂದ್ಯಗಳ ವೇಳಾಪಟ್ಟಿಯನ್ನು ಘೋಷಿಸಲಾಗಿದೆ. ಮೂರು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಚುನಾವಣಾ ಆಯೋಗದಿಂದ ಮತದಾನದ ದಿನಾಂಕ ಬಿಡುಗಡೆಯಾದ ಬಳಿಕವಷ್ಟೇ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಘೋಷಣೆ ಮಾಡಲಿದೆ.

10 ತಾಣಗಳಲ್ಲಿ ಮೊದಲ 20 ಪಂದ್ಯಗಳು ಆಯೋಜನೆಯಾಗಲಿದೆ. ಬೆಂಗಳೂರು, ಮುಂಬೈ, ಗುವಾಹಟಿ, ನ್ಯೂ ಚಂಡೀಗಡ, ಲಖನೌ, ಕೋಲ್ಕತ್ತ, ಚೆನ್ನೆ , ಹೊಸದಿಲ್ಲಿ, ಅಹಮದಾಬಾದ್ ಮತ್ತು ಹೈದರಾಬಾದ್ ಮೈದಾನಗಳಲ್ಲಿ ಪಂದ್ಯಗಳು ನಡೆಯಲಿವೆ.

ಈ ಅವಧಿಯಲ್ಲಿ ನಾಲ್ಕು ಡಬಲ್ ಹೆಡ್ಡರ್ ಪಂದ್ಯಗಳು (ದಿನಕ್ಕೆ 2 ಪಂದ್ಯ) ನಿಗದಿಯಾಗಿವೆ.

ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಿಗದಿಯಾಗದಿರುವ ಪಂದ್ಯಗಳು ಕರ್ನಾಟಕ ಸರ್ಕಾರ ರಚಿಸಿರುವ ತಜ್ಞರ ಸಮಿತಿಯ ಅನುಮೋದನೆಗೆ ಒಳಪಟ್ಟಿರುತ್ತವೆ ಎಂದೂ ಉಲ್ಲೇಖಿಸಲಾಗಿದೆ. ಮೊದಲ ಹಂತದಲ್ಲಿ ಆರ್‌ಸಿಬಿ ನಾಲ್ಕು ಪಂದ್ಯಗಳನ್ನು ಆಡಲಿದೆ. ಮಾರ್ಚ್ 28ರಂದು ಬೆಂಗಳೂರಿನಲ್ಲಿ ಹೈದರಾಬಾದ್ ವಿರುದ್ಧ, ಏಪ್ರಿಲ್ 5ರಂದು ಬೆಂಗಳೂರಿನಲ್ಲೇ ಚೆನ್ನೆ ಸೂಪರ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಬಳಿಕ ಏಪ್ರಿಲ್ 10ರಂದು ಗುವಾಹಟಿಯಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಏಪ್ರಿಲ್ 12ರಂದು ಮುಂಬೈಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ.

