ಕ್ರೀಡೆ

ಐಪಿಎಲ್‌-23: ಜಿದ್ದಾಜಿದ್ದಿನ ಪಂದ್ಯದಲ್ಲಿ ಚೆನ್ನೈ ವಿರುದ್ಧ ಪಂಜಾಬ್ ಕಿಂಗ್ಸ್ ಜಯಭೇರಿ

ಚೆನ್ನೈ : ಇಲ್ಲಿನ ಎಂಎ ಚಿದಂಬರಂ ಸ್ಟೇಡಿಯಂ ನಲ್ಲಿ ಭಾನುವಾರ ನಡೆದ ಐಪಿಎಲ್ ನ ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 4 ವಿಕೆಟ್ ಗಳ ಜಯಭೇರಿ ಬಾರಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ ಸೂಪರ್ ಕಿಂಗ್ಸ್ 4 ವಿಕೆಟ್ ನಷ್ಟಕ್ಕೆ 200 ರನ್ ಗಳಿಸಿತು. ಡೆವೊನ್ ಕಾನ್ವೇ 92 ರನ್ (52 ಎಸೆತ) ಭರ್ಜರಿ ಆಟವಾಡಿದರು. ಋತುರಾಜ್ ಗಾಯಕ್ವಾಡ್ 37, ಶಿವಂ ದುಬೆ 28 ರನ್ ಗಳಿಸಿದರು.

ಪಂಜಾಬ್‌ ಪರ ಅರ್ಶ್‌ದೀಪ್‌ ಸಿಂಗ್‌, ಸ್ಯಾಮ್‌ ಕರನ್‌, ರಾಜಾ ಮತ್ತು ರಾಹುಲ್‌ ಚಾಹರ್‌ ತಲಾ 1 ವಿಕೆಟ್‌ ಪಡೆದರು.

ಚೆನ್ನೈ ನೀಡಿದ ಬೃಹತ್‌ ಗುರಿ ಬೆನ್ನಟ್ಟಿದ ಪಂಜಾಬ್ ಕೊನೆಯ ಓವರ್ ವರೆಗೆ ಹೋರಾಟ ಸಂಘಟಿಸಿ 6 ವಿಕೆಟ್ ನಷ್ಟಕ್ಕೆ 201 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ಕೊನೆಯ ಓವರ್ ನಲ್ಲಿ 9 ರನ್ ಗಳ ಅಗತ್ಯವಿತ್ತು. ಕ್ರೀಸ್ ನಲ್ಲಿದ್ದ ಸಿಕಂದರ್ ರಜಾ 13(7) ಗೆಲುವು ಸಾಧ್ಯವಾಗಿಸಿದರು.

ಕೊನೆಯ ಎಸೆತದಲ್ಲಿ ಮೂರು ರನ್ ಗಳ ಅಗತ್ಯವಿತ್ತು. ರಜಾ ಮೂರು ರನ್ ಗಳಿಸಿ ಗೆಲುವು ಸಾಧ್ಯವಾಗಿಸಿದರು. ಪ್ರಭಾಸಿಮ್ರಾನ್ ಸಿಂಗ್ 42, ನಾಯಕ ಶಿಖರ್ ಧವನ್ 28, ಲಿಯಾಮ್ ಲಿವಿಂಗ್ಸ್ಟೋನ್ 40, ಸ್ಯಾಮ್ ಕರ್ರಾನ್ 29, ಜಿತೇಶ್ ಶರ್ಮಾ 21 ರನ್ ಗಳ ಕೊಡುಗೆ ನೀಡಿ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದರು.

ಸಿಎಸ್‌ಕೆ ಪರ ತುಶಾರ್‌ ದೇಶ್‌ಪಾಂಡೆ 49ಕ್ಕೆ3 ಮತ್ತು ಜಡೇಜಾ 32ಕ್ಕೆ2 ಹೊರತಾಗಿ ಮತ್ತಾರು ಉತ್ತಮ ಪ್ರದರ್ಶನ ನೀಡಲಿಲ್ಲ.

ಪಂಜಾಬ್‌ ನ ಸಂಘಟಿತ ಹೋರಾಟದಿಂದಾಗಿ, ಚೆನ್ನೈ ತವರಿನಂಗಳದಲ್ಲಿ ಅತಿಹೆಚ್ಚು ರನ್‌ 201/6 ಚೇಸ್‌ ಮಾಡಿ ಗೆದ್ದ ತಂಡವಾಗಿ ಹೊರಹೊಮ್ಮಿತು.

ಪಂದ್ಯ ಶ್ರೇಷ್ಠ: ಡೆವೋನ್‌ ಕಾನ್ವೆ.

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

6 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

6 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

6 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

6 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

6 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

6 hours ago