ಕ್ರೀಡೆ

IPL Auction 2024: ಶಹಬಾಜ್‌ ಅಹ್ಮದ್‌ ಕೈಬಿಟ್ಟು ಮಯಾಂಕ್‌ ಖರೀದಿಸಿದ ಆರ್‌ಸಿಬಿ

ಮುಂದಿನ ವರ್ಷ ನಡೆಯಲಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಆವೃತ್ತಿಗಾಗಿ ಎಲ್ಲಾ ತಂಡಗಳು ಈಗಿನಿಂದಲೇ ಸಿದ್ಧತೆಗಳನ್ನು ನಡೆಸಿಕೊಳ್ಳುತ್ತಿವೆ. ಡಿಸೆಂಬರ್‌ 19ರಂದು ದುಬೈನಲ್ಲಿ ಐಪಿಎಲ್‌ ಹರಾಜು ಪ್ರಕ್ರಿಯೆ ನಡೆಯಲಿದ್ದು ಇದಕ್ಕೂ ಮುನ್ನ ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ತಂಡದಿಂದ ಕೈಬಿಡಲಿದ್ದೇವೆ ಎಂಬ ವರದಿ ನೀಡಬೇಕಿದೆ.

ಇಂದು ( ನವೆಂಬರ್‌ 26 ) ಯಾವ ಆಟಗಾರರನ್ನು ಕೈಬಿಡಲಿದ್ದೇವೆ ಎಂಬುದನ್ನು ತಿಳಿಸಲು ಕೊನೆಯ ದಿನವಾಗಿದ್ದು, ಕೆಲ ತಂಡಗಳು ಆಟಗಾರ ಎಕ್ಸ್‌ಚೇಂಜ್‌ ಸಹ ಮಾಡಿಕೊಂಡಿವೆ. ಹೌದು, ಫ್ರಾಂಚೈಸಿಯೊಂದು ಇನ್ನೊಂದು ಫ್ರಾಂಚೈಸಿಯ ಸಮ್ಮತಿಯೊಂದಿಗೆ ತಮ್ಮ ತಂಡದಲ್ಲಿರುವ ಆಟಗಾರರನ್ನು ನೀಡಿ ಆ ತಂಡದ ಆಟಗಾರನನ್ನು ಖರೀದಿಸಬಹುದಾಗಿದೆ.

ಈ ನಿಯಮದ ಪ್ರಕಾರ ಇದೀಗ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿ ತಮ್ಮ ತಂಡದ ಶಹಬಾಜ್‌ ಅಹ್ಮದ್‌ ಅವರನ್ನು ಸನ್‌ ರೈಸರ್ಸ್‌ ಹೈದರಾಬಾದ್‌ ತಂಡಕ್ಕೆ ನೀಡಿ ಆ ತಂಡದಿಂದ ಮಯಾಂಕ್‌ ದಾಗರ್ ಅವರನ್ನು ಖರೀದಿಸಿದೆ. ಕಳೆದ ಬಾರಿಯ ಹರಾಜಿನಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡ ಮಯಾಂಕ್‌ ದಾಗರ್ ಅವರನ್ನು 1.8 ಕೋಟಿ ರೂಪಾಯಿಗಳಿಗೆ ಖರೀದಿಸಿತ್ತು ಹಾಗೂ ಶಹಬಾಜ್‌ ಅಹ್ಮದ್‌ ಅವರನ್ನು ಆರ್‌ಸಿಬಿ 2.4 ಕೋಟಿ ರೂಪಾಯಿಗೆ ಖರೀದಿ ಮಾಡಿತ್ತು. ಇನ್ನು ಮಯಾಂಕ್‌ ಈ ಬಾರಿಯ ಐಪಿಎಲ್‌ನಲ್ಲಿ ಮೂರು ಪಂದ್ಯಗಳನ್ನಾಡಿ ಹೇಳಿಕೊಳ್ಳುವಂತ ಪ್ರದರ್ಶನ ನೀಡಿರಲಿಲ್ಲ, ಶಹ್ಬಾಜ್‌ ಅಹ್ಮದ್‌ ಈ ಬಾರಿಯ ಐಪಿಎಲ್‌ನಲ್ಲಿ 10 ಪಂದ್ಯಗಳಲ್ಲಿ ಕಣಕ್ಕಿಳಿಯುವ ಅವಕಾಶ ಸಿಕ್ಕರೂ ಉತ್ತಮ ಪ್ರದರ್ಶನ ನೀಡಲಿಲ್ಲ.

andolana

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

8 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

11 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

11 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

15 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago