Categories: ಕ್ರೀಡೆ

IPL| ಮುಂದಿನ 3 ಐಪಿಎಲ್‌ ಟೂರ್ನಿ ದಿನಾಂಕ ಪ್ರಕಟಿಸಿದ ಬಿಸಿಸಿಐ

ಹೊಸದಿಲ್ಲಿ: ಈ ಬಾರಿಯ ಐಪಿಎಲ್‌ ಟೂರ್ನಿ ಸೇರಿದಂತೆ ಮುಂದಿನ ಎರಡು ವರ್ಷಗಳ ಐಪಿಎಲ್‌ ಟೂರ್ನಿಯ(2026 ಮತ್ತು 2027) ದಿನಾಂಕವನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯು(ಬಿಸಿಸಿಐ) ಶುಕ್ರವಾರ ಪ್ರಕಟಿಸಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಮೂರು ಟೂರ್ನಿಗಳ ದಿನಾಂಕ ಪ್ರಕಟಿಸಿದೆ.

2025ರ ಐಪಿಎಲ್‌ ಟೂರ್ನಿಯು ಮಾರ್ಚ್‌ 14ರಿಂದ ಮೇ 25ರವರೆಗೆ ನಡೆಯಲಿದೆ. 2026 ಮತ್ತು 2027ರ ಐಪಿಎಲ್‌ ಟೂರ್ನಿಯು ಮಾರ್ಚ್‌ ತಿಂಗಳ 14 ಹಾಗೂ 15 ರಂದು ಆರಂಭವಾಗಲಿದೆ ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ಹೇಳಿದೆ.

ಈ ಬಾರಿಯ ಐಪಿಎಲ್‌ ಟೂರ್ನಿಯ ಹರಾಜು ನ.24ರ ಭಾನುವಾರದಿಂದ ಸೌದಿ ಅರೇಬಿಯಾದ ಜೆದ್ದಾದಲ್ಲಿ ನಡೆಯಲಿದ್ದು, ಈ ಹರಾಜಿನಲ್ಲಿ ದೇಶಿ ಹಾಗೂ ವಿದೇಶಿ ಆಟಗಾರರು ಭಾಗವಹಿಸಲಿದ್ದಾರೆ.

ಈ ಬಾರಿಯ ಐಪಿಎಲ್‌ ಬಿಡ್ಡಿಂಗ್‌ನಲ್ಲಿ 1500ಕ್ಕೂ ಹೆಚ್ಚು ಆಟಗಾರರು ನೊಂದಾಯಿಸಿಕೊಂಡಿದ್ದು, ಫ್ರಾಂಚೈಸಿಗಳ ಅನಿಸಿಕೆಯ ನಂತರ ಶಾರ್ಟ್‌ಲೀಸ್ಟ್‌ ಮೂಲಕ ಈ ಸಂಖ್ಯೆಯನ್ನು 574 ಕ್ಕೆ ಇಳಿಸಲಾಗಿದೆ. ಇದರಲ್ಲಿ 366 ದೇಶಿ ಹಾಗೂ 208 ವಿದೇಶಿ ಆಟಗಾರರು ಇದ್ದಾರೆ. ಈ ಹರಾಜಿನಲ್ಲಿ 204 ಸ್ಲಾಟ್‌ಗಳನ್ನು ಫಿಲ್‌ ಮಾಡಲಿದ್ದು, 70 ವಿದೇಶಿ ಆಟಗಾರರು ಹರಾಜು ಆಗಬೇಕಿದೆ.

ಈ ಬಾರಿಯ ಐಪಿಎಲ್‌ ಬಿಡ್‌ನಲ್ಲಿ ಬೆನ್‌ ಸ್ಟೋಕ್ಸ್‌ ಅವರ ಹೆಸರು ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಆದರೆ ಜೇಮ್ಸ್‌ ಆಂಡರ್ಸನ್‌, ಅಮೇರಿಕಾದ ವೇಗದ ಬೌಲರ್‌ ಸೌರಭ್‌ ನೇತ್ರಾವಲ್ಕರ್‌, ಇಟಲಿಯ ವೇಗಿ ಥಾಮಸ್‌ ಡಾಕ್ರಾ ಅವರ ಹೆಸರು ಪಟ್ಟಿಯಲ್ಲಿ ಇದೆ.

