ಕ್ರೀಡೆ

IPL Auction 2024: ಶಹಬಾಜ್‌ ಅಹ್ಮದ್‌ ಕೈಬಿಟ್ಟು ಮಯಾಂಕ್‌ ಖರೀದಿಸಿದ ಆರ್‌ಸಿಬಿ

ಮುಂದಿನ ವರ್ಷ ನಡೆಯಲಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಆವೃತ್ತಿಗಾಗಿ ಎಲ್ಲಾ ತಂಡಗಳು ಈಗಿನಿಂದಲೇ ಸಿದ್ಧತೆಗಳನ್ನು ನಡೆಸಿಕೊಳ್ಳುತ್ತಿವೆ. ಡಿಸೆಂಬರ್‌ 19ರಂದು ದುಬೈನಲ್ಲಿ ಐಪಿಎಲ್‌ ಹರಾಜು ಪ್ರಕ್ರಿಯೆ ನಡೆಯಲಿದ್ದು ಇದಕ್ಕೂ ಮುನ್ನ ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ತಂಡದಿಂದ ಕೈಬಿಡಲಿದ್ದೇವೆ ಎಂಬ ವರದಿ ನೀಡಬೇಕಿದೆ.

ಇಂದು ( ನವೆಂಬರ್‌ 26 ) ಯಾವ ಆಟಗಾರರನ್ನು ಕೈಬಿಡಲಿದ್ದೇವೆ ಎಂಬುದನ್ನು ತಿಳಿಸಲು ಕೊನೆಯ ದಿನವಾಗಿದ್ದು, ಕೆಲ ತಂಡಗಳು ಆಟಗಾರ ಎಕ್ಸ್‌ಚೇಂಜ್‌ ಸಹ ಮಾಡಿಕೊಂಡಿವೆ. ಹೌದು, ಫ್ರಾಂಚೈಸಿಯೊಂದು ಇನ್ನೊಂದು ಫ್ರಾಂಚೈಸಿಯ ಸಮ್ಮತಿಯೊಂದಿಗೆ ತಮ್ಮ ತಂಡದಲ್ಲಿರುವ ಆಟಗಾರರನ್ನು ನೀಡಿ ಆ ತಂಡದ ಆಟಗಾರನನ್ನು ಖರೀದಿಸಬಹುದಾಗಿದೆ.

ಈ ನಿಯಮದ ಪ್ರಕಾರ ಇದೀಗ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿ ತಮ್ಮ ತಂಡದ ಶಹಬಾಜ್‌ ಅಹ್ಮದ್‌ ಅವರನ್ನು ಸನ್‌ ರೈಸರ್ಸ್‌ ಹೈದರಾಬಾದ್‌ ತಂಡಕ್ಕೆ ನೀಡಿ ಆ ತಂಡದಿಂದ ಮಯಾಂಕ್‌ ದಾಗರ್ ಅವರನ್ನು ಖರೀದಿಸಿದೆ. ಕಳೆದ ಬಾರಿಯ ಹರಾಜಿನಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡ ಮಯಾಂಕ್‌ ದಾಗರ್ ಅವರನ್ನು 1.8 ಕೋಟಿ ರೂಪಾಯಿಗಳಿಗೆ ಖರೀದಿಸಿತ್ತು ಹಾಗೂ ಶಹಬಾಜ್‌ ಅಹ್ಮದ್‌ ಅವರನ್ನು ಆರ್‌ಸಿಬಿ 2.4 ಕೋಟಿ ರೂಪಾಯಿಗೆ ಖರೀದಿ ಮಾಡಿತ್ತು. ಇನ್ನು ಮಯಾಂಕ್‌ ಈ ಬಾರಿಯ ಐಪಿಎಲ್‌ನಲ್ಲಿ ಮೂರು ಪಂದ್ಯಗಳನ್ನಾಡಿ ಹೇಳಿಕೊಳ್ಳುವಂತ ಪ್ರದರ್ಶನ ನೀಡಿರಲಿಲ್ಲ, ಶಹ್ಬಾಜ್‌ ಅಹ್ಮದ್‌ ಈ ಬಾರಿಯ ಐಪಿಎಲ್‌ನಲ್ಲಿ 10 ಪಂದ್ಯಗಳಲ್ಲಿ ಕಣಕ್ಕಿಳಿಯುವ ಅವಕಾಶ ಸಿಕ್ಕರೂ ಉತ್ತಮ ಪ್ರದರ್ಶನ ನೀಡಲಿಲ್ಲ.

andolana

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

1 hour ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

1 hour ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

2 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

2 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

2 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

2 hours ago