ಕ್ರೀಡೆ

IPL Auction 2024: ಶಹಬಾಜ್‌ ಅಹ್ಮದ್‌ ಕೈಬಿಟ್ಟು ಮಯಾಂಕ್‌ ಖರೀದಿಸಿದ ಆರ್‌ಸಿಬಿ

ಮುಂದಿನ ವರ್ಷ ನಡೆಯಲಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಆವೃತ್ತಿಗಾಗಿ ಎಲ್ಲಾ ತಂಡಗಳು ಈಗಿನಿಂದಲೇ ಸಿದ್ಧತೆಗಳನ್ನು ನಡೆಸಿಕೊಳ್ಳುತ್ತಿವೆ. ಡಿಸೆಂಬರ್‌ 19ರಂದು ದುಬೈನಲ್ಲಿ ಐಪಿಎಲ್‌ ಹರಾಜು ಪ್ರಕ್ರಿಯೆ ನಡೆಯಲಿದ್ದು ಇದಕ್ಕೂ ಮುನ್ನ ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ತಂಡದಿಂದ ಕೈಬಿಡಲಿದ್ದೇವೆ ಎಂಬ ವರದಿ ನೀಡಬೇಕಿದೆ.

ಇಂದು ( ನವೆಂಬರ್‌ 26 ) ಯಾವ ಆಟಗಾರರನ್ನು ಕೈಬಿಡಲಿದ್ದೇವೆ ಎಂಬುದನ್ನು ತಿಳಿಸಲು ಕೊನೆಯ ದಿನವಾಗಿದ್ದು, ಕೆಲ ತಂಡಗಳು ಆಟಗಾರ ಎಕ್ಸ್‌ಚೇಂಜ್‌ ಸಹ ಮಾಡಿಕೊಂಡಿವೆ. ಹೌದು, ಫ್ರಾಂಚೈಸಿಯೊಂದು ಇನ್ನೊಂದು ಫ್ರಾಂಚೈಸಿಯ ಸಮ್ಮತಿಯೊಂದಿಗೆ ತಮ್ಮ ತಂಡದಲ್ಲಿರುವ ಆಟಗಾರರನ್ನು ನೀಡಿ ಆ ತಂಡದ ಆಟಗಾರನನ್ನು ಖರೀದಿಸಬಹುದಾಗಿದೆ.

ಈ ನಿಯಮದ ಪ್ರಕಾರ ಇದೀಗ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿ ತಮ್ಮ ತಂಡದ ಶಹಬಾಜ್‌ ಅಹ್ಮದ್‌ ಅವರನ್ನು ಸನ್‌ ರೈಸರ್ಸ್‌ ಹೈದರಾಬಾದ್‌ ತಂಡಕ್ಕೆ ನೀಡಿ ಆ ತಂಡದಿಂದ ಮಯಾಂಕ್‌ ದಾಗರ್ ಅವರನ್ನು ಖರೀದಿಸಿದೆ. ಕಳೆದ ಬಾರಿಯ ಹರಾಜಿನಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡ ಮಯಾಂಕ್‌ ದಾಗರ್ ಅವರನ್ನು 1.8 ಕೋಟಿ ರೂಪಾಯಿಗಳಿಗೆ ಖರೀದಿಸಿತ್ತು ಹಾಗೂ ಶಹಬಾಜ್‌ ಅಹ್ಮದ್‌ ಅವರನ್ನು ಆರ್‌ಸಿಬಿ 2.4 ಕೋಟಿ ರೂಪಾಯಿಗೆ ಖರೀದಿ ಮಾಡಿತ್ತು. ಇನ್ನು ಮಯಾಂಕ್‌ ಈ ಬಾರಿಯ ಐಪಿಎಲ್‌ನಲ್ಲಿ ಮೂರು ಪಂದ್ಯಗಳನ್ನಾಡಿ ಹೇಳಿಕೊಳ್ಳುವಂತ ಪ್ರದರ್ಶನ ನೀಡಿರಲಿಲ್ಲ, ಶಹ್ಬಾಜ್‌ ಅಹ್ಮದ್‌ ಈ ಬಾರಿಯ ಐಪಿಎಲ್‌ನಲ್ಲಿ 10 ಪಂದ್ಯಗಳಲ್ಲಿ ಕಣಕ್ಕಿಳಿಯುವ ಅವಕಾಶ ಸಿಕ್ಕರೂ ಉತ್ತಮ ಪ್ರದರ್ಶನ ನೀಡಲಿಲ್ಲ.

andolana

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

3 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

3 hours ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

3 hours ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

3 hours ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

3 hours ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

4 hours ago