ರೂ 2 ಕೋಟಿ ಮೂಲಬೆಲೆಯಲ್ಲಿ ಭಾರತದ ಆಟಗಾರರಾದ ರಿ಼ಷಭ್‌ ಪಂತ್‌, ಶ್ರೇಯಸ್‌ ಅಯ್ಯರ್‌, ಕೆ.ಎಲ್.ರಾಹುಲ್‌, ಆರ್‌. ಅಶ್ವಿನ್, ಯಜುವೇಂದ್ರ ಚಾಹಲ್‌, ಮುಹಮ್ಮದ್‌ ಶಮಿ, ಸಿರಾಜ್‌, ಭುವನೇಶ್ವರ್‌ ಕುಮಾರ್ ಮುಂತಾದವರು ಇದ್ದಾರೆ.‌

ರೂ 75 ಲಕ್ಷ ಮೂಲಬೆಲೆಯಲ್ಲಿ ಸರ್ಫರಾಜ್‌ ಖಾನ್‌ ಮತ್ತು ಪೃಥ್ವಿ ಶಾ ತಮ್ಮ ಹೆಸರು ನೊಂದಾಯಿಸಿಕೊಂಡಿದ್ದು, ಹಿಂದಿನ ಐಪಿಎಲ್‌ನಲ್ಲಿ ʼಅನ್‌ಸೋಲ್ಡ್‌ʼ ಆಗಿದ್ದರು.

ಬಿಡ್ಡಿಂಗ್‌ಗೆ ಅತಿ ಹೆಚ್ಚು ಹಣ ಉಳಿಸಿಕೊಂಡಿರುವ ತಂಡ
ಈ ಬಾರಿಯ ಐಪಿಎಲ್ ಹರಾಜಿನಲ್ಲಿ, ಇಬ್ಬರು ಅನ್‌ಕ್ಯಾಪ್ಡ್‌ ಆಟಗಾರರಿಗೆ ರೂ9.5 ಕೋಟಿ ನೀಡಿಲಾಗಿದೆ.  ಇನ್ನೂ 110 ಕೋಟಿ ರೂಪಾಯಿಗಳನ್ನು ಉಳಿಸಿಕೊಳ್ಳುವ ಮೂಲಕ ಪಂಜಾಬ್‌ ಅತ್ಯಂತ ಶ್ರೀಮಂತ ತಂಡ ಎನಿಸಿಕೊಂಡಿದೆ. ಈ ವೇಳೆ 4 ಆರ್‌ಟಿಎಂ ಕಾರ್ಡ್‌ ಬಳಸಬಹುದಾಗಿದೆ.

ಆರ್‌ಸಿಬಿ 3 ಆಟಗಾರರಿಗೆ 37 ಕೋಟಿ ನೀಡಿದ್ದು, 83 ಕೋಟಿ ರೂಪಾಯಿ ಮೂಲಕ ಆರ್‌ಸಿಬಿ ಬಿಡ್ಡಿಂಗ್‌ ಪ್ರವೇಶಿಸಲಿದೆ. ಇದರ ಬಳಿ 3 ಆರ್‌ಟಿಎಂ ಕಾರ್ಡ್‌ಗಳಿವೆ.

ಡೆಲ್ಲಿ ಕ್ಯಾಪಿಟಲ್ಸ್‌ 73 ಕೋಟಿ ಉಳಿಸಿಕೊಂಡಿದೆ. ಉಳಿದಂತೆ ಗುಜರಾತ್‌ 69 ಕೋಟಿ, ಚೆನ್ನೈ 55 ಕೋಟಿ, ಮುಂಬೈ 45 ಕೋಟಿ, ಸನ್‌ ರೈಸರ್ಸ್‌ ಹೈದರಾಬಾದ್‌ 45 ಕೋಟಿಗಳನ್ನು ಉಳಸಿಕೊಳ್ಳುವ ಮೂಲಕ ಬಿಡ್ಡಂಗ್‌ನಲ್ಲಿ ಪಾಳ್ಗೊಳ್ಳಲು ಕಾತರವಾಗಿವೆ.

ರಾಜಸ್ಥಾನ ಮತ್ತು ಕೆಕೆಆರ್‌ ತಂಡಗಳು 41 ಕೋಟಿ ಮತ್ತು 51 ಕೋಟಿ ರೂಪಾಯಿ ಮಾತ್ರ ಬಿಡ್ಡಿಂಗ್‌ನಲ್ಲಿ ಬಳಸಬಹುದಾಗಿದ್ದು, ಬಿಸಿಸಿಐ ಹೇಳಿದ ಆರೂ ಸ್ಥಾನಗಳನನ್ನು ಭರ್ತಿಮಾಡಿಕೊಂಡ ತಂಡಗಳಾಗಿವೆ. ಇವರ ಬಳಿ ಯಾವುದೇ ಆರ್‌ಟಿಎಂ ಕಾರ್ಡ್‌ಗಳಿಲ್ಲ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

2 hours ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

2 hours ago

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

2 hours ago

ಓದುಗರ ಪತ್ರ: ಮರದ ಕೆಳಗಿರುವ ವಿದ್ಯುತ್ ಕೇಬಲ್ ತೆರವುಗೊಳಿಸಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್‌ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…

2 hours ago

ಝೆನ್‌ ಕತೆಗಳು: ಸೀಜೋಳ ನಿಜವಾದ ಆತ್ಮ ಯಾವುದು?

ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ  ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…

2 hours ago

ಎಸ್‌ಐಆರ್: ಶೇ.64.09ರಷ್ಟು ನಮೂನೆಗಳ ವಿತರಣೆ

ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…

2 hours ago