ಕ್ರೀಡೆ

ಐಪಿಎಲ್‌-23: ಜಿದ್ದಾಜಿದ್ದಿನ ಪಂದ್ಯದಲ್ಲಿ ಚೆನ್ನೈ ವಿರುದ್ಧ ಪಂಜಾಬ್ ಕಿಂಗ್ಸ್ ಜಯಭೇರಿ

ಚೆನ್ನೈ : ಇಲ್ಲಿನ ಎಂಎ ಚಿದಂಬರಂ ಸ್ಟೇಡಿಯಂ ನಲ್ಲಿ ಭಾನುವಾರ ನಡೆದ ಐಪಿಎಲ್ ನ ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 4 ವಿಕೆಟ್ ಗಳ ಜಯಭೇರಿ ಬಾರಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ ಸೂಪರ್ ಕಿಂಗ್ಸ್ 4 ವಿಕೆಟ್ ನಷ್ಟಕ್ಕೆ 200 ರನ್ ಗಳಿಸಿತು. ಡೆವೊನ್ ಕಾನ್ವೇ 92 ರನ್ (52 ಎಸೆತ) ಭರ್ಜರಿ ಆಟವಾಡಿದರು. ಋತುರಾಜ್ ಗಾಯಕ್ವಾಡ್ 37, ಶಿವಂ ದುಬೆ 28 ರನ್ ಗಳಿಸಿದರು.

ಪಂಜಾಬ್‌ ಪರ ಅರ್ಶ್‌ದೀಪ್‌ ಸಿಂಗ್‌, ಸ್ಯಾಮ್‌ ಕರನ್‌, ರಾಜಾ ಮತ್ತು ರಾಹುಲ್‌ ಚಾಹರ್‌ ತಲಾ 1 ವಿಕೆಟ್‌ ಪಡೆದರು.

ಚೆನ್ನೈ ನೀಡಿದ ಬೃಹತ್‌ ಗುರಿ ಬೆನ್ನಟ್ಟಿದ ಪಂಜಾಬ್ ಕೊನೆಯ ಓವರ್ ವರೆಗೆ ಹೋರಾಟ ಸಂಘಟಿಸಿ 6 ವಿಕೆಟ್ ನಷ್ಟಕ್ಕೆ 201 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ಕೊನೆಯ ಓವರ್ ನಲ್ಲಿ 9 ರನ್ ಗಳ ಅಗತ್ಯವಿತ್ತು. ಕ್ರೀಸ್ ನಲ್ಲಿದ್ದ ಸಿಕಂದರ್ ರಜಾ 13(7) ಗೆಲುವು ಸಾಧ್ಯವಾಗಿಸಿದರು.

ಕೊನೆಯ ಎಸೆತದಲ್ಲಿ ಮೂರು ರನ್ ಗಳ ಅಗತ್ಯವಿತ್ತು. ರಜಾ ಮೂರು ರನ್ ಗಳಿಸಿ ಗೆಲುವು ಸಾಧ್ಯವಾಗಿಸಿದರು. ಪ್ರಭಾಸಿಮ್ರಾನ್ ಸಿಂಗ್ 42, ನಾಯಕ ಶಿಖರ್ ಧವನ್ 28, ಲಿಯಾಮ್ ಲಿವಿಂಗ್ಸ್ಟೋನ್ 40, ಸ್ಯಾಮ್ ಕರ್ರಾನ್ 29, ಜಿತೇಶ್ ಶರ್ಮಾ 21 ರನ್ ಗಳ ಕೊಡುಗೆ ನೀಡಿ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದರು.

ಸಿಎಸ್‌ಕೆ ಪರ ತುಶಾರ್‌ ದೇಶ್‌ಪಾಂಡೆ 49ಕ್ಕೆ3 ಮತ್ತು ಜಡೇಜಾ 32ಕ್ಕೆ2 ಹೊರತಾಗಿ ಮತ್ತಾರು ಉತ್ತಮ ಪ್ರದರ್ಶನ ನೀಡಲಿಲ್ಲ.

ಪಂಜಾಬ್‌ ನ ಸಂಘಟಿತ ಹೋರಾಟದಿಂದಾಗಿ, ಚೆನ್ನೈ ತವರಿನಂಗಳದಲ್ಲಿ ಅತಿಹೆಚ್ಚು ರನ್‌ 201/6 ಚೇಸ್‌ ಮಾಡಿ ಗೆದ್ದ ತಂಡವಾಗಿ ಹೊರಹೊಮ್ಮಿತು.

ಪಂದ್ಯ ಶ್ರೇಷ್ಠ: ಡೆವೋನ್‌ ಕಾನ್ವೆ.

andolanait

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

5 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

5 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

8 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

8 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

9 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

9 hours ago