ಕ್ರೀಡೆ

IPL Auction 2024: ಶಹಬಾಜ್‌ ಅಹ್ಮದ್‌ ಕೈಬಿಟ್ಟು ಮಯಾಂಕ್‌ ಖರೀದಿಸಿದ ಆರ್‌ಸಿಬಿ

ಮುಂದಿನ ವರ್ಷ ನಡೆಯಲಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಆವೃತ್ತಿಗಾಗಿ ಎಲ್ಲಾ ತಂಡಗಳು ಈಗಿನಿಂದಲೇ ಸಿದ್ಧತೆಗಳನ್ನು ನಡೆಸಿಕೊಳ್ಳುತ್ತಿವೆ. ಡಿಸೆಂಬರ್‌ 19ರಂದು ದುಬೈನಲ್ಲಿ ಐಪಿಎಲ್‌ ಹರಾಜು ಪ್ರಕ್ರಿಯೆ ನಡೆಯಲಿದ್ದು ಇದಕ್ಕೂ ಮುನ್ನ ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ತಂಡದಿಂದ ಕೈಬಿಡಲಿದ್ದೇವೆ ಎಂಬ ವರದಿ ನೀಡಬೇಕಿದೆ.

ಇಂದು ( ನವೆಂಬರ್‌ 26 ) ಯಾವ ಆಟಗಾರರನ್ನು ಕೈಬಿಡಲಿದ್ದೇವೆ ಎಂಬುದನ್ನು ತಿಳಿಸಲು ಕೊನೆಯ ದಿನವಾಗಿದ್ದು, ಕೆಲ ತಂಡಗಳು ಆಟಗಾರ ಎಕ್ಸ್‌ಚೇಂಜ್‌ ಸಹ ಮಾಡಿಕೊಂಡಿವೆ. ಹೌದು, ಫ್ರಾಂಚೈಸಿಯೊಂದು ಇನ್ನೊಂದು ಫ್ರಾಂಚೈಸಿಯ ಸಮ್ಮತಿಯೊಂದಿಗೆ ತಮ್ಮ ತಂಡದಲ್ಲಿರುವ ಆಟಗಾರರನ್ನು ನೀಡಿ ಆ ತಂಡದ ಆಟಗಾರನನ್ನು ಖರೀದಿಸಬಹುದಾಗಿದೆ.

ಈ ನಿಯಮದ ಪ್ರಕಾರ ಇದೀಗ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿ ತಮ್ಮ ತಂಡದ ಶಹಬಾಜ್‌ ಅಹ್ಮದ್‌ ಅವರನ್ನು ಸನ್‌ ರೈಸರ್ಸ್‌ ಹೈದರಾಬಾದ್‌ ತಂಡಕ್ಕೆ ನೀಡಿ ಆ ತಂಡದಿಂದ ಮಯಾಂಕ್‌ ದಾಗರ್ ಅವರನ್ನು ಖರೀದಿಸಿದೆ. ಕಳೆದ ಬಾರಿಯ ಹರಾಜಿನಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡ ಮಯಾಂಕ್‌ ದಾಗರ್ ಅವರನ್ನು 1.8 ಕೋಟಿ ರೂಪಾಯಿಗಳಿಗೆ ಖರೀದಿಸಿತ್ತು ಹಾಗೂ ಶಹಬಾಜ್‌ ಅಹ್ಮದ್‌ ಅವರನ್ನು ಆರ್‌ಸಿಬಿ 2.4 ಕೋಟಿ ರೂಪಾಯಿಗೆ ಖರೀದಿ ಮಾಡಿತ್ತು. ಇನ್ನು ಮಯಾಂಕ್‌ ಈ ಬಾರಿಯ ಐಪಿಎಲ್‌ನಲ್ಲಿ ಮೂರು ಪಂದ್ಯಗಳನ್ನಾಡಿ ಹೇಳಿಕೊಳ್ಳುವಂತ ಪ್ರದರ್ಶನ ನೀಡಿರಲಿಲ್ಲ, ಶಹ್ಬಾಜ್‌ ಅಹ್ಮದ್‌ ಈ ಬಾರಿಯ ಐಪಿಎಲ್‌ನಲ್ಲಿ 10 ಪಂದ್ಯಗಳಲ್ಲಿ ಕಣಕ್ಕಿಳಿಯುವ ಅವಕಾಶ ಸಿಕ್ಕರೂ ಉತ್ತಮ ಪ್ರದರ್ಶನ ನೀಡಲಿಲ್ಲ.

andolana

Recent Posts

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

11 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

35 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

54 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

2 hours ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

5 hours ago