ಮುಂದಿನ ವರ್ಷ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಗಾಗಿ ಎಲ್ಲಾ ತಂಡಗಳು ಈಗಿನಿಂದಲೇ ಸಿದ್ಧತೆಗಳನ್ನು ನಡೆಸಿಕೊಳ್ಳುತ್ತಿವೆ. ಡಿಸೆಂಬರ್ 19ರಂದು ದುಬೈನಲ್ಲಿ ಐಪಿಎಲ್ ಹರಾಜು ಪ್ರಕ್ರಿಯೆ ನಡೆಯಲಿದ್ದು ಇದಕ್ಕೂ ಮುನ್ನ ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ತಂಡದಿಂದ ಕೈಬಿಡಲಿದ್ದೇವೆ ಎಂಬ ವರದಿ ನೀಡಬೇಕಿದೆ.
ಇಂದು ( ನವೆಂಬರ್ 26 ) ಯಾವ ಆಟಗಾರರನ್ನು ಕೈಬಿಡಲಿದ್ದೇವೆ ಎಂಬುದನ್ನು ತಿಳಿಸಲು ಕೊನೆಯ ದಿನವಾಗಿದ್ದು, ಕೆಲ ತಂಡಗಳು ಆಟಗಾರ ಎಕ್ಸ್ಚೇಂಜ್ ಸಹ ಮಾಡಿಕೊಂಡಿವೆ. ಹೌದು, ಫ್ರಾಂಚೈಸಿಯೊಂದು ಇನ್ನೊಂದು ಫ್ರಾಂಚೈಸಿಯ ಸಮ್ಮತಿಯೊಂದಿಗೆ ತಮ್ಮ ತಂಡದಲ್ಲಿರುವ ಆಟಗಾರರನ್ನು ನೀಡಿ ಆ ತಂಡದ ಆಟಗಾರನನ್ನು ಖರೀದಿಸಬಹುದಾಗಿದೆ.
ಈ ನಿಯಮದ ಪ್ರಕಾರ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತಮ್ಮ ತಂಡದ ಶಹಬಾಜ್ ಅಹ್ಮದ್ ಅವರನ್ನು ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ನೀಡಿ ಆ ತಂಡದಿಂದ ಮಯಾಂಕ್ ದಾಗರ್ ಅವರನ್ನು ಖರೀದಿಸಿದೆ. ಕಳೆದ ಬಾರಿಯ ಹರಾಜಿನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಮಯಾಂಕ್ ದಾಗರ್ ಅವರನ್ನು 1.8 ಕೋಟಿ ರೂಪಾಯಿಗಳಿಗೆ ಖರೀದಿಸಿತ್ತು ಹಾಗೂ ಶಹಬಾಜ್ ಅಹ್ಮದ್ ಅವರನ್ನು ಆರ್ಸಿಬಿ 2.4 ಕೋಟಿ ರೂಪಾಯಿಗೆ ಖರೀದಿ ಮಾಡಿತ್ತು. ಇನ್ನು ಮಯಾಂಕ್ ಈ ಬಾರಿಯ ಐಪಿಎಲ್ನಲ್ಲಿ ಮೂರು ಪಂದ್ಯಗಳನ್ನಾಡಿ ಹೇಳಿಕೊಳ್ಳುವಂತ ಪ್ರದರ್ಶನ ನೀಡಿರಲಿಲ್ಲ, ಶಹ್ಬಾಜ್ ಅಹ್ಮದ್ ಈ ಬಾರಿಯ ಐಪಿಎಲ್ನಲ್ಲಿ 10 ಪಂದ್ಯಗಳಲ್ಲಿ ಕಣಕ್ಕಿಳಿಯುವ ಅವಕಾಶ ಸಿಕ್ಕರೂ ಉತ್ತಮ ಪ್ರದರ್ಶನ ನೀಡಲಿಲ್ಲ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…