ಕ್ರೀಡೆ

ಐಪಿಎಲ್‌-23: ಜಿದ್ದಾಜಿದ್ದಿನ ಪಂದ್ಯದಲ್ಲಿ ಚೆನ್ನೈ ವಿರುದ್ಧ ಪಂಜಾಬ್ ಕಿಂಗ್ಸ್ ಜಯಭೇರಿ

ಚೆನ್ನೈ : ಇಲ್ಲಿನ ಎಂಎ ಚಿದಂಬರಂ ಸ್ಟೇಡಿಯಂ ನಲ್ಲಿ ಭಾನುವಾರ ನಡೆದ ಐಪಿಎಲ್ ನ ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 4 ವಿಕೆಟ್ ಗಳ ಜಯಭೇರಿ ಬಾರಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ ಸೂಪರ್ ಕಿಂಗ್ಸ್ 4 ವಿಕೆಟ್ ನಷ್ಟಕ್ಕೆ 200 ರನ್ ಗಳಿಸಿತು. ಡೆವೊನ್ ಕಾನ್ವೇ 92 ರನ್ (52 ಎಸೆತ) ಭರ್ಜರಿ ಆಟವಾಡಿದರು. ಋತುರಾಜ್ ಗಾಯಕ್ವಾಡ್ 37, ಶಿವಂ ದುಬೆ 28 ರನ್ ಗಳಿಸಿದರು.

ಪಂಜಾಬ್‌ ಪರ ಅರ್ಶ್‌ದೀಪ್‌ ಸಿಂಗ್‌, ಸ್ಯಾಮ್‌ ಕರನ್‌, ರಾಜಾ ಮತ್ತು ರಾಹುಲ್‌ ಚಾಹರ್‌ ತಲಾ 1 ವಿಕೆಟ್‌ ಪಡೆದರು.

ಚೆನ್ನೈ ನೀಡಿದ ಬೃಹತ್‌ ಗುರಿ ಬೆನ್ನಟ್ಟಿದ ಪಂಜಾಬ್ ಕೊನೆಯ ಓವರ್ ವರೆಗೆ ಹೋರಾಟ ಸಂಘಟಿಸಿ 6 ವಿಕೆಟ್ ನಷ್ಟಕ್ಕೆ 201 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ಕೊನೆಯ ಓವರ್ ನಲ್ಲಿ 9 ರನ್ ಗಳ ಅಗತ್ಯವಿತ್ತು. ಕ್ರೀಸ್ ನಲ್ಲಿದ್ದ ಸಿಕಂದರ್ ರಜಾ 13(7) ಗೆಲುವು ಸಾಧ್ಯವಾಗಿಸಿದರು.

ಕೊನೆಯ ಎಸೆತದಲ್ಲಿ ಮೂರು ರನ್ ಗಳ ಅಗತ್ಯವಿತ್ತು. ರಜಾ ಮೂರು ರನ್ ಗಳಿಸಿ ಗೆಲುವು ಸಾಧ್ಯವಾಗಿಸಿದರು. ಪ್ರಭಾಸಿಮ್ರಾನ್ ಸಿಂಗ್ 42, ನಾಯಕ ಶಿಖರ್ ಧವನ್ 28, ಲಿಯಾಮ್ ಲಿವಿಂಗ್ಸ್ಟೋನ್ 40, ಸ್ಯಾಮ್ ಕರ್ರಾನ್ 29, ಜಿತೇಶ್ ಶರ್ಮಾ 21 ರನ್ ಗಳ ಕೊಡುಗೆ ನೀಡಿ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದರು.

ಸಿಎಸ್‌ಕೆ ಪರ ತುಶಾರ್‌ ದೇಶ್‌ಪಾಂಡೆ 49ಕ್ಕೆ3 ಮತ್ತು ಜಡೇಜಾ 32ಕ್ಕೆ2 ಹೊರತಾಗಿ ಮತ್ತಾರು ಉತ್ತಮ ಪ್ರದರ್ಶನ ನೀಡಲಿಲ್ಲ.

ಪಂಜಾಬ್‌ ನ ಸಂಘಟಿತ ಹೋರಾಟದಿಂದಾಗಿ, ಚೆನ್ನೈ ತವರಿನಂಗಳದಲ್ಲಿ ಅತಿಹೆಚ್ಚು ರನ್‌ 201/6 ಚೇಸ್‌ ಮಾಡಿ ಗೆದ್ದ ತಂಡವಾಗಿ ಹೊರಹೊಮ್ಮಿತು.

ಪಂದ್ಯ ಶ್ರೇಷ್ಠ: ಡೆವೋನ್‌ ಕಾನ್ವೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

30 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago