ಕ್ರೀಡೆ

IPL Auction 2024: ಶಹಬಾಜ್‌ ಅಹ್ಮದ್‌ ಕೈಬಿಟ್ಟು ಮಯಾಂಕ್‌ ಖರೀದಿಸಿದ ಆರ್‌ಸಿಬಿ

ಮುಂದಿನ ವರ್ಷ ನಡೆಯಲಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಆವೃತ್ತಿಗಾಗಿ ಎಲ್ಲಾ ತಂಡಗಳು ಈಗಿನಿಂದಲೇ ಸಿದ್ಧತೆಗಳನ್ನು ನಡೆಸಿಕೊಳ್ಳುತ್ತಿವೆ. ಡಿಸೆಂಬರ್‌ 19ರಂದು ದುಬೈನಲ್ಲಿ ಐಪಿಎಲ್‌ ಹರಾಜು ಪ್ರಕ್ರಿಯೆ ನಡೆಯಲಿದ್ದು ಇದಕ್ಕೂ ಮುನ್ನ ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ತಂಡದಿಂದ ಕೈಬಿಡಲಿದ್ದೇವೆ ಎಂಬ ವರದಿ ನೀಡಬೇಕಿದೆ.

ಇಂದು ( ನವೆಂಬರ್‌ 26 ) ಯಾವ ಆಟಗಾರರನ್ನು ಕೈಬಿಡಲಿದ್ದೇವೆ ಎಂಬುದನ್ನು ತಿಳಿಸಲು ಕೊನೆಯ ದಿನವಾಗಿದ್ದು, ಕೆಲ ತಂಡಗಳು ಆಟಗಾರ ಎಕ್ಸ್‌ಚೇಂಜ್‌ ಸಹ ಮಾಡಿಕೊಂಡಿವೆ. ಹೌದು, ಫ್ರಾಂಚೈಸಿಯೊಂದು ಇನ್ನೊಂದು ಫ್ರಾಂಚೈಸಿಯ ಸಮ್ಮತಿಯೊಂದಿಗೆ ತಮ್ಮ ತಂಡದಲ್ಲಿರುವ ಆಟಗಾರರನ್ನು ನೀಡಿ ಆ ತಂಡದ ಆಟಗಾರನನ್ನು ಖರೀದಿಸಬಹುದಾಗಿದೆ.

ಈ ನಿಯಮದ ಪ್ರಕಾರ ಇದೀಗ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿ ತಮ್ಮ ತಂಡದ ಶಹಬಾಜ್‌ ಅಹ್ಮದ್‌ ಅವರನ್ನು ಸನ್‌ ರೈಸರ್ಸ್‌ ಹೈದರಾಬಾದ್‌ ತಂಡಕ್ಕೆ ನೀಡಿ ಆ ತಂಡದಿಂದ ಮಯಾಂಕ್‌ ದಾಗರ್ ಅವರನ್ನು ಖರೀದಿಸಿದೆ. ಕಳೆದ ಬಾರಿಯ ಹರಾಜಿನಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡ ಮಯಾಂಕ್‌ ದಾಗರ್ ಅವರನ್ನು 1.8 ಕೋಟಿ ರೂಪಾಯಿಗಳಿಗೆ ಖರೀದಿಸಿತ್ತು ಹಾಗೂ ಶಹಬಾಜ್‌ ಅಹ್ಮದ್‌ ಅವರನ್ನು ಆರ್‌ಸಿಬಿ 2.4 ಕೋಟಿ ರೂಪಾಯಿಗೆ ಖರೀದಿ ಮಾಡಿತ್ತು. ಇನ್ನು ಮಯಾಂಕ್‌ ಈ ಬಾರಿಯ ಐಪಿಎಲ್‌ನಲ್ಲಿ ಮೂರು ಪಂದ್ಯಗಳನ್ನಾಡಿ ಹೇಳಿಕೊಳ್ಳುವಂತ ಪ್ರದರ್ಶನ ನೀಡಿರಲಿಲ್ಲ, ಶಹ್ಬಾಜ್‌ ಅಹ್ಮದ್‌ ಈ ಬಾರಿಯ ಐಪಿಎಲ್‌ನಲ್ಲಿ 10 ಪಂದ್ಯಗಳಲ್ಲಿ ಕಣಕ್ಕಿಳಿಯುವ ಅವಕಾಶ ಸಿಕ್ಕರೂ ಉತ್ತಮ ಪ್ರದರ್ಶನ ನೀಡಲಿಲ್ಲ.

andolana

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

30 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

33 mins ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

35 mins ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

37 mins ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

40 mins ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

44 mins ago