ಚೆನ್ನೈ : ಇಲ್ಲಿನ ಎಂಎ ಚಿದಂಬರಂ ಸ್ಟೇಡಿಯಂ ನಲ್ಲಿ ಭಾನುವಾರ ನಡೆದ ಐಪಿಎಲ್ ನ ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 4 ವಿಕೆಟ್ ಗಳ ಜಯಭೇರಿ ಬಾರಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ ಸೂಪರ್ ಕಿಂಗ್ಸ್ 4 ವಿಕೆಟ್ ನಷ್ಟಕ್ಕೆ 200 ರನ್ ಗಳಿಸಿತು. ಡೆವೊನ್ ಕಾನ್ವೇ 92 ರನ್ (52 ಎಸೆತ) ಭರ್ಜರಿ ಆಟವಾಡಿದರು. ಋತುರಾಜ್ ಗಾಯಕ್ವಾಡ್ 37, ಶಿವಂ ದುಬೆ 28 ರನ್ ಗಳಿಸಿದರು.
ಪಂಜಾಬ್ ಪರ ಅರ್ಶ್ದೀಪ್ ಸಿಂಗ್, ಸ್ಯಾಮ್ ಕರನ್, ರಾಜಾ ಮತ್ತು ರಾಹುಲ್ ಚಾಹರ್ ತಲಾ 1 ವಿಕೆಟ್ ಪಡೆದರು.
ಚೆನ್ನೈ ನೀಡಿದ ಬೃಹತ್ ಗುರಿ ಬೆನ್ನಟ್ಟಿದ ಪಂಜಾಬ್ ಕೊನೆಯ ಓವರ್ ವರೆಗೆ ಹೋರಾಟ ಸಂಘಟಿಸಿ 6 ವಿಕೆಟ್ ನಷ್ಟಕ್ಕೆ 201 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ಕೊನೆಯ ಓವರ್ ನಲ್ಲಿ 9 ರನ್ ಗಳ ಅಗತ್ಯವಿತ್ತು. ಕ್ರೀಸ್ ನಲ್ಲಿದ್ದ ಸಿಕಂದರ್ ರಜಾ 13(7) ಗೆಲುವು ಸಾಧ್ಯವಾಗಿಸಿದರು.
ಕೊನೆಯ ಎಸೆತದಲ್ಲಿ ಮೂರು ರನ್ ಗಳ ಅಗತ್ಯವಿತ್ತು. ರಜಾ ಮೂರು ರನ್ ಗಳಿಸಿ ಗೆಲುವು ಸಾಧ್ಯವಾಗಿಸಿದರು. ಪ್ರಭಾಸಿಮ್ರಾನ್ ಸಿಂಗ್ 42, ನಾಯಕ ಶಿಖರ್ ಧವನ್ 28, ಲಿಯಾಮ್ ಲಿವಿಂಗ್ಸ್ಟೋನ್ 40, ಸ್ಯಾಮ್ ಕರ್ರಾನ್ 29, ಜಿತೇಶ್ ಶರ್ಮಾ 21 ರನ್ ಗಳ ಕೊಡುಗೆ ನೀಡಿ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದರು.
ಸಿಎಸ್ಕೆ ಪರ ತುಶಾರ್ ದೇಶ್ಪಾಂಡೆ 49ಕ್ಕೆ3 ಮತ್ತು ಜಡೇಜಾ 32ಕ್ಕೆ2 ಹೊರತಾಗಿ ಮತ್ತಾರು ಉತ್ತಮ ಪ್ರದರ್ಶನ ನೀಡಲಿಲ್ಲ.
ಪಂಜಾಬ್ ನ ಸಂಘಟಿತ ಹೋರಾಟದಿಂದಾಗಿ, ಚೆನ್ನೈ ತವರಿನಂಗಳದಲ್ಲಿ ಅತಿಹೆಚ್ಚು ರನ್ 201/6 ಚೇಸ್ ಮಾಡಿ ಗೆದ್ದ ತಂಡವಾಗಿ ಹೊರಹೊಮ್ಮಿತು.
ಪಂದ್ಯ ಶ್ರೇಷ್ಠ: ಡೆವೋನ್ ಕಾನ್ವೆ.
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…