ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.
ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್ರೈಸರ್ಸ್ ಹೈದರಾಬಾದ್ ತಂಡದ ಸವಾಲನ್ನು ಎದುರಿಸಲಿದೆ.
ಪಶ್ಚಿಮ ಏಷ್ಯಾದಲ್ಲಿ ಸಂಘರ್ಷದ ಹಿನ್ನೆಲೆಯಲ್ಲಿ ಮಾರ್ಚ್ 28ರಿಂದ ಏಪ್ರಿಲ್ 12ರವರೆಗಿನ ಮೊದಲ 20 ಪಂದ್ಯಗಳ ವೇಳಾಪಟ್ಟಿಯನ್ನು ಘೋಷಿಸಲಾಗಿದೆ. ಮೂರು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಚುನಾವಣಾ ಆಯೋಗದಿಂದ ಮತದಾನದ ದಿನಾಂಕ ಬಿಡುಗಡೆಯಾದ ಬಳಿಕವಷ್ಟೇ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಘೋಷಣೆ ಮಾಡಲಿದೆ.
10 ತಾಣಗಳಲ್ಲಿ ಮೊದಲ 20 ಪಂದ್ಯಗಳು ಆಯೋಜನೆಯಾಗಲಿದೆ. ಬೆಂಗಳೂರು, ಮುಂಬೈ, ಗುವಾಹಟಿ, ನ್ಯೂ ಚಂಡೀಗಡ, ಲಖನೌ, ಕೋಲ್ಕತ್ತ, ಚೆನ್ನೆ , ಹೊಸದಿಲ್ಲಿ, ಅಹಮದಾಬಾದ್ ಮತ್ತು ಹೈದರಾಬಾದ್ ಮೈದಾನಗಳಲ್ಲಿ ಪಂದ್ಯಗಳು ನಡೆಯಲಿವೆ.
ಈ ಅವಧಿಯಲ್ಲಿ ನಾಲ್ಕು ಡಬಲ್ ಹೆಡ್ಡರ್ ಪಂದ್ಯಗಳು (ದಿನಕ್ಕೆ 2 ಪಂದ್ಯ) ನಿಗದಿಯಾಗಿವೆ.
ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಿಗದಿಯಾಗದಿರುವ ಪಂದ್ಯಗಳು ಕರ್ನಾಟಕ ಸರ್ಕಾರ ರಚಿಸಿರುವ ತಜ್ಞರ ಸಮಿತಿಯ ಅನುಮೋದನೆಗೆ ಒಳಪಟ್ಟಿರುತ್ತವೆ ಎಂದೂ ಉಲ್ಲೇಖಿಸಲಾಗಿದೆ. ಮೊದಲ ಹಂತದಲ್ಲಿ ಆರ್ಸಿಬಿ ನಾಲ್ಕು ಪಂದ್ಯಗಳನ್ನು ಆಡಲಿದೆ. ಮಾರ್ಚ್ 28ರಂದು ಬೆಂಗಳೂರಿನಲ್ಲಿ ಹೈದರಾಬಾದ್ ವಿರುದ್ಧ, ಏಪ್ರಿಲ್ 5ರಂದು ಬೆಂಗಳೂರಿನಲ್ಲೇ ಚೆನ್ನೆ ಸೂಪರ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಬಳಿಕ ಏಪ್ರಿಲ್ 10ರಂದು ಗುವಾಹಟಿಯಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಏಪ್ರಿಲ್ 12ರಂದು ಮುಂಬೈಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ.
ಮೊದಲ ಹಂತದ ವೇಳಾಪಟ್ಟಿ
ಮಾರ್ಚ್ 28: ಆರ್ಸಿಬಿ – ಸನ್ರೈಸರ್ಸ್ ಹೈದರಾಬಾದ್: ಎಂ. ಚಿನ್ನಸ್ವಾಮಿ ಸ್ಟೇಡಿಯಂ, ಬೆಂಗಳೂರು.
ಮಾರ್ಚ್ 29, ಮುಂಬೈ ಇಂಡಿಯನ್ಸ್ -ಕೊಲ್ಕತ್ತಾ ನೈಟ್ ರೈಡಸ್ ವಾಂಖೇಡೆ.