ಮೊದಲ ಹಂತದ ವೇಳಾಪಟ್ಟಿ
ಮಾರ್ಚ್ 28: ಆರ್‌ಸಿಬಿ – ಸನ್‌ರೈಸರ್ಸ್ ಹೈದರಾಬಾದ್: ಎಂ. ಚಿನ್ನಸ್ವಾಮಿ ಸ್ಟೇಡಿಯಂ, ಬೆಂಗಳೂರು.
ಮಾರ್ಚ್ 29, ಮುಂಬೈ ಇಂಡಿಯನ್ಸ್ -ಕೊಲ್ಕತ್ತಾ ನೈಟ್ ರೈಡಸ್ ವಾಂಖೇಡೆ.
ಮಾರ್ಚ್ 30: ರಾಜಸ್ಥಾನ್ ರಾಯಲ್ಸ್ -ಚೆನ್ನೆ ಸೂಪರ್ ಕಿಂಗ್ಸ್ ಗುವಾಹಟಿ.
ಮಾರ್ಚ್ 31: ಪಂಜಾಬ್ ಕಿಂಗ್ಸ್ -ಗುಜರಾತ್ ಟೈಟನ್ಸ್ ನ್ಯೂ ಚಂಡೀಗಡ.
ಏಪ್ರಿಲ್ 1: ಲಕ್ನೋ ಸೂಪರ್ ಜೈಂಟ್ಸ್ – ಆರ್‌ಸಿಬಿ : ಲಕ್ನೋ.
ಏಪ್ರಿಲ್ 2: ಕೊಲ್ಕತ್ತಾ -ಸನ್‌ರೈಸರ್ಸ್ ಹೈದರಾಬಾದ್ ಕೊಲ್ಕತ್ತಾ.
ಏಪ್ರಿಲ್ 3: ಚೆನ್ನೆ – ಪಂಜಾಬ್ ಕಿಂಗ್ಸ್ : ಚೆನ್ನೆ .
ಏಪ್ರಿಲ್ 4: ಡೆಲ್ಲಿ ಕ್ಯಾಪಿಟಲ್ಸ್ – ಮುಂಬೈ ಇಂಡಿಯನ್ಸ್ : ಡೆಲ್ಲಿ
ಏಪ್ರಿಲ್ 4: ಗುಜರಾತ್ ಟೈಟನ್ಸ್ -ರಾಜಸ್ಥಾನ್ ರಾಯಲ್ಸ್ ಅಹಮದಾಬಾದ್.
ಏಪ್ರಿಲ್ 5: ಸನ್‌ರೈಸರ್ಸ್ ಹೈದರಾಬಾದ್- ಲಕ್ನೋ ಸೂಪರ್ ಜೈಂಟ್: ಹೈದರಾಬಾದ್
ಏಪ್ರಿಲ್ 5: ಆರ್‌ಸಿಬಿ -ಚೆನ್ನೆ ಸೂಪರ್ ಕಿಂಗ್ಸ್ : ಬೆಂಗಳೂರು.
ಏಪ್ರಿಲ್ 6: ಕೊಲ್ಕತ್ತಾ- ಪಂಜಾಬ್ ಕಿಂಗ್ಸ್ : ಕೊಲ್ಕತ್ತಾ.
ಏಪ್ರಿಲ್ 7: ರಾಜಸ್ಥಾನ್- ಮುಂಬೈ : ಗುವಾಹಟಿ.
ಏಪ್ರಿಲ್ 8: ಡೆಲ್ಲಿ – ಗುಜರಾತ್ ಡೆಲ್ಲಿ.
ಏಪ್ರಿಲ್ 9: ಕೊಲ್ಕತ್ತಾ -ಲಕ್ನೋ : ಕೊಲ್ಕತ್ತಾ.
ಏಪ್ರಿಲ್ 10: ರಾಜಸ್ಥಾನ್ – ಆರ್‌ಸಿಬಿ : ಗುವಾಹಟಿ.
ಏಪ್ರಿಲ್ 11: ಪಂಜಾಬ್ ಕಿಂಗ್ಸ್- ಸನ್‌ರೈಸರ್ಸ್ ಹೈದರಾಬಾದ್ : ನ್ಯೂ ಚಂಡೀಗಡ
ಏಪ್ರಿಲ್ 11: ಚೆನ್ನೆ – ಡೆಲ್ಲಿ ಕ್ಯಾಪಿಟಲ್ಸ್ ಚೆನ್ನೆ .
ಏಪ್ರಿಲ್ 12: ಲಕ್ನೋ- ಗುಜರಾತ್: ಲಕ್ನೋ
ಏಪ್ರಿಲ್ 12: ಮುಂಬೈ- ಆರ್‌ಸಿಬಿ ಮುಂಬೈ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

4 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

4 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

5 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

5 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

5 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

6 hours ago