ಮಾರ್ಚ್ 30: ರಾಜಸ್ಥಾನ್ ರಾಯಲ್ಸ್ -ಚೆನ್ನೆ ಸೂಪರ್ ಕಿಂಗ್ಸ್ ಗುವಾಹಟಿ.
ಮಾರ್ಚ್ 31: ಪಂಜಾಬ್ ಕಿಂಗ್ಸ್ -ಗುಜರಾತ್ ಟೈಟನ್ಸ್ ನ್ಯೂ ಚಂಡೀಗಡ.
ಏಪ್ರಿಲ್ 1: ಲಕ್ನೋ ಸೂಪರ್ ಜೈಂಟ್ಸ್ – ಆರ್ಸಿಬಿ : ಲಕ್ನೋ.
ಏಪ್ರಿಲ್ 2: ಕೊಲ್ಕತ್ತಾ -ಸನ್ರೈಸರ್ಸ್ ಹೈದರಾಬಾದ್ ಕೊಲ್ಕತ್ತಾ.
ಏಪ್ರಿಲ್ 3: ಚೆನ್ನೆ – ಪಂಜಾಬ್ ಕಿಂಗ್ಸ್ : ಚೆನ್ನೆ .
ಏಪ್ರಿಲ್ 4: ಡೆಲ್ಲಿ ಕ್ಯಾಪಿಟಲ್ಸ್ – ಮುಂಬೈ ಇಂಡಿಯನ್ಸ್ : ಡೆಲ್ಲಿ
ಏಪ್ರಿಲ್ 4: ಗುಜರಾತ್ ಟೈಟನ್ಸ್ -ರಾಜಸ್ಥಾನ್ ರಾಯಲ್ಸ್ ಅಹಮದಾಬಾದ್.
ಏಪ್ರಿಲ್ 5: ಸನ್ರೈಸರ್ಸ್ ಹೈದರಾಬಾದ್- ಲಕ್ನೋ ಸೂಪರ್ ಜೈಂಟ್: ಹೈದರಾಬಾದ್
ಏಪ್ರಿಲ್ 5: ಆರ್ಸಿಬಿ -ಚೆನ್ನೆ ಸೂಪರ್ ಕಿಂಗ್ಸ್ : ಬೆಂಗಳೂರು.
ಏಪ್ರಿಲ್ 6: ಕೊಲ್ಕತ್ತಾ- ಪಂಜಾಬ್ ಕಿಂಗ್ಸ್ : ಕೊಲ್ಕತ್ತಾ.
ಏಪ್ರಿಲ್ 7: ರಾಜಸ್ಥಾನ್- ಮುಂಬೈ : ಗುವಾಹಟಿ.
ಏಪ್ರಿಲ್ 8: ಡೆಲ್ಲಿ – ಗುಜರಾತ್ ಡೆಲ್ಲಿ.
ಏಪ್ರಿಲ್ 9: ಕೊಲ್ಕತ್ತಾ -ಲಕ್ನೋ : ಕೊಲ್ಕತ್ತಾ.
ಏಪ್ರಿಲ್ 10: ರಾಜಸ್ಥಾನ್ – ಆರ್ಸಿಬಿ : ಗುವಾಹಟಿ.
ಏಪ್ರಿಲ್ 11: ಪಂಜಾಬ್ ಕಿಂಗ್ಸ್- ಸನ್ರೈಸರ್ಸ್ ಹೈದರಾಬಾದ್ : ನ್ಯೂ ಚಂಡೀಗಡ
ಏಪ್ರಿಲ್ 11: ಚೆನ್ನೆ – ಡೆಲ್ಲಿ ಕ್ಯಾಪಿಟಲ್ಸ್ ಚೆನ್ನೆ .
ಏಪ್ರಿಲ್ 12: ಲಕ್ನೋ- ಗುಜರಾತ್: ಲಕ್ನೋ
ಏಪ್ರಿಲ್ 12: ಮುಂಬೈ- ಆರ್ಸಿಬಿ ಮುಂಬೈ.